( Net Photo )
ಗ್ರಾಮೀಣ ಭಾಗದ ಬಹುದೊಡ್ಡ ಸಮಸ್ಯೆ ಹೃದಯಾಘಾತ. ಇದಕ್ಕೆ ತಕ್ಷಣವೇ ಚಿಕಿತ್ಸೆಯಾಗಬೇಕು.ಆದರೆ ಗ್ರಾಮೀಣ ಭಾಗದಲ್ಲಿ ಇದು ಸಾಧ್ಯವಾಗುತ್ತಿಲ್ಲ.ಇದಕ್ಕೆ ಅಸಮರ್ಪಕ ಇಸಿಜಿ ಸೌಲಭ್ಯಗಳು ಮತ್ತು ವಿಳಂಬವಾದ ರೋಗನಿರ್ಣಯವೂ ಕಾರಣವಾಗುತ್ತದೆ. ಹೀಗಾಗಿ ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚಿನ ಹೃದಯಾಘಾತ ಪ್ರಕರಣಗಳಲ್ಲಿ ಸಾವಿಗೆ ಕಾರಣವಾಗಿದೆ.
2014 ರಲ್ಲಿ ವಿಳಂಬವಾದ ರೋಗನಿರ್ಣಯದಿಂದಾಗಿ ಗ್ರಾಮೀಣ ಭಾಗದ ಯುವಕನೊಬ್ಬ ಹೃದಯಾಘಾತದಿಂದ ಪ್ರಾಣ ಕಳೆದುಕೊಂಡಿರುವುದನ್ನು ಕಂಡ ಮಂಗಳೂರಿನ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ ಹೃದ್ರೋಗ ವಿಭಾಗದ ಮುಖ್ಯಸ್ಥ ಡಾ|ಪದ್ಮನಾಭ ಕಾಮತ್ ಇಂತಹ ಪ್ರಕರಣಗಳಿಗೆ ಏನಾದರು ಮಾಡಲೇಬೇಕು ಎಂದು ಸಾಮಾಜಿಕ ನೆಲೆಯಲ್ಲಿ ಯೋಚಿಸಿದರು. ಹೀಗಾಗಿ ವಾಟ್ಸಾಪ್ ಗುಂಪುಗಳ ಮೂಲಕ ಹಳ್ಳಿಗಳು, ಹತ್ತಿರದ ಪಟ್ಟಣಗಳು, ಆಸ್ಪತ್ರೆಗಳು ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳ ಬಗ್ಗೆ ಮಾಹಿತಿ ಸಂಗ್ರಹಿಸಿದರು ಹಾಗೂ ಅಲ್ಲಿನ ಭೌಗೋಳಿಕ ಸಮಸ್ಯೆ, ತಾಂತ್ರಿಕ ಸಮಸ್ಯೆ ಬಗ್ಗೆ ಮಾಹಿತಿ ಕಲೆ ಹಾಕಿದರು. ಫೆಬ್ರವರಿ 2018 ರಲ್ಲಿ, ಅವರು 150 ಸದಸ್ಯರನ್ನು ಹೊಂದಿರುವ ವಾಟ್ಸಾಪ್ ಗುಂಪಿನ ‘ಕಾರ್ಡಿಯಾಲಜಿ ಎಟ್ ಡೋರ್ಸ್ಟೆಪ್’ (CAD) ಅನ್ನು ರಚಿಸಿದರು, ಹೃದಯ ಸಂಬಂಧಿತ ಸಮಸ್ಯೆಗಳನ್ನು ಗುರುತಿಸಲು ಮತ್ತು ವಾಟ್ಸಾಪ್ ಮೂಲಕ ಸಹಾಯವನ್ನು ಒದಗಿಸಲು ಗ್ರಾಮೀಣ ಪ್ರದೇಶದ ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ಖಾಸಗಿ ಚಿಕಿತ್ಸಾಲಯಗಳಲ್ಲಿ ಇಸಿಜಿ ಯಂತ್ರಗಳನ್ನು ಸ್ಥಾಪಿಸಿದರು. ಈ ಇಸಿಜಿ ಯಂತ್ರಗಳನ್ನು ಉಚಿತವಾಗಿ ನೀಡಲಾಯಿತು. ಈಗಾಗಲೇ ಅನೇಕ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಹಾಗೂ ಕೆಲವು ಕಡೆ ಖಾಸಗಿ ಕ್ಲಿನಿಕ್ ಗಳಲ್ಲಿ ಇಸಿಜಿ ಯಂತ್ರ ಇಡಲಾಗಿದೆ. ಪ್ರಥಮ ಚಿಕಿತ್ಸೆ ಸಮಯಕ್ಕೆ ಸರಿಯಾಗಿ ನೀಡಿದರೆ 80 ರಷ್ಟು ಹೃದಯ ರೋಗಿಗಳನ್ನು ಉಳಿಸಬಹುದು. ಗ್ರಾಮೀಣ ಪ್ರದೇಶಗಳಲ್ಲಿ ಪ್ರಥಮ ಚಿಕಿತ್ಸಾ ಕೊರತೆಯ ಬಗ್ಗೆ, ಗ್ರಾಮೀಣ ಪ್ರದೇಶಗಳಲ್ಲಿ ಇಸಿಜಿ ಸೌಲಭ್ಯದ ಕೊರತೆಯಿಂದಾಗಿ ಸರಿಯಾದ ರೋಗನಿರ್ಣಯದ ಕೊರತೆಯು ಅನೇಕ ಸಂದರ್ಭಗಳಲ್ಲಿ ಕಾರಣವಾಗಿದೆ ಎಂದು ಹೇಳುತ್ತಾರೆ ಡಾ.ಪದ್ಮನಾಭ ಕಾಮತ್.
