Advertisement
ಅನುಕ್ರಮ

ವಿಶ್ವ ಜೇನುಹುಳು ದಿನ | ಜೇನು ಹುಳುಗಳ ಉಳಿವು ಪ್ರಕೃತಿಯ ಉಳಿವು |

Share
ಅಮ್ಮನ ಹಾಲಿನಷ್ಟೇ ಶುದ್ಧವಾದ ಆಹಾರವೆಂದರೆ ಜೇನು.  ಪುಟ್ಟ ಮಕ್ಕಳಿಗೆ ಜೇನು ನೆಕ್ಕಿಸಿ ಹಿರಿಯರು ಆಶೀರ್ವದಿಸುವುದು ನಮ್ಮ ಭಾರತೀಯ ಕ್ರಮ. ಇದರಿಂದಲೇ ಜೇನಿನ ಪ್ರಾಮುಖ್ಯತೆಯ ಅರಿವಾಗುತ್ತದೆ. ಜೇನುಹುಳುಗಳು ಕೂಡು ಕುಟುಂಬದ ಸಂಕೇತ. ಖುಷಿ ಖುಷಿಯಾಗಿ  ಒಂದಾಗಿ ಇರುವ  , ಜೊತೆಯಾಗಿ ದುಡಿಯುವ ಈ ಜೇನು ನೊಣಗಳು ಕ್ರಿಯಾಶೀಲತೆ ಉತ್ತಮ ಉದಾಹರಣೆ.
ಇಂದು ಮೇ 20. ” ವಿಶ್ವ ಜೇನು ಹುಳು ದಿನ” . 2018 ನೇ ಇಸವಿಯಲ್ಲಿ ಮೊದಲ ಬಾರಿಗೆ ವಿಶ್ವಸಂಸ್ಥೆಯು  ಈ ದಿನದ ಆಚರಣೆಗೆ ಚಾಲನೆ ನೀಡಿತು.  ಗಮನೀಯವಾಗಿ ಕುಸಿಯುತ್ತಿರುವ ಜೇನುನೊಣಗಳ ಸಂತತಿಯ ಉಳಿವಿನ ಅಗತ್ಯವನ್ನು ಮನಗಾಣಿಸುವ ಪ್ರಯತ್ನವಾಗಿ ಈ ಆಚರಣೆ.  ಸ್ಲೋವೆನಿಯಾದ ಮಹಾನ್ ಜೇನು ಕೃಷಿಕ  ಆಂಟೆನ್ ಜಾನಿಯಾ  ಜನ್ಮ ದಿನ.  20 ಮೇ 1734.  ಈ ವರ್ಷದ ಘೋಷ ವಾಕ್ಯ Bee engaged, Biid back better for bees.” ಜೇನು ಹುಳುಗಳ ಉಳಿವಿಗಾಗಿ ಸೂಕ್ತ ತಾಣವನ್ನು ನಿರ್ಮಿಸೋಣ.
ಸುಮಾರು 20,000  ವಿವಿಧ ಜಾತಿಯ ಜೇನು ನೊಣಗಳಿವೆ.  ಅಮೇರಿಕಾ ಸಂಯುಕ್ತ ಸಂಸ್ಥಾನಗಳು, ಚೈನಾ, ಟರ್ಕಿಗಳು ಪ್ರಮುಖವಾಗಿ ಜೇನು ಉತ್ಪಾದನೆ ರಾಷ್ಟ್ರಗಳಾಗಿವೆ. ಜೇನು ಹುಳುಗಳು ನಮ್ಮ ಕೃಷಿ ಚಟುವಟಿಕೆಗಳ ಯಶಸ್ವಿನಲ್ಲಿ ಪ್ರಮುಖ ಪಾತ್ರವಹಿಸುತ್ತವೆ. ನಮ್ಮ ಹಣ್ಣು , ತರಕಾರಿಗಳಿರಲಿ, ಅಡಿಕೆ ತೆಂಗು ಹೂವುಗಳ ಪರಾಗಸ್ಪರ್ಶ ಕ್ರಿಯೆಯಲ್ಲಿ ಜೇನು ನೊಣಗಳು ಪ್ರಮುಖ ಪಾತ್ರ ನಿರ್ವಹಿಸುತ್ತವೆ.  ತಮ್ಮ ಆಹಾರಕ್ಕಾಗಿ ಹೂವುಗಳ ಮಕರಂದವನ್ನು ಹೀರುವ ಜೇನು ಹುಳುವಿನ  ಪ್ರಕ್ರಿಯೆಯು ಪರಾಗಸ್ಪರ್ಶಕ್ಕೆ ಕಾರಣವಾಗುತ್ತದೆ. ರಾಸಾಯನಿಕ ಕ್ರಿಮಿನಾಶಕಗಳ ಬಳಕೆ ಕಡಿಮೆಯಾದಾಗ ಜೇನು ನೊಣಗಳು ಜಾಸ್ತಿ ಕ್ರಿಯಾಶೀಲವಾಗಿರುತ್ತವೆ.
ಜೇನು ಹುಳುಗಳ ಉಳಿವು ಪ್ರಕೃತಿಯ ಉಳಿವು ಎಂಬುದನ್ನು  ಅರ್ಥಮಾಡಿಕೊಳ್ಳೋಣ.
#ಅಶ್ವಿನಿ ಮೂರ್ತಿ ಅಯ್ಯನಕಟ್ಟೆ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ಯುವಕರ ಮೊದಲ ಆದ್ಯತೆ ಏನಿರಬೇಕು? ರಾಜಕೀಯವಲ್ಲ, ಆರ್ಥಿಕ ಸ್ವಾವಲಂಬನೆ!

ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…

14 hours ago

ಹವಾಮಾನ ವರದಿ | 15-07-2026 | ರಾಜ್ಯದಲ್ಲಿ ಮಳೆ ಯಾಕೆ ಕಡಿಮೆಯಾಗಿದೆ ? ಜುಲೈ 16 ರಿಂದ ಎಲ್ಲೆಲ್ಲಿ ಮಳೆ ಆರಂಭವಾಗಲಿದೆ?

ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…

22 hours ago

ಕರ್ನಾಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…! ಕಾರಣ..?

ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…

1 day ago

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ

ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…

2 days ago

ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…

2 days ago

ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ

ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…

2 days ago