Advertisement
MIRROR FOCUS

ಪರಿಸರ ದಿನಕ್ಕೊಂದು ನಮನ | ಹಸಿರಾಗಲಿ ಪರಿಸರ…. ಹಸಿರಾಗಿರಲಿ ಮನಸು….

Share
ಎರಡು ಸುಂದರವಾದ ದೃಶ್ಯ ಗಳ ಚಿತ್ರಣ.‌ ವ್ಯತ್ಯಾಸ ಇಷ್ಟೇ,  ಒಂದು ಹಳ್ಳಿಪ್ರದೇಶದ್ದು, ಇನ್ನೊಂದು  ನಗರ ಪ್ರದೇಶದ್ದು.  ನೋಡಲು ಎರಡು ಚೆಂದವೇ . ಆದರೆ ಮನಸಿಗೆ ಆಪ್ತವಾಗುವುದು  ಹಸಿರಿನ ಹಳ್ಳಿ ಚಿತ್ರವೇ.
ಪರಿಸರ ನಮಗೇನೆಲ್ಲಾ ಕೊಟ್ಟಿದೆ. ತನ್ನೊಳಗಿರುವುದನ್ನೇಲ್ಲಾ ಬಗೆಬಗೆದೇ ಕೊಟ್ಟಾಗಿದೆ. ಶುದ್ಧ ಗಾಳಿ, ನೀರು, ಫಲವತ್ತಾದ ಮಣ್ಣು ಎಲ್ಲವನ್ನೂ  ನಮಗೆ ಕೊಟ್ಟಿದೆ. ಇದರ ಮಡಿಲಲ್ಲಿ ನಮ್ಮನ್ನು ಮಕ್ಕಳಂತೆ ಸಲಹುತ್ತಿದೆ.  ಆದರೆ ನಾವು ಕೊಟ್ಟದ್ದಾದರೂ ಏನು?   ಬರೀ ನೋವನ್ನು.   ನಮ್ಮ ಸುಂದರ ಪರಿಸರ  ನಿರಂತರ ದಬ್ಬಾಳಿಕೆಗೆ  ನಲುಗಿ ಹೋಗಿದೆ.  ಯಾವ ರೀತಿ ರೀತಿ ಎಲ್ಲಾ ಸಾದ್ಯವೋ ಆ ರೀತಿಯೆಲ್ಲಾ  ಉಪಯೋಗಿಸಿ ಕೊಂಡಿದ್ದೇವೆ.  ಒಂದೇ ಎರಡೇ ಹಲವು ರೀತಿಯ ಮಾಲಿನ್ಯಗಳು ನಿಯಂತ್ರಣ ಮೀರಿ  ನಡೆಯುತ್ತಿದೆ. ವಾಯು, ಜಲ, ಶಬ್ದ ಮಾಲಿನ್ಯ ಗಳು ಸೇರಿ ಪರಿಸರವನ್ನು ಹಾಳುಗೆಡವುತ್ತಿದ್ದೇವೆ.  ಇದರ ಕುರಿತು ಜಾಗೃತಿ ಮೂಡಿಸುವ  ಸಲುವಾಗಿ ವಿಶ್ವದಾದ್ಯಂತ ಜೂನ್ 5 ರಂದು   ‘ವಿಶ್ವ ಪರಿಸರ ದಿನ’ ವೆಂದು ಆಚರಿಸಲಾಗುತ್ತದೆ.  1974  ನೇ ಇಸವಿಯಿಂದ ಈ ಆಚರಣೆ ಆರಂಭವಾಯಿತು.   ಪರಿಸರ ಸಂರಕ್ಷಣೆಗೆ ಸಂಬಂಧಿಸಿದ ವಿವಿಧ ರೀತಿಯ ಕಾರ್ಯಗಳನ್ನು ಜಗತ್ತಿನಾದ್ಯಂತ ಹಮ್ಮಿ ಕೊಳ್ಳಲಾಗುತ್ತಿದೆ.
ಅನಿರೀಕ್ಷಿತವಾಗಿ  ಬಂದೆರಗಿದ   ಕೋವಿಡ್, ಜನರನ್ನು  ಪರಿಸರದತ್ತ ಮುಖ ಮಾಡುವಂತೆ ಮಾಡಿದೆ.   ಕೃತಕತೆಯಿಂದ ಹೊರಬಂದು ನೈಜತೆಯಲ್ಲಿ ಬದುಕುವ ದಾರಿಯನ್ನು ಕಂಡುಕೊಳ್ಳ ಬೇಕಾದ ಅಗತ್ಯ ಮನಗಾಣುವ ಸಮಯ ಮನುಜನದ್ದು.  ಮನಸು‌ ಶುದ್ಧ ವಾಗಿದ್ದಾಗ ನೋಡುವ ದೃಷ್ಟಿ ಯೂ ಶುದ್ಧವಾಗಿರುತ್ತದೆ. ಮನಸಿನ ಕೊಳಕನ್ನು ದೂರ ಮಾಡಿ ಪರಿಸರದತ್ತ ಮುಖ ಮಾಡುವುದೇ  ನಾವು ಪ್ರಕೃತಿಗೆ  ಕೊಡುವ ಉಡುಗೊರೆ.
“ಪರಿಸರ ವ್ಯವಸ್ಥೆಯ ಪುನರ್ ಸ್ಥಾಪನೆ” ಈ ಬಾರಿಯ ಘೋಷ ವಾಕ್ಯ.
ಬನ್ನಿ ಪ್ರಕೃತಿಯ  ಮತ್ತೆ ಹಸಿರು ಮಾಡುವಲ್ಲಿ ಕೈ ಜೋಡಿಸೋಣ ಆಗದೇ?
# ಅಶ್ವಿನಿ ಮೂರ್ತಿ ಅಯ್ಯನಕಟ್ಟೆ

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ಹವಾಮಾನ ವರದಿ | 07-09-2026 | ಕರ್ನಾಟಕದಲ್ಲಿ ಮುಂದಿನ ಮಳೆಯ ಚಿತ್ರಣ ಹೇಗಿದೆ..?

ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…

2 hours ago

ಹೆಬ್ರಿಯ ಗೋಡಂಬಿ ತ್ಯಾಜ್ಯದಿಂದ ಹಡಗುಗಳಿಗೆ ಇಂಧನ..!

ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…

8 hours ago

ಮಡಿಕೇರಿಯಲ್ಲಿ ಅಡಿಕೆ ಹಾಳೆ ತಟ್ಟೆಗೂ ನಿಷೇಧ..!

ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…

8 hours ago

ಹವಾಮಾನ ವರದಿ | 06-09-2026 | ಕರ್ನಾಟಕದಲ್ಲಿ ಮಳೆ ಇಳಿಮುಖದ ಲಕ್ಷಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…

1 day ago

ಭಾರತದ ಹಸಿರು ಯೋಜನೆಗಳಿಗೆ ಜಪಾನ್‌ನ ಕಾರ್ಬನ್ ಕ್ರೆಡಿಟ್ ಅವಕಾಶ – ರೈತರೂ ಪಡೆಯಬಹುದೇ ಇದರ ಲಾಭ?

ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…

1 day ago

ಹಿಮಾಲಯದಲ್ಲಿ ಮತ್ತೊಂದು ಅಪಾಯದ ಎಚ್ಚರಿಕೆ..!

ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…

1 day ago