ಇಂದು ವಿಶ್ವ ಮಾವು ದಿನಾಚರಣೆ. ಪ್ರತೀ ವರ್ಷ ಜುಲೈ 22 ರಂದು ಮಾವಿನಹಣ್ಣಿನ ದಿನವನ್ನಾಗಿ ಆಚರಿಸಲಾಗುತ್ತದೆ. ದೇಶದಲ್ಲಿ ಮಾವು ಉತ್ಪಾದನೆಯಲ್ಲಿ ಕರ್ನಾಟಕ ಮೂರನೇ ಸ್ಥಾನದಲ್ಲಿದ್ದು, ರಾಜ್ಯದಲ್ಲಿ ಮಾವು ಉತ್ಪಾದನೆಯಲ್ಲಿ ಬೆಂಗಳೂರು ದಕ್ಷಿಣ ಎರಡನೇ ಸ್ಥಾನದಲ್ಲಿರುವುದು ವಿಶೇಷ. ಜಿಲ್ಲೆಯಲ್ಲಿ ಬೆಳೆದ ಮಾವಿಗೆ ವಿಶ್ವ ದರ್ಜೆಯ ಮಾನ್ಯತೆ ಇದೆ.
28 ತಳಿಗಳ ಸುಮಾರು 500 ಮಾವಿನ ಮರಗಳ ಕೃಷಿ ಮಾಡಿದ್ದು, ಉತ್ತಮ ಆದಾಯ ಸಿಗುತ್ತಿದೆ. ಜಿಲ್ಲೆಯಲ್ಲಿ ಮಾವನ್ನು ಹೆಚ್ಚಾಗಿ ಬೆಳೆಯಲಾಗುತ್ತದೆ. ಅಲ್ಲದೆ ಮಾವು ರೈತರ ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸುವ ಪ್ರಮುಖ ಬೆಳೆಯಾಗಿದೆ ಎನ್ನುತ್ತಾರೆ ಮಾವು ಬೆಳೆಗಾರರಾದ ಬಿ. ಸಿ. ವಾಸು. ಮತ್ತೋರ್ವ ರೈತ ಸಿದ್ದರಾಜು ಮಾತನಾಡುತ್ತಾ, ಜಿಲ್ಲೆಯಲ್ಲಿ ಬೆಳೆದ ಮಾವನ್ನು ಜಗತ್ತಿನಾದ್ಯಂತ ರಫ್ತು ಮಾಡಲಾಗುತ್ತದೆ. ಇಲ್ಲಿ ಬೆಳೆದ ಮಾವಿಗೆ ಅಪಾರ ಬೇಡಿಕೆಯಿದೆ ಎನ್ನುತ್ತಾರೆ.
ಪೋಷಕಾಂಶಗಳಿಂದ ಸಮೃದ್ಧವಾಗಿರುವ ಮಾವು ಎಲ್ಲರು ಇಷ್ಟಪಡುವ ಹಣ್ಣಾಗಿದೆ. ಮಾವು ಬೆಳೆಯಲು ತೋಟಗಾರಿಕೆ ಇಲಾಖೆ ವತಿಯಿಂದ ವಿವಿಧ ರೀತಿಯ ಸವಲತ್ತುಗಳನ್ನು ಒದಗಿಸಲಾಗುತ್ತಿದ್ದು, ರಿಯಾಯಿತಿ ದರದಲ್ಲಿ ಗುಣಮಟ್ಟದ ಕೀಟನಾಶಕಗಳ ಬಳಕೆಯ ಬಗ್ಗೆಯೂ ಮಾಹಿತಿ ನೀಡಲಾಗುತ್ತಿದೆ ಎನ್ನುತ್ತಾರೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಈಶ್ವರಪ್ಪ.
ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…
ಮುಂಗಾರು ಮಳೆಯ ಕೊರತೆ ಎದುರಿಸುತ್ತಿರುವ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಹೆಚ್ಚಿಸಲು ಸರ್ಕಾರ…
ಕಸ್ತೂರಿ ರಂಗನ್ ವರದಿ ಜಾರಿಗೆ ಕರ್ನಾಟಕ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಶಿಕ್ಷಣ…
ಭಾರತದ 126 ಪ್ರಮುಖ ನಗರಗಳ ಹವಾಮಾನ ಸಿದ್ಧತೆಯನ್ನು ಅಳೆಯಲಾಗಿದ್ದರೂ, 2021ರ ಮೌಲ್ಯಮಾಪನದಲ್ಲಿ ರಾಷ್ಟ್ರೀಯ…
ಭಾರತದ ಕಾಫಿ ರಫ್ತು ಗಳಿಕೆ 2021-22ರ ಸುಮಾರು 1 ಶತಕೋಟಿ ಡಾಲರ್ನಿಂದ 2025-26ರಲ್ಲಿ…
ಮೀನಿನ ಮುಳ್ಳು ಮತ್ತು ಹುರುಪೆಯನ್ನು ವೈಜ್ಞಾನಿಕವಾಗಿ ಸಂಸ್ಕರಿಸಿ ಹಲ್ಲುಗಳ ಪುನರ್ ನಿರ್ಮಾಣ ಹಾಗೂ…