Advertisement
ಅನುಕ್ರಮ

ವಿಶ್ವ ಜೇನುಹುಳು ದಿನ | ಜೇನು ಹುಳುಗಳ ಉಳಿವು ಪ್ರಕೃತಿಯ ಉಳಿವು |

Share
ಅಮ್ಮನ ಹಾಲಿನಷ್ಟೇ ಶುದ್ಧವಾದ ಆಹಾರವೆಂದರೆ ಜೇನು.  ಪುಟ್ಟ ಮಕ್ಕಳಿಗೆ ಜೇನು ನೆಕ್ಕಿಸಿ ಹಿರಿಯರು ಆಶೀರ್ವದಿಸುವುದು ನಮ್ಮ ಭಾರತೀಯ ಕ್ರಮ. ಇದರಿಂದಲೇ ಜೇನಿನ ಪ್ರಾಮುಖ್ಯತೆಯ ಅರಿವಾಗುತ್ತದೆ. ಜೇನುಹುಳುಗಳು ಕೂಡು ಕುಟುಂಬದ ಸಂಕೇತ. ಖುಷಿ ಖುಷಿಯಾಗಿ  ಒಂದಾಗಿ ಇರುವ  , ಜೊತೆಯಾಗಿ ದುಡಿಯುವ ಈ ಜೇನು ನೊಣಗಳು ಕ್ರಿಯಾಶೀಲತೆ ಉತ್ತಮ ಉದಾಹರಣೆ.
ಇಂದು ಮೇ 20. ” ವಿಶ್ವ ಜೇನು ಹುಳು ದಿನ” . 2018 ನೇ ಇಸವಿಯಲ್ಲಿ ಮೊದಲ ಬಾರಿಗೆ ವಿಶ್ವಸಂಸ್ಥೆಯು  ಈ ದಿನದ ಆಚರಣೆಗೆ ಚಾಲನೆ ನೀಡಿತು.  ಗಮನೀಯವಾಗಿ ಕುಸಿಯುತ್ತಿರುವ ಜೇನುನೊಣಗಳ ಸಂತತಿಯ ಉಳಿವಿನ ಅಗತ್ಯವನ್ನು ಮನಗಾಣಿಸುವ ಪ್ರಯತ್ನವಾಗಿ ಈ ಆಚರಣೆ.  ಸ್ಲೋವೆನಿಯಾದ ಮಹಾನ್ ಜೇನು ಕೃಷಿಕ  ಆಂಟೆನ್ ಜಾನಿಯಾ  ಜನ್ಮ ದಿನ.  20 ಮೇ 1734.  ಈ ವರ್ಷದ ಘೋಷ ವಾಕ್ಯ Bee engaged, Biid back better for bees.” ಜೇನು ಹುಳುಗಳ ಉಳಿವಿಗಾಗಿ ಸೂಕ್ತ ತಾಣವನ್ನು ನಿರ್ಮಿಸೋಣ.
ಸುಮಾರು 20,000  ವಿವಿಧ ಜಾತಿಯ ಜೇನು ನೊಣಗಳಿವೆ.  ಅಮೇರಿಕಾ ಸಂಯುಕ್ತ ಸಂಸ್ಥಾನಗಳು, ಚೈನಾ, ಟರ್ಕಿಗಳು ಪ್ರಮುಖವಾಗಿ ಜೇನು ಉತ್ಪಾದನೆ ರಾಷ್ಟ್ರಗಳಾಗಿವೆ. ಜೇನು ಹುಳುಗಳು ನಮ್ಮ ಕೃಷಿ ಚಟುವಟಿಕೆಗಳ ಯಶಸ್ವಿನಲ್ಲಿ ಪ್ರಮುಖ ಪಾತ್ರವಹಿಸುತ್ತವೆ. ನಮ್ಮ ಹಣ್ಣು , ತರಕಾರಿಗಳಿರಲಿ, ಅಡಿಕೆ ತೆಂಗು ಹೂವುಗಳ ಪರಾಗಸ್ಪರ್ಶ ಕ್ರಿಯೆಯಲ್ಲಿ ಜೇನು ನೊಣಗಳು ಪ್ರಮುಖ ಪಾತ್ರ ನಿರ್ವಹಿಸುತ್ತವೆ.  ತಮ್ಮ ಆಹಾರಕ್ಕಾಗಿ ಹೂವುಗಳ ಮಕರಂದವನ್ನು ಹೀರುವ ಜೇನು ಹುಳುವಿನ  ಪ್ರಕ್ರಿಯೆಯು ಪರಾಗಸ್ಪರ್ಶಕ್ಕೆ ಕಾರಣವಾಗುತ್ತದೆ. ರಾಸಾಯನಿಕ ಕ್ರಿಮಿನಾಶಕಗಳ ಬಳಕೆ ಕಡಿಮೆಯಾದಾಗ ಜೇನು ನೊಣಗಳು ಜಾಸ್ತಿ ಕ್ರಿಯಾಶೀಲವಾಗಿರುತ್ತವೆ.
ಜೇನು ಹುಳುಗಳ ಉಳಿವು ಪ್ರಕೃತಿಯ ಉಳಿವು ಎಂಬುದನ್ನು  ಅರ್ಥಮಾಡಿಕೊಳ್ಳೋಣ.
#ಅಶ್ವಿನಿ ಮೂರ್ತಿ ಅಯ್ಯನಕಟ್ಟೆ
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ರಾಜ್ಯದಲ್ಲಿ ಬಿಸಿಲು ಬಿಸಿ ತೀವ್ರ : ಮೈಸೂರಿನಲ್ಲಿ ಸನ್ ಸ್ಟ್ರೋಕ್ ವಾರ್ಡ್ ಆರಂಭಿಸಿದ ಆಸ್ಪತ್ರೆ

