Advertisement
MIRROR FOCUS

ಪರಿಸರ ದಿನಕ್ಕೊಂದು ನಮನ | ಹಸಿರಾಗಲಿ ಪರಿಸರ…. ಹಸಿರಾಗಿರಲಿ ಮನಸು….

Share
ಎರಡು ಸುಂದರವಾದ ದೃಶ್ಯ ಗಳ ಚಿತ್ರಣ.‌ ವ್ಯತ್ಯಾಸ ಇಷ್ಟೇ,  ಒಂದು ಹಳ್ಳಿಪ್ರದೇಶದ್ದು, ಇನ್ನೊಂದು  ನಗರ ಪ್ರದೇಶದ್ದು.  ನೋಡಲು ಎರಡು ಚೆಂದವೇ . ಆದರೆ ಮನಸಿಗೆ ಆಪ್ತವಾಗುವುದು  ಹಸಿರಿನ ಹಳ್ಳಿ ಚಿತ್ರವೇ.
ಪರಿಸರ ನಮಗೇನೆಲ್ಲಾ ಕೊಟ್ಟಿದೆ. ತನ್ನೊಳಗಿರುವುದನ್ನೇಲ್ಲಾ ಬಗೆಬಗೆದೇ ಕೊಟ್ಟಾಗಿದೆ. ಶುದ್ಧ ಗಾಳಿ, ನೀರು, ಫಲವತ್ತಾದ ಮಣ್ಣು ಎಲ್ಲವನ್ನೂ  ನಮಗೆ ಕೊಟ್ಟಿದೆ. ಇದರ ಮಡಿಲಲ್ಲಿ ನಮ್ಮನ್ನು ಮಕ್ಕಳಂತೆ ಸಲಹುತ್ತಿದೆ.  ಆದರೆ ನಾವು ಕೊಟ್ಟದ್ದಾದರೂ ಏನು?   ಬರೀ ನೋವನ್ನು.   ನಮ್ಮ ಸುಂದರ ಪರಿಸರ  ನಿರಂತರ ದಬ್ಬಾಳಿಕೆಗೆ  ನಲುಗಿ ಹೋಗಿದೆ.  ಯಾವ ರೀತಿ ರೀತಿ ಎಲ್ಲಾ ಸಾದ್ಯವೋ ಆ ರೀತಿಯೆಲ್ಲಾ  ಉಪಯೋಗಿಸಿ ಕೊಂಡಿದ್ದೇವೆ.  ಒಂದೇ ಎರಡೇ ಹಲವು ರೀತಿಯ ಮಾಲಿನ್ಯಗಳು ನಿಯಂತ್ರಣ ಮೀರಿ  ನಡೆಯುತ್ತಿದೆ. ವಾಯು, ಜಲ, ಶಬ್ದ ಮಾಲಿನ್ಯ ಗಳು ಸೇರಿ ಪರಿಸರವನ್ನು ಹಾಳುಗೆಡವುತ್ತಿದ್ದೇವೆ.  ಇದರ ಕುರಿತು ಜಾಗೃತಿ ಮೂಡಿಸುವ  ಸಲುವಾಗಿ ವಿಶ್ವದಾದ್ಯಂತ ಜೂನ್ 5 ರಂದು   ‘ವಿಶ್ವ ಪರಿಸರ ದಿನ’ ವೆಂದು ಆಚರಿಸಲಾಗುತ್ತದೆ.  1974  ನೇ ಇಸವಿಯಿಂದ ಈ ಆಚರಣೆ ಆರಂಭವಾಯಿತು.   ಪರಿಸರ ಸಂರಕ್ಷಣೆಗೆ ಸಂಬಂಧಿಸಿದ ವಿವಿಧ ರೀತಿಯ ಕಾರ್ಯಗಳನ್ನು ಜಗತ್ತಿನಾದ್ಯಂತ ಹಮ್ಮಿ ಕೊಳ್ಳಲಾಗುತ್ತಿದೆ.
ಅನಿರೀಕ್ಷಿತವಾಗಿ  ಬಂದೆರಗಿದ   ಕೋವಿಡ್, ಜನರನ್ನು  ಪರಿಸರದತ್ತ ಮುಖ ಮಾಡುವಂತೆ ಮಾಡಿದೆ.   ಕೃತಕತೆಯಿಂದ ಹೊರಬಂದು ನೈಜತೆಯಲ್ಲಿ ಬದುಕುವ ದಾರಿಯನ್ನು ಕಂಡುಕೊಳ್ಳ ಬೇಕಾದ ಅಗತ್ಯ ಮನಗಾಣುವ ಸಮಯ ಮನುಜನದ್ದು.  ಮನಸು‌ ಶುದ್ಧ ವಾಗಿದ್ದಾಗ ನೋಡುವ ದೃಷ್ಟಿ ಯೂ ಶುದ್ಧವಾಗಿರುತ್ತದೆ. ಮನಸಿನ ಕೊಳಕನ್ನು ದೂರ ಮಾಡಿ ಪರಿಸರದತ್ತ ಮುಖ ಮಾಡುವುದೇ  ನಾವು ಪ್ರಕೃತಿಗೆ  ಕೊಡುವ ಉಡುಗೊರೆ.
“ಪರಿಸರ ವ್ಯವಸ್ಥೆಯ ಪುನರ್ ಸ್ಥಾಪನೆ” ಈ ಬಾರಿಯ ಘೋಷ ವಾಕ್ಯ.
ಬನ್ನಿ ಪ್ರಕೃತಿಯ  ಮತ್ತೆ ಹಸಿರು ಮಾಡುವಲ್ಲಿ ಕೈ ಜೋಡಿಸೋಣ ಆಗದೇ?
# ಅಶ್ವಿನಿ ಮೂರ್ತಿ ಅಯ್ಯನಕಟ್ಟೆ

