ಇಂದು ವಿಶ್ವ ಪಾರ್ಶ್ವವಾಯು ದಿನ ( ಅಕ್ಟೋಬರ್ 29)

October 29, 2020
2:14 PM

ಬದುಕಿನುದ್ದಕ್ಕೂ ನಾವು ಒಬ್ಬರಿಗೊಬ್ಬರು ಆಸರೆಯಾಗಿರುವುದು ಅನಿವಾರ್ಯ. ಯಾರ ನೆರವೂ ನನಗೆ ಅಗತ್ಯವಿಲ್ಲವೆಂಬವರಿಗೂ ಇದರ ಅಗತ್ಯ ಖಂಡಿತಾ ಇದೆ. ಕೈ, ಕಾಲು ಗಟ್ಟಿಮುಟ್ಟಾಗಿರುವವರೆಗೆ ನಾನು ಯಾರಿಗೂ ಹೊರೆಯಲಾಗಲಾರೆ. ನನ್ನ ಕೆಲಸ ನಾನೇ ಮಾಡಿಕೊಳ್ಳಬಲ್ಲೆ‌ ಎಂಬ ವಿಶ್ವಾಸ ಜೀವನವನ್ನು ಹಗುರವಾಗಿಸುತ್ತದೆ. ಬದುಕಿನ ಓಟ ಒಂದೇ ರೀತಿ ಇರುವುದಿಲ್ಲ. ಒಂದು ವಿಷ ಗಳಿಗೆಯಲ್ಲಿ ಆರೋಗ್ಯ ಕೈ ಕೊಡುತ್ತದೆ. ಇಂದು ಹೃದಯದ ಮಧುಮೇಹ, ಕ್ಯಾನ್ಸರ್ ನ ಬಳಿಕ ಹೆಚ್ಚಿನ ಸಂಖ್ಯೆಯ ಜನರು ಬಲಿಯಾಗುತ್ತಿರುವುದು ‘ಪಾರ್ಶ್ವ ವಾಯುವಿಗೆ’. ಇದರ ಗಂಭೀರತೆಯನ್ನು ಜನರು ಅರಿಯುವುದು ಅನಿವಾರ್ಯವಾಗಿದೆ.

“ನಾಲ್ವರಲ್ಲಿ ಒಬ್ಬರಿಗೆ ಪಾರ್ಶ್ವವಾಯು , ಅದರಲ್ಲಿ ನೀವು ಒಬ್ಬರಾಗ ಬೇಡಿ” ಎಂಬುದು ಈ ಬಾರಿಯ ಘೋಷ ವಾಕ್ಯ.‌
ಕೋವಿಡ್ ಸೋಂಕಿನಿಂದ ಮೆದುಳಿನ ಮೇಲೆ ತೀವ್ರವಾದ ಹಾನಿಯುಂಟಾಗುತ್ತದೆ. ಉಸಿರಾಟದ ಸಮಸ್ಯೆಯೊಂದಿಗೆ, ರೋಗನಿರೋಧಕ ಶಕ್ತಿಯೂ ಕುಂದುತ್ತದೆ. ರಕ್ತನಾಳಗಳಿಗೆ ಹಾನಿಯಾಗುವುದರಿಂದ ರಕ್ತ ಹೆಪ್ಪುಗಟ್ಟುತ್ತದೆ. ಇದರಿಂದ ಮೆದುಳಿನ ಕಾರ್ಯ ಕುಂಠಿತವಾಗುತ್ತದೆ. ಅಗತ್ಯ ಪ್ರಮಾಣದ ಆಮ್ಲಜನಕ ಲಭ್ಯವಾಗದೆ ಪಾರ್ಶ್ವವಾಯು ಸಮಸ್ಯೆ ಉಂಟಾಗಬಹುದೆಂದು ತಜ್ಞ ರು ಅಭಿಪ್ರಾಯ ಪಡುತ್ತಾರೆ. ಸಾಮಾನ್ಯವಾಗಿ ಒತ್ತಡದ ಜೀವನ ಶೈಲಿ , ಅವೈಜ್ಞಾನಿಕ ಆಹಾರ ಕ್ರಮಗಳು, ಕಡಿಮೆ ದೈಹಿಕ ಚಟುವಟಿಕೆಗಳು ಕಾರಣವಾಗಿವೆ.

ಆರೋಗ್ಯದಲ್ಲಿ ಸ್ವಲ್ಪ ಏರು ಪೇರಾದರೂ ತಕ್ಷಣವೇ ವೈದ್ಯಕೀಯ ಚಿಕಿತ್ಸೆಗೆ ಒಳ ಪಟ್ಟರೆ ಪಾತ್ರ ಪಾರ್ಶ್ವವಾಯುವಿನಿಂದ ಪಾರಾಗಾಬಹುದು. ಇಲ್ಲಿ ಸಮಯಕ್ಕೆ ಬಹಳ ಮಹತ್ವವಿದೆ. ನಿಮಿಷಗಳ ವಿಳಂಬವೂ ದುಬಾರಿ ಪರಿಣಾಮಕ್ಕೆ ಕಾರಣವಾಗ ಬಹುದು. ಪಾರ್ಶ್ವವಾಯುವಿನ ಕುರಿತು ಜನಜಾಗೃತಿಯ ಅಗತ್ಯವಿದೆ.

-ಅಶ್ವಿನಿ ಮೂರ್ತಿ ಅಯ್ಯನಕಟ್ಟೆ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

ಇದನ್ನೂ ಓದಿ

ದೇಶಾದ್ಯಂತ ಹವಾಮಾನದಲ್ಲಿ ಬದಲಾವಣೆ..! 13 ರಾಜ್ಯಗಳಲ್ಲಿ ಮಳೆ-ಚಂಡಮಾರುತ ಎಚ್ಚರಿಕೆ, ಉತ್ತರ ಭಾರತದಲ್ಲಿ 40°C ದಾಟಿದ ಉಷ್ಣತೆ
April 18, 2026
7:22 AM
by: ಮಿರರ್‌ ಡೆಸ್ಕ್
ಕಲಬುರಗಿಯಲ್ಲಿ 43.2°C ತಾಪಮಾನ ದಾಖಲು..! ರಾಜ್ಯದಲ್ಲಿ ಬಿಸಿ ಏರಿಕೆ – ಮುಂದಿನ 5 ದಿನ ಎಚ್ಚರಿಕೆ
April 18, 2026
7:03 AM
by: ಮಿರರ್‌ ಡೆಸ್ಕ್
ಒಡಿಶಾ ಕರಾವಳಿಯಲ್ಲಿ ಅಕ್ರಮ ಅಡಿಕೆ ಸಾಗಣೆ ಪತ್ತೆ – 700 ಕ್ಕೂ ಹೆಚ್ಚು ಗೋಣಿ ಚೀಲ ವಶಕ್ಕೆ
April 16, 2026
7:25 AM
by: ದ ರೂರಲ್ ಮಿರರ್.ಕಾಂ
ಬೇಸಿಗೆ ಬಿತ್ತನೆ ಭರ್ಜರಿ ಏರಿಕೆ..! 64 ಲಕ್ಷ ಹೆಕ್ಟೇರ್ ದಾಟಿದ ಕೃಷಿ ವ್ಯಾಪ್ತಿ, 0.77 ಲಕ್ಷ ಹೆಕ್ಟೇರ್ ಹೆಚ್ಚಳ
April 15, 2026
7:47 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror