ಇಂದು ವಿಶ್ವ ಮಾವು ದಿನಾಚರಣೆ. ಪ್ರತೀ ವರ್ಷ ಜುಲೈ 22 ರಂದು ಮಾವಿನಹಣ್ಣಿನ ದಿನವನ್ನಾಗಿ ಆಚರಿಸಲಾಗುತ್ತದೆ. ದೇಶದಲ್ಲಿ ಮಾವು ಉತ್ಪಾದನೆಯಲ್ಲಿ ಕರ್ನಾಟಕ ಮೂರನೇ ಸ್ಥಾನದಲ್ಲಿದ್ದು, ರಾಜ್ಯದಲ್ಲಿ ಮಾವು ಉತ್ಪಾದನೆಯಲ್ಲಿ ಬೆಂಗಳೂರು ದಕ್ಷಿಣ ಎರಡನೇ ಸ್ಥಾನದಲ್ಲಿರುವುದು ವಿಶೇಷ. ಜಿಲ್ಲೆಯಲ್ಲಿ ಬೆಳೆದ ಮಾವಿಗೆ ವಿಶ್ವ ದರ್ಜೆಯ ಮಾನ್ಯತೆ ಇದೆ.
28 ತಳಿಗಳ ಸುಮಾರು 500 ಮಾವಿನ ಮರಗಳ ಕೃಷಿ ಮಾಡಿದ್ದು, ಉತ್ತಮ ಆದಾಯ ಸಿಗುತ್ತಿದೆ. ಜಿಲ್ಲೆಯಲ್ಲಿ ಮಾವನ್ನು ಹೆಚ್ಚಾಗಿ ಬೆಳೆಯಲಾಗುತ್ತದೆ. ಅಲ್ಲದೆ ಮಾವು ರೈತರ ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸುವ ಪ್ರಮುಖ ಬೆಳೆಯಾಗಿದೆ ಎನ್ನುತ್ತಾರೆ ಮಾವು ಬೆಳೆಗಾರರಾದ ಬಿ. ಸಿ. ವಾಸು. ಮತ್ತೋರ್ವ ರೈತ ಸಿದ್ದರಾಜು ಮಾತನಾಡುತ್ತಾ, ಜಿಲ್ಲೆಯಲ್ಲಿ ಬೆಳೆದ ಮಾವನ್ನು ಜಗತ್ತಿನಾದ್ಯಂತ ರಫ್ತು ಮಾಡಲಾಗುತ್ತದೆ. ಇಲ್ಲಿ ಬೆಳೆದ ಮಾವಿಗೆ ಅಪಾರ ಬೇಡಿಕೆಯಿದೆ ಎನ್ನುತ್ತಾರೆ.
ಪೋಷಕಾಂಶಗಳಿಂದ ಸಮೃದ್ಧವಾಗಿರುವ ಮಾವು ಎಲ್ಲರು ಇಷ್ಟಪಡುವ ಹಣ್ಣಾಗಿದೆ. ಮಾವು ಬೆಳೆಯಲು ತೋಟಗಾರಿಕೆ ಇಲಾಖೆ ವತಿಯಿಂದ ವಿವಿಧ ರೀತಿಯ ಸವಲತ್ತುಗಳನ್ನು ಒದಗಿಸಲಾಗುತ್ತಿದ್ದು, ರಿಯಾಯಿತಿ ದರದಲ್ಲಿ ಗುಣಮಟ್ಟದ ಕೀಟನಾಶಕಗಳ ಬಳಕೆಯ ಬಗ್ಗೆಯೂ ಮಾಹಿತಿ ನೀಡಲಾಗುತ್ತಿದೆ ಎನ್ನುತ್ತಾರೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಈಶ್ವರಪ್ಪ.
ರಾಜ್ಯದ ಹಲವೆಡೆ ಮುಂದಿನ ಐದು ದಿನ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿರುವ ಹವಾಮಾನ…
ಹಲಸಿನ ಕಾಯಿ, ಕಾಯಿತುರಿ ಹಾಗೂ ಜೀರಿಗೆ ಬಳಸಿ ತಯಾರಿಸುವ ಈ ಚಟ್ನಿ ಬಿಸಿ…
ಎಲ್ ನೀನೋ ಮತ್ತು ಲಾ ನೀನಾ ಪ್ರಭಾವದಿಂದ ಮಳೆಯ ಮಾದರಿಯಲ್ಲಿ ಅನಿಶ್ಚಿತತೆ ಹೆಚ್ಚಾಗುತ್ತಿದೆ.…
ಐವರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಬೆಂಗಮಲೆಯಲ್ಲಿ ತ್ಯಾಜ್ಯ ಎಸೆದ ಸುಳ್ಯ ನಿವಾಸಿಗೆ ₹5,000…
ಅಡಿಕೆಯ ಆರೋಗ್ಯ ಸುರಕ್ಷತೆ ಮತ್ತು ಎಲೆಚುಕ್ಕೆ ರೋಗ ನಿಯಂತ್ರಣ ಕುರಿತು ಕ್ಯಾಂಪ್ಕೋ ನಿಯೋಗವು…
ರಾಜ್ಯದಲ್ಲಿ ಮುಂಗಾರು ದುರ್ಬಲಗೊಂಡಿದ್ದು ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಸಾಧ್ಯತೆ ಕಡಿಮೆ…