Advertisement
MIRROR FOCUS

ಇಂದು ವಿಶ್ವ ಪಾರ್ಶ್ವವಾಯು ದಿನ ( ಅಕ್ಟೋಬರ್ 29)

Share

ಬದುಕಿನುದ್ದಕ್ಕೂ ನಾವು ಒಬ್ಬರಿಗೊಬ್ಬರು ಆಸರೆಯಾಗಿರುವುದು ಅನಿವಾರ್ಯ. ಯಾರ ನೆರವೂ ನನಗೆ ಅಗತ್ಯವಿಲ್ಲವೆಂಬವರಿಗೂ ಇದರ ಅಗತ್ಯ ಖಂಡಿತಾ ಇದೆ. ಕೈ, ಕಾಲು ಗಟ್ಟಿಮುಟ್ಟಾಗಿರುವವರೆಗೆ ನಾನು ಯಾರಿಗೂ ಹೊರೆಯಲಾಗಲಾರೆ. ನನ್ನ ಕೆಲಸ ನಾನೇ ಮಾಡಿಕೊಳ್ಳಬಲ್ಲೆ‌ ಎಂಬ ವಿಶ್ವಾಸ ಜೀವನವನ್ನು ಹಗುರವಾಗಿಸುತ್ತದೆ. ಬದುಕಿನ ಓಟ ಒಂದೇ ರೀತಿ ಇರುವುದಿಲ್ಲ. ