ಇಂದು ವಿಶ್ವ ಪಾರ್ಶ್ವವಾಯು ದಿನ ( ಅಕ್ಟೋಬರ್ 29)

October 29, 2020
2:14 PM

ಬದುಕಿನುದ್ದಕ್ಕೂ ನಾವು ಒಬ್ಬರಿಗೊಬ್ಬರು ಆಸರೆಯಾಗಿರುವುದು ಅನಿವಾರ್ಯ. ಯಾರ ನೆರವೂ ನನಗೆ ಅಗತ್ಯವಿಲ್ಲವೆಂಬವರಿಗೂ ಇದರ ಅಗತ್ಯ ಖಂಡಿತಾ ಇದೆ. ಕೈ, ಕಾಲು ಗಟ್ಟಿಮುಟ್ಟಾಗಿರುವವರೆಗೆ ನಾನು ಯಾರಿಗೂ ಹೊರೆಯಲಾಗಲಾರೆ. ನನ್ನ ಕೆಲಸ ನಾನೇ ಮಾಡಿಕೊಳ್ಳಬಲ್ಲೆ‌ ಎಂಬ ವಿಶ್ವಾಸ ಜೀವನವನ್ನು ಹಗುರವಾಗಿಸುತ್ತದೆ. ಬದುಕಿನ ಓಟ ಒಂದೇ ರೀತಿ ಇರುವುದಿಲ್ಲ. ಒಂದು ವಿಷ ಗಳಿಗೆಯಲ್ಲಿ ಆರೋಗ್ಯ ಕೈ ಕೊಡುತ್ತದೆ. ಇಂದು ಹೃದಯದ ಮಧುಮೇಹ, ಕ್ಯಾನ್ಸರ್ ನ ಬಳಿಕ ಹೆಚ್ಚಿನ ಸಂಖ್ಯೆಯ ಜನರು ಬಲಿಯಾಗುತ್ತಿರುವುದು ‘ಪಾರ್ಶ್ವ ವಾಯುವಿಗೆ’. ಇದರ ಗಂಭೀರತೆಯನ್ನು ಜನರು ಅರಿಯುವುದು ಅನಿವಾರ್ಯವಾಗಿದೆ.

Advertisement
Advertisement

“ನಾಲ್ವರಲ್ಲಿ ಒಬ್ಬರಿಗೆ ಪಾರ್ಶ್ವವಾಯು , ಅದರಲ್ಲಿ ನೀವು ಒಬ್ಬರಾಗ ಬೇಡಿ” ಎಂಬುದು ಈ ಬಾರಿಯ ಘೋಷ ವಾಕ್ಯ.‌
ಕೋವಿಡ್ ಸೋಂಕಿನಿಂದ ಮೆದುಳಿನ ಮೇಲೆ ತೀವ್ರವಾದ ಹಾನಿಯುಂಟಾಗುತ್ತದೆ. ಉಸಿರಾಟದ ಸಮಸ್ಯೆಯೊಂದಿಗೆ, ರೋಗನಿರೋಧಕ ಶಕ್ತಿಯೂ ಕುಂದುತ್ತದೆ. ರಕ್ತನಾಳಗಳಿಗೆ ಹಾನಿಯಾಗುವುದರಿಂದ ರಕ್ತ ಹೆಪ್ಪುಗಟ್ಟುತ್ತದೆ. ಇದರಿಂದ ಮೆದುಳಿನ ಕಾರ್ಯ ಕುಂಠಿತವಾಗುತ್ತದೆ. ಅಗತ್ಯ ಪ್ರಮಾಣದ ಆಮ್ಲಜನಕ ಲಭ್ಯವಾಗದೆ ಪಾರ್ಶ್ವವಾಯು ಸಮಸ್ಯೆ ಉಂಟಾಗಬಹುದೆಂದು ತಜ್ಞ ರು ಅಭಿಪ್ರಾಯ ಪಡುತ್ತಾರೆ. ಸಾಮಾನ್ಯವಾಗಿ ಒತ್ತಡದ ಜೀವನ ಶೈಲಿ , ಅವೈಜ್ಞಾನಿಕ ಆಹಾರ ಕ್ರಮಗಳು, ಕಡಿಮೆ ದೈಹಿಕ ಚಟುವಟಿಕೆಗಳು ಕಾರಣವಾಗಿವೆ.

ಆರೋಗ್ಯದಲ್ಲಿ ಸ್ವಲ್ಪ ಏರು ಪೇರಾದರೂ ತಕ್ಷಣವೇ ವೈದ್ಯಕೀಯ ಚಿಕಿತ್ಸೆಗೆ ಒಳ ಪಟ್ಟರೆ ಪಾತ್ರ ಪಾರ್ಶ್ವವಾಯುವಿನಿಂದ ಪಾರಾಗಾಬಹುದು. ಇಲ್ಲಿ ಸಮಯಕ್ಕೆ ಬಹಳ ಮಹತ್ವವಿದೆ. ನಿಮಿಷಗಳ ವಿಳಂಬವೂ ದುಬಾರಿ ಪರಿಣಾಮಕ್ಕೆ ಕಾರಣವಾಗ ಬಹುದು. ಪಾರ್ಶ್ವವಾಯುವಿನ ಕುರಿತು ಜನಜಾಗೃತಿಯ ಅಗತ್ಯವಿದೆ.

-ಅಶ್ವಿನಿ ಮೂರ್ತಿ ಅಯ್ಯನಕಟ್ಟೆ

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

ಇದನ್ನೂ ಓದಿ

“ಕ್ಯಾನ್ಸರ್ ಮ್ಯಾಪಿಂಗ್” – ರೋಗ ತಡೆಯುವ ಮೊದಲ ಹೆಜ್ಜೆ
January 30, 2026
8:05 AM
by: ಮಿರರ್‌ ಡೆಸ್ಕ್
ರಾಜ್ಯದಲ್ಲಿ 3 ವರ್ಷದಲ್ಲಿ 432 ಮಂದಿ ಅಕ್ರಮ ವಿದೇಶಿ ವಲಸಿಗರು ಪತ್ತೆ | ಬೆಂಗಳೂರು ನಗರದಲ್ಲೇ 328 ಪ್ರಕರಣ
January 30, 2026
7:57 AM
by: ಮಿರರ್‌ ಡೆಸ್ಕ್
ಸರ್ಕಾರಿ ಶಾಲೆ ಮಕ್ಕಳಿಗೆ ಚೆಸ್ ಪಾಠ | ದ.ಕ ದಲ್ಲಿ “ಚೆಸ್ ಇನ್ ಸ್ಕೂಲ್” ಆರಂಭ | ಗ್ರಾಮೀಣ ಮಕ್ಕಳಿಗೆ ಬೌದ್ಧಿಕ ಅವಕಾಶ
January 29, 2026
2:18 PM
by: ದ ರೂರಲ್ ಮಿರರ್.ಕಾಂ
ದೇಶದಲ್ಲಿ ರಬಿ ಋತು ಬಿತ್ತನೆ ದಾಖಲೆ ಹೆಚ್ಚಳ | 660.48 ಲಕ್ಷ ಹೆಕ್ಟೇರ್‌ಗೆ ಏರಿದ ಒಟ್ಟು ವಿಸ್ತೀರ್ಣ
January 29, 2026
7:18 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror