Advertisement
MIRROR FOCUS

ಪರಿಸರ ದಿನಕ್ಕೊಂದು ನಮನ | ಹಸಿರಾಗಲಿ ಪರಿಸರ…. ಹಸಿರಾಗಿರಲಿ ಮನಸು….

Share
ಎರಡು ಸುಂದರವಾದ ದೃಶ್ಯ ಗಳ ಚಿತ್ರಣ.‌ ವ್ಯತ್ಯಾಸ ಇಷ್ಟೇ,  ಒಂದು ಹಳ್ಳಿಪ್ರದೇಶದ್ದು, ಇನ್ನೊಂದು  ನಗರ ಪ್ರದೇಶದ್ದು.  ನೋಡಲು ಎರಡು ಚೆಂದವೇ . ಆದರೆ ಮನಸಿಗೆ ಆಪ್ತವಾಗುವುದು  ಹಸಿರಿನ ಹಳ್ಳಿ ಚಿತ್ರವೇ.
ಪರಿಸರ ನಮಗೇನೆಲ್ಲಾ ಕೊಟ್ಟಿದೆ. ತನ್ನೊಳಗಿರುವುದನ್ನೇಲ್ಲಾ ಬಗೆಬಗೆದೇ ಕೊಟ್ಟಾಗಿದೆ. ಶುದ್ಧ ಗಾಳಿ, ನೀರು, ಫಲವತ್ತಾದ ಮಣ್ಣು ಎಲ್ಲವನ್ನೂ  ನಮಗೆ ಕೊಟ್ಟಿದೆ. ಇದರ ಮಡಿಲಲ್ಲಿ ನಮ್ಮನ್ನು ಮಕ್ಕಳಂತೆ ಸಲಹುತ್ತಿದೆ.  ಆದರೆ ನಾವು ಕೊಟ್ಟದ್ದಾದರೂ ಏನು?   ಬರೀ ನೋವನ್ನು.   ನಮ್ಮ ಸುಂದರ ಪರಿಸರ  ನಿರಂತರ ದಬ್ಬಾಳಿಕೆಗೆ  ನಲುಗಿ ಹೋಗಿದೆ.  ಯಾವ ರೀತಿ ರೀತಿ ಎಲ್ಲಾ ಸಾದ್ಯವೋ ಆ ರೀತಿಯೆಲ್ಲಾ  ಉಪಯೋಗಿಸಿ ಕೊಂಡಿದ್ದೇವೆ.  ಒಂದೇ ಎರಡೇ ಹಲವು ರೀತಿಯ ಮಾಲಿನ್ಯಗಳು ನಿಯಂತ್ರಣ ಮೀರಿ  ನಡೆಯುತ್ತಿದೆ. ವಾಯು, ಜಲ, ಶಬ್ದ ಮಾಲಿನ್ಯ ಗಳು ಸೇರಿ ಪರಿಸರವನ್ನು ಹಾಳುಗೆಡವುತ್ತಿದ್ದೇವೆ.  ಇದರ ಕುರಿತು ಜಾಗೃತಿ ಮೂಡಿಸುವ  ಸಲುವಾಗಿ ವಿಶ್ವದಾದ್ಯಂತ ಜೂನ್ 5 ರಂದು   ‘ವಿಶ್ವ ಪರಿಸರ ದಿನ’ ವೆಂದು ಆಚರಿಸಲಾಗುತ್ತದೆ.  1974  ನೇ ಇಸವಿಯಿಂದ ಈ ಆಚರಣೆ ಆರಂಭವಾಯಿತು.   ಪರಿಸರ ಸಂರಕ್ಷಣೆಗೆ ಸಂಬಂಧಿಸಿದ ವಿವಿಧ ರೀತಿಯ ಕಾರ್ಯಗಳನ್ನು ಜಗತ್ತಿನಾದ್ಯಂತ ಹಮ್ಮಿ ಕೊಳ್ಳಲಾಗುತ್ತಿದೆ.
ಅನಿರೀಕ್ಷಿತವಾಗಿ  ಬಂದೆರಗಿದ   ಕೋವಿಡ್, ಜನರನ್ನು  ಪರಿಸರದತ್ತ ಮುಖ ಮಾಡುವಂತೆ ಮಾಡಿದೆ.   ಕೃತಕತೆಯಿಂದ ಹೊರಬಂದು ನೈಜತೆಯಲ್ಲಿ ಬದುಕುವ ದಾರಿಯನ್ನು ಕಂಡುಕೊಳ್ಳ ಬೇಕಾದ ಅಗತ್ಯ ಮನಗಾಣುವ ಸಮಯ ಮನುಜನದ್ದು.  ಮನಸು‌ ಶುದ್ಧ ವಾಗಿದ್ದಾಗ ನೋಡುವ ದೃಷ್ಟಿ ಯೂ ಶುದ್ಧವಾಗಿರುತ್ತದೆ. ಮನಸಿನ ಕೊಳಕನ್ನು ದೂರ ಮಾಡಿ ಪರಿಸರದತ್ತ ಮುಖ ಮಾಡುವುದೇ  ನಾವು ಪ್ರಕೃತಿಗೆ  ಕೊಡುವ ಉಡುಗೊರೆ.
“ಪರಿಸರ ವ್ಯವಸ್ಥೆಯ ಪುನರ್ ಸ್ಥಾಪನೆ” ಈ ಬಾರಿಯ ಘೋಷ ವಾಕ್ಯ.
ಬನ್ನಿ ಪ್ರಕೃತಿಯ  ಮತ್ತೆ ಹಸಿರು ಮಾಡುವಲ್ಲಿ ಕೈ ಜೋಡಿಸೋಣ ಆಗದೇ?
# ಅಶ್ವಿನಿ ಮೂರ್ತಿ ಅಯ್ಯನಕಟ್ಟೆ

