Advertisement
MIRROR FOCUS

ಪರಿಸರ ದಿನಕ್ಕೊಂದು ನಮನ | ಹಸಿರಾಗಲಿ ಪರಿಸರ…. ಹಸಿರಾಗಿರಲಿ ಮನಸು….

Share
ಎರಡು ಸುಂದರವಾದ ದೃಶ್ಯ ಗಳ ಚಿತ್ರಣ.‌ ವ್ಯತ್ಯಾಸ ಇಷ್ಟೇ,  ಒಂದು ಹಳ್ಳಿಪ್ರದೇಶದ್ದು, ಇನ್ನೊಂದು  ನಗರ ಪ್ರದೇಶದ್ದು.  ನೋಡಲು ಎರಡು ಚೆಂದವೇ . ಆದರೆ ಮನಸಿಗೆ ಆಪ್ತವಾಗುವುದು  ಹಸಿರಿನ ಹಳ್ಳಿ ಚಿತ್ರವೇ.
ಪರಿಸರ ನಮಗೇನೆಲ್ಲಾ ಕೊಟ್ಟಿದೆ. ತನ್ನೊಳಗಿರುವುದನ್ನೇಲ್ಲಾ ಬಗೆಬಗೆದೇ ಕೊಟ್ಟಾಗಿದೆ. ಶುದ್ಧ ಗಾಳಿ, ನೀರು, ಫಲವತ್ತಾದ ಮಣ್ಣು ಎಲ್ಲವನ್ನೂ  ನಮಗೆ ಕೊಟ್ಟಿದೆ. ಇದರ ಮಡಿಲಲ್ಲಿ ನಮ್ಮನ್ನು ಮಕ್ಕಳಂತೆ ಸಲಹುತ್ತಿದೆ.  ಆದರೆ ನಾವು ಕೊಟ್ಟದ್ದಾದರೂ ಏನು?   ಬರೀ ನೋವನ್ನು.   ನಮ್ಮ ಸುಂದರ ಪರಿಸರ  ನಿರಂತರ ದಬ್ಬಾಳಿಕೆಗೆ  ನಲುಗಿ ಹೋಗಿದೆ.  ಯಾವ ರೀತಿ ರೀತಿ ಎಲ್ಲಾ ಸಾದ್ಯವೋ ಆ ರೀತಿಯೆಲ್ಲಾ  ಉಪಯೋಗಿಸಿ ಕೊಂಡಿದ್ದೇವೆ.  ಒಂದೇ ಎರಡೇ ಹಲವು ರೀತಿಯ ಮಾಲಿನ್ಯಗಳು ನಿಯಂತ್ರಣ ಮೀರಿ  ನಡೆಯುತ್ತಿದೆ. ವಾಯು, ಜಲ, ಶಬ್ದ ಮಾಲಿನ್ಯ ಗಳು ಸೇರಿ ಪರಿಸರವನ್ನು ಹಾಳುಗೆಡವುತ್ತಿದ್ದೇವೆ.  ಇದರ ಕುರಿತು ಜಾಗೃತಿ ಮೂಡಿಸುವ  ಸಲುವಾಗಿ ವಿಶ್ವದಾದ್ಯಂತ ಜೂನ್ 5 ರಂದು   ‘ವಿಶ್ವ ಪರಿಸರ ದಿನ’ ವೆಂದು ಆಚರಿಸಲಾಗುತ್ತದೆ.  1974  ನೇ ಇಸವಿಯಿಂದ ಈ ಆಚರಣೆ ಆರಂಭವಾಯಿತು.   ಪರಿಸರ ಸಂರಕ್ಷಣೆಗೆ ಸಂಬಂಧಿಸಿದ ವಿವಿಧ ರೀತಿಯ ಕಾರ್ಯಗಳನ್ನು ಜಗತ್ತಿನಾದ್ಯಂತ ಹಮ್ಮಿ ಕೊಳ್ಳಲಾಗುತ್ತಿದೆ.
ಅನಿರೀಕ್ಷಿತವಾಗಿ  ಬಂದೆರಗಿದ   ಕೋವಿಡ್, ಜನರನ್ನು  ಪರಿಸರದತ್ತ ಮುಖ ಮಾಡುವಂತೆ ಮಾಡಿದೆ.   ಕೃತಕತೆಯಿಂದ ಹೊರಬಂದು ನೈಜತೆಯಲ್ಲಿ ಬದುಕುವ ದಾರಿಯನ್ನು ಕಂಡುಕೊಳ್ಳ ಬೇಕಾದ ಅಗತ್ಯ ಮನಗಾಣುವ ಸಮಯ ಮನುಜನದ್ದು.  ಮನಸು‌ ಶುದ್ಧ ವಾಗಿದ್ದಾಗ ನೋಡುವ ದೃಷ್ಟಿ ಯೂ ಶುದ್ಧವಾಗಿರುತ್ತದೆ. ಮನಸಿನ ಕೊಳಕನ್ನು ದೂರ ಮಾಡಿ ಪರಿಸರದತ್ತ ಮುಖ ಮಾಡುವುದೇ  ನಾವು ಪ್ರಕೃತಿಗೆ  ಕೊಡುವ ಉಡುಗೊರೆ.
“ಪರಿಸರ ವ್ಯವಸ್ಥೆಯ ಪುನರ್ ಸ್ಥಾಪನೆ” ಈ ಬಾರಿಯ ಘೋಷ ವಾಕ್ಯ.
ಬನ್ನಿ ಪ್ರಕೃತಿಯ  ಮತ್ತೆ ಹಸಿರು ಮಾಡುವಲ್ಲಿ ಕೈ ಜೋಡಿಸೋಣ ಆಗದೇ?
# ಅಶ್ವಿನಿ ಮೂರ್ತಿ ಅಯ್ಯನಕಟ್ಟೆ

