ಆಹಾರದ ರಕ್ಷಣೆ -ಸುರಕ್ಷತೆ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಹಾಗೂ ಆಹಾರ ಭದ್ರತೆಯನ್ನು ಖಚಿತಪಡಿಸಿಕೊಳ್ಳುವುದು ಮತ್ತು ಹಸಿವಿನ ವಿರುದ್ಧ ಹೋರಾಡುವುದು ಉದ್ದೇಶದಿಂದ ವಿಶ್ವ ಆಹಾರ ದಿನವನ್ನು ಆಚರಿಸಲಾಗುತ್ತದೆ. ಅ.16 ರಂದು ವಿಶ್ವ ಆಹಾರ ದಿನವನ್ನು ಆಚರಿಸಿ ಜನರಲ್ಲಿ ನಾವು ತಿನ್ನುವ ಆಹಾರದ ಬಗ್ಗೆ ಅರಿವು ಮೂಡಿಸುವ ಪ್ರಯತ್ನ ನಡೆಸಲಾಗುತ್ತದೆ.ಪ್ರತೀ ಈ ದಿನದಂದು ವಿಶ್ವ ಆಹಾರ ದಿನ ಎಂದು ಜಗತ್ತಿನಾದ್ಯಂತ ಆಚರಿಸಲಾಗುತ್ತಿದೆ. ಈ ವರ್ಷದ ವಿಶ್ವ ಆಹಾರ ದಿನದ ಥೀಮ್, ನೀರು-ಜೀವನ, ನೀರು-ಆಹಾರ.
ಸರಿಯಾದ ಆಹಾರ ಮತ್ತು ಪೋಷಣೆಯ ಪ್ರವೇಶ ಮಾನವನ ಮೂಲಭೂತ ಹಕ್ಕು. ಆದಾಗ್ಯೂ, ವಿಶ್ವದ ಲಕ್ಷಾಂತರ ಜನರಿಗೆ ಆರೋಗ್ಯಕರ ಆಹಾರ ಮತ್ತು ನೀರಿನ ಲಭ್ಯತೆ ಇಲ್ಲ. ಹೀಗಾಗಿವಿಶ್ವ ಆಹಾರ ದಿನದ ಪ್ರಾಮುಖ್ಯತೆಯ ಬಗ್ಗೆ ಜಾಗೃತಿ ಮೂಡಿಸುವುದರ ಜೊತೆಗೆ ಪ್ರತಿಯೊಬ್ಬ ವ್ಯಕ್ತಿಗೆ ಸರಿಯಾದ ಪೋಷಣೆ ಮತ್ತು ಸರಿಯಾದ ಆಹಾರದ ಕ್ರಮಗಳನ್ನು ಒದಗಿಸುವುದನ್ನು ಖಚಿತಪಡಿಸಿಕೊಳ್ಳುವುದರ ಮೇಲೆ ಈ ದಿನ ಕೇಂದ್ರೀಕರಿಸುತ್ತದೆ.
ಆಹಾರ ಸುರಕ್ಷತೆ ಮತ್ತು ಭದ್ರತೆಯನ್ನು ಖಚಿತಪಡಿಸಿಕೊಳ್ಳುವುದು ಪ್ರತಿ ವರ್ಷ, ಸಂಸ್ಥೆಗಳಿಂದ ಸಾಕಷ್ಟು ಹೊಸ ಉಪಕ್ರಮಗಳು ಮತ್ತು ಹೊಸ ಆಲೋಚನೆಗಳೊಂದಿಗೆ ವಿಶ್ವ ಆಹಾರ ದಿನವನ್ನು ಆಚರಿಸಲಾಗುತ್ತದೆ. ಯುನೈಟೆಡ್ ನೇಷನ್ಸ್ ಫುಡ್ ಅಂಡ್ ಅಗ್ರಿಕಲ್ಚರ್ ಆರ್ಗನೈಸೇಶನ್ ಅನ್ನು 1945 ರಲ್ಲಿ ಸ್ಥಾಪಿಸಲಾಯಿತು. 1979 ರಲ್ಲಿ ನಡೆದ ಸಮ್ಮೇಳನದಲ್ಲಿ, ವಿಶ್ವ ಆಹಾರ ದಿನವನ್ನು ಅಧಿಕೃತವಾಗಿ ಘೋಷಿಸಲಾಗಿದೆ. 150 ಕ್ಕೂ ಹೆಚ್ಚು ದೇಶಗಳು ಒಟ್ಟಾಗಿ ವಿಶ್ವ ಆಹಾರ ದಿನವನ್ನು ಮಹತ್ವದ ದಿನವೆಂದು ಆಚರಿಸುತ್ತಿವೆ.
World Food Day 2023 |
ಕರಾವಳಿ ಕರ್ನಾಟಕದ ಮೂರು ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರಕನ್ನಡ ಜಿಲ್ಲೆಗಳಲ್ಲಿ…
ಕೃಷಿಕರಿಗೆ ಹವಾಮಾನದ ಬದಲಾವಣೆಯ ಮಾಹಿತಿ ಇರುವುದಿಲ್ಲ. ಇದಕ್ಕಾಗಿ ಡಿಸೀಸ್ ಫಾರ್ಕಾಸ್ಟ್ ಅಂದರೆ ಯಾವ…
ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವರದಿಯ ಅನ್ವಯ, ಉತ್ತರ ಕನ್ನಡ…
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡ ಮಿಶ್ರಿತ ಬಿಸಿಲಿನ ವಾತಾವರಣದ ಮುನ್ಸೂಚನೆ…
ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…
ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…