ಹೇಗೆ ಕೆಲಸ ಮಾಡುತ್ತದೆ CAD ?:
ಎದೆನೋವು ಸಮಸ್ಯೆ ಕಾಡುವ ವ್ಯಕ್ತಿ CAD ಕಡೆಯಿಂದ ಇಸಿಜಿ ಯಂತ್ರ ಇರಿಸಲಾದ ಖಾಸಗಿ ಕ್ಲಿನಿಕ್ ಅಥವಾ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಬರುವ ರೋಗಿಗಳಿಗೆ ತಕ್ಷಣವೇ ಅಲ್ಲಿನ ವೈದ್ಯರು ಇಸಿಜಿಯನ್ನು ದಾಖಲಿಸುತ್ತಾರೆ ಮತ್ತು ಅದನ್ನು ವಾಟ್ಸಾಪ್ ಗುಂಪಿನಲ್ಲಿ ರವಾನಿಸುತ್ತಾರೆ.ಈ ಗುಂಪುಗಳಲ್ಲಿ ಪೋಸ್ಟ್ ಮಾಡಲಾದ ಇಸಿಜಿಗಳ ಬಗ್ಗೆ ಮಂಗಳೂರಿನ ಮತ್ತೊಬ್ಬ ಹೃದ್ರೋಗ ತಜ್ಞ ಕಾಮತ್ ಮತ್ತು ಮನೀಶ್ ರೈ ಅಥವಾ ಡಾ.ಪದ್ಮನಾಭ ಕಾಮತ್ ಅಥವಾ ತಜ್ಞ ವೈದ್ಯರು ಅಭಿಪ್ರಾಯ ವ್ಯಕ್ತಪಡಿಸುತ್ತಾರೆ. ತುರ್ತು ಸಂದರ್ಭಗಳಲ್ಲಿ ಅವರನ್ನು ಎಚ್ಚರಿಸಿ ಅಂಬುಲೆನ್ಸ್ ಮೂಲಕ ತಕ್ಷಣವೇ ಸಮೀಪದ ಆಸ್ಪತ್ರೆಗೆ ದಾಖಲಿಸಲು ಸೂಚನೆ ನೀಡುತ್ತಾರೆ. ಸಾಮಾನ್ಯ ಸಂದರ್ಭದಲ್ಲಿ ಮುಂದಿನ ಚಿಕಿತ್ಸೆ ಹಾಗೂ ಪರೀಕ್ಷೆಗೆ ಸಲಹೆ ನೀಡುತ್ತಾರೆ. ಗ್ರೂಪುಗಳಲ್ಲಿ ಬರುವ ಇಸಿಜಿಗಳಿಗೆ ಕ್ಷಣಮಾತ್ರದಲ್ಲಿ ಉತ್ತರವನ್ನೂ ನೀಡುತ್ತಾರೆ. ಇಸಿಜಿಯಲ್ಲಿ ಹೃದಯಾಘಾತಕ್ಕೆ ಸಂಬಂಧಿಸಿದ ಸಂದರ್ಭಗಳನ್ನು ಕಂಡುಬಂದರೆ ತಕ್ಷಣ ನಿಭಾಯಿಸಲು ಅವರಿಗೆ ಪ್ರಥಮ ಚಿಕಿತ್ಸೆಯನ್ನು ಸಹ ಕಲಿಸಲಾಗಿದೆ.
ಇಂದು ರಾಜ್ಯದ 21 ಜಿಲ್ಲೆಗಳಿಗೆ ಈ ಯೋಜನೆ ತಲುಪಿದೆ. ಇಡೀ ಕರ್ನಾಟಕವನ್ನು ಈ ಯೋಜನೆಯ ಮೂಲಕ ತಲುಪಬೇಕು ಎನ್ನುವುದು ಸಮಾಜಮುಖಿ ವೈದ್ಯರ ಉದ್ದೇಶವಾಗಿದೆ.
ಭೋಜನವೆಂದರೆ ಉದರಾಗ್ನಿಯನ್ನು ತಣಿಸುವ ಯಜ್ಞ. ಉದರಾಗ್ನಿಗೆ ಖಾದ್ಯಗಳೇ ಆಜ್ಯಗಳು. ಯಜ್ಞವೆಂದಾಗ ಶ್ರದ್ಧೆ, ಭಕ್ತಿ ಮತ್ತು…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿದ್ದು, ಇದರ ಪ್ರಭಾವದಿಂದ ಜೂನ್ 11 ರಿಂದ…
ಇತ್ತೀಚಿನ ದಿನಗಳಲ್ಲಿ ಮಾಲಿನ್ಯದ ಬಗ್ಗೆ ಹೆಚ್ಚುತ್ತಿರುವ ಕಾಳಜಿ, ಪರಿಸರ ಸಂರಕ್ಷಣೆಯ ಬಗ್ಗೆ ಚಿಂತಿಸುವಂತೆ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490
ಹಲಸಿನ ಹಣ್ಣಿನ ಮಲ್ಪುರಿಗೆ ಬೇಕಾಗುವ ಸಾಮಗ್ರಿಗಳು : ಹಲಸಿನ ಹಣ್ಣಿನ ಪಲ್ಪ್ 1/2 ಕಪ್,…