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ಗ್ರಾಮೀಣ ಮೌಲ್ಯಗಳು ಮತ್ತು ನಗರ ಜೀವನ – ಸಮತೋಲನವೇ ನಿಜವಾದ ಮಾರ್ಗ!

ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…

9 hours ago

ದೇಶಾದ್ಯಂತ ಹವಾಮಾನದಲ್ಲಿ ಬದಲಾವಣೆ..! 13 ರಾಜ್ಯಗಳಲ್ಲಿ ಮಳೆ-ಚಂಡಮಾರುತ ಎಚ್ಚರಿಕೆ, ಉತ್ತರ ಭಾರತದಲ್ಲಿ 40°C ದಾಟಿದ ಉಷ್ಣತೆ

ದೇಶದಲ್ಲಿ ಹವಾಮಾನ ತೀವ್ರ ಬದಲಾವಣೆ ಕಂಡುಬರುತ್ತಿದ್ದು, 13 ರಾಜ್ಯಗಳಲ್ಲಿ ಮಳೆ ಮತ್ತು ಗಾಳಿ…

9 hours ago

ಅಂಜನಾದ್ರಿ ಬೆಟ್ಟ ಏರುವವರಿಗೆ ಸಮಯ ನಿಗದಿ .! ಮಧ್ಯಾಹ್ನ 11ರಿಂದ 4ರವರೆಗೆ ಪ್ರವೇಶ ಬ್ಯಾನ್

ಅಂಜನಾದ್ರಿ ಬೆಟ್ಟ ಏರಲು ಮಧ್ಯಾಹ್ನ 11ರಿಂದ ಸಂಜೆ 4ರವರೆಗೆ ನಿರ್ಬಂಧ ವಿಧಿಸಲಾಗಿದೆ. ಬಿಸಿಲಿನ…

9 hours ago

ಕಲಬುರಗಿಯಲ್ಲಿ 43.2°C ತಾಪಮಾನ ದಾಖಲು..! ರಾಜ್ಯದಲ್ಲಿ ಬಿಸಿ ಏರಿಕೆ – ಮುಂದಿನ 5 ದಿನ ಎಚ್ಚರಿಕೆ

ರಾಜ್ಯದಲ್ಲಿ ಉಷ್ಣಾಂಶ ಏರಿಕೆ ಮುಂದುವರಿದಿದ್ದು, ಕಲಬುರಗಿಯಲ್ಲಿ 43.2°C ದಾಖಲಾಗಿದೆ. ಮುಂದಿನ ದಿನಗಳಲ್ಲಿ ಕರಾವಳಿಯಲ್ಲಿ…

9 hours ago

ಹವಾಮಾನ ವರದಿ | 17-04-2026 | ಕರ್ನಾಟಕದ ಹವಾಮಾನದಲ್ಲಿ ಬದಲಾವಣೆ – ಏಪ್ರಿಲ್ 18 ರಿಂದ ಮಳೆ ಹೆಚ್ಚಳ

ಏಪ್ರಿಲ್ 18ರಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ಕಂಡುಬರುತ್ತಿದ್ದು, ಹಂತ ಹಂತವಾಗಿ ಮಳೆಯ ಚಟುವಟಿಕೆ…

1 day ago

ಒಡಿಶಾ ಕರಾವಳಿಯಲ್ಲಿ ಅಕ್ರಮ ಅಡಿಕೆ ಸಾಗಣೆ ಪತ್ತೆ – 700 ಕ್ಕೂ ಹೆಚ್ಚು ಗೋಣಿ ಚೀಲ ವಶಕ್ಕೆ

ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…

2 days ago