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ಮುಂಗಾರು ಮತ್ತಷ್ಟು ಚುರುಕು- ವಾಯುಭಾರ ಕುಸಿತದ ಲಕ್ಷಣ | ಕರ್ನಾಟಕ ಸೇರಿ ಹಲವು ರಾಜ್ಯಗಳಿಗೆ IMD ಎಚ್ಚರಿಕೆ ನೀಡಿ

ದೇಶದಾದ್ಯಂತ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಮುಂದಿನ 5 ದಿನ…

1 hour ago

ಅಡಿಕೆ ಕಳ್ಳಸಾಗಣೆ ಪ್ರಕರಣ – ಸಿಲ್ಚಾರ್ ಉದ್ಯಮಿಯ ಮನೆ ಮೇಲೆ ಇ.ಡಿ. ದಾಳಿ, ಹಣ ಅಕ್ರಮ ವರ್ಗಾವಣೆ ತನಿಖೆ ತೀವ್ರ

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಲ್ಚಾರ್ ಉದ್ಯಮಿಯ…

2 hours ago

ಸಂಬಂಧಗಳಲ್ಲಿ ಸೋಲು ಅಲ್ಲ, ಅರಿವು ಮುಖ್ಯ

ಈ ವಾರದ ಚಿಂತನೆ - "ಸಂಬಂಧಗಳಲ್ಲಿ ಸೋಲು ಅಲ್ಲ, ಅರಿವು ಮುಖ್ಯ"

5 hours ago

ಮುಂಬೈನಲ್ಲಿ ಭಾರೀ ಮಳೆ ಅಬ್ಬರ – ರೆಡ್ ಅಲರ್ಟ್ ಮುಂದುವರಿಕೆ, ಜನಜೀವನ ಅಸ್ತವ್ಯಸ್ತ

ಮುಂಬೈನಲ್ಲಿ ನಿರಂತರ ಭಾರೀ ಮಳೆಯಿಂದ ನಗರದಲ್ಲಿ ಜಲಾವೃತ ಮತ್ತು ಸಂಚಾರ ಅಸ್ತವ್ಯಸ್ತವಾಗಿದೆ. IMD…

14 hours ago

ಮಹಾರಾಷ್ಟ್ರದಲ್ಲಿ ಅಡಿಕೆ ಲಾರಿಗಳ ತಡೆಗೆ BIS ಮಾನದಂಡ ಕಾರಣವೇ ? ಯಾವ ಅಡಿಕೆ ಉತ್ತಮ? ಗ್ರೇಡ್ ಹೇಗೆ ನಿರ್ಧಾರ?

ಭಾರತೀಯ BIS ಮಾನದಂಡದ ಪ್ರಕಾರ ಅಡಿಕೆಯ ಗುಣಮಟ್ಟವನ್ನು ತೇವಾಂಶ, ಅಫ್ಲಾಟಾಕ್ಸಿನ್, ಕೀಟ ಹಾನಿ,…

15 hours ago

ಜಾಕ್‌ಫ್ರೂಟ್ ಸ್ಪೈಸಿ – ಹಲಸಿನ ಕಾಯಿಯಿಂದ 5 ನಿಮಿಷದಲ್ಲಿ ರುಚಿಕರ ಸ್ನ್ಯಾಕ್..!

ಸ್ವಲ್ಪ ಸಿಹಿ ರುಚಿಯ ಹಲಸಿನ ಕಾಯಿಗೆ ವಿವಿಧ ಮಸಾಲೆಗಳನ್ನು ಸೇರಿಸಿ ಕೆಲವೇ ನಿಮಿಷಗಳಲ್ಲಿ…

21 hours ago