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ಹವಾಮಾನ ವರದಿ | 28-07-2026 | ಮುಂದಿನ 10 ದಿನ ಸಾಮಾನ್ಯ ಮಳೆ – ಆಗಸ್ಟ್ ಆರಂಭದಲ್ಲಿ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…

8 hours ago

200 ಹಸುಗಳಿಂದ ₹2 ಕೋಟಿ ವಾರ್ಷಿಕ ಆದಾಯ…! ಗಮನ ಸೆಳೆದ ಉತ್ತರ ಪ್ರದೇಶದ ಮಾದರಿ

ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…

8 hours ago

ರಬ್ಬರ್ ತೋಟ ಹಸಿರಾಗಿರಬಹುದು… ಆದರೆ ಕಾಡಿಗೆ ಪರ್ಯಾಯವಲ್ಲ…! ಮಲೇಷ್ಯಾ ಅಧ್ಯಯನ ವರದಿ

ರಬ್ಬರ್ ತೋಟಗಳು ಹಸಿರಾಗಿದ್ದರೂ ಅವು ನೈಸರ್ಗಿಕ ಮಳೆಕಾಡಿನ ಜೀವವೈವಿಧ್ಯವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು…

13 hours ago

ಅಡುಗೆ ಎಣ್ಣೆ ಆಮದು 7% ಏರಿಕೆ – ಭಾರತ ಇನ್ನೂ ಆಮದು ಅವಲಂಬಿತ

ಭಾರತದ ಅಡುಗೆ ಎಣ್ಣೆ ಆಮದು ಎಂಟು ತಿಂಗಳಲ್ಲಿ ಶೇ.7ರಷ್ಟು ಏರಿಕೆಯಾಗಿದೆ. ಜೂನ್‌ನಲ್ಲಿ ಆಮದು…

13 hours ago

ಕೇರಳದಲ್ಲಿ ಪ್ರತಿವರ್ಷ ₹1,200 ಕೋಟಿ ಮೌಲ್ಯದ ಹಲಸು ವ್ಯರ್ಥ..! ಮೌಲ್ಯವರ್ಧನೆಗೆ ಸರ್ಕಾರ ಮುಂದಾಗಲಿ ಎಂಬ ಒತ್ತಾಯ

ಕೇರಳದಲ್ಲಿ ಉತ್ಪಾದನೆಯಾಗುವ ಬಹುತೇಕ ಹಲಸು ಬಳಕೆಯಾಗದೆ ವ್ಯರ್ಥವಾಗುತ್ತಿದ್ದು, ವರ್ಷಕ್ಕೆ ಸುಮಾರು ₹1,200 ಕೋಟಿ…

13 hours ago

ಅವೈಜ್ಞಾನಿಕ ಮಳೆ ವರದಿ ಶೈಕ್ಷಣಿಕ ವಲಯಕ್ಕೆ ತೊಂದರೆ – ಹವಾಮಾನ ಮುನ್ಸೂಚನೆ ಕುರಿತು ಎಸ್.ಎಲ್. ಭೋಜೆಗೌಡ ಕಳವಳ

ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…

1 day ago