ತಾಪಮಾನ ಏರಿಕೆಯಿಂದ ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ 30 ಹಾಸಿಗೆಗಳ ಸನ್ ಸ್ಟ್ರೋಕ್ ವಾರ್ಡ್…

13 hours ago

ರೈತರು ಇಂಧನದಾತರಾಗಬೇಕು – ಭೂಮಿ ಉಳಿಸಿ ಸಮ್ಮೇಳನದಲ್ಲಿ ಸಂದೇಶ

ಭೂಮಿ ಉಳಿಸಿ ಸಮ್ಮೇಳನದಲ್ಲಿ ನಿತಿನ್ ಗಡ್ಕರಿ, ರೈತರು ಇಂಧನ ಉತ್ಪಾದನೆಗೆ ಕೈಜೋಡಿಸಿದರೆ ಮಾಲಿನ್ಯ…

13 hours ago

ರೈತರ ಆದಾಯ ಹೆಚ್ಚಿಸಲು ಸಮಗ್ರ ಕೃಷಿ ಮಾದರಿ ಅಗತ್ಯ

ರೈತರಿಗೆ ಸರಳ ಹಣಕಾಸು ವ್ಯವಸ್ಥೆ ಅಗತ್ಯವಿದ್ದು, ಸಮಗ್ರ ಕೃಷಿ ಮಾದರಿಯಿಂದ ಆದಾಯ ಹೆಚ್ಚಿಸಬಹುದು…

13 hours ago

ಹವಾಮಾನ ವರದಿ | 23-04-2026 | ಏಪ್ರಿಲ್ 25 ರಿಂದ ಮಳೆಯ ಸಾಧ್ಯತೆ ಹೆಚ್ಚು

ರಾಜ್ಯದಲ್ಲಿ ಬಿಸಿಲು ಮುಂದುವರಿದರೂ, ಏಪ್ರಿಲ್ 25ರಿಂದ ಮಳೆಯ ಚಟುವಟಿಕೆ ಹೆಚ್ಚಾಗುವ ಸೂಚನೆ ಇದೆ.…

14 hours ago

ಹವಾಮಾನ ವರದಿ | 22-04-2026 | ಎ.25ರಿಂದ ಮತ್ತೆ ಮಳೆ – ಯಾವ ಭಾಗಕ್ಕೆ ಏನು ಮುನ್ಸೂಚನೆ?

ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಏಪ್ರಿಲ್ 25ರಿಂದ…

2 days ago

ಹವಾಮಾನ ವರದಿ | 21-04-2026 | ಕರಾವಳಿ-ಮಲೆನಾಡಿನಲ್ಲಿ ಮಳೆ ಜೋರಾಗಲಿದೆ, ಉತ್ತರ ಒಳನಾಡಿಗೂ ಗುಡುಗು ಮಳೆ..!

ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…

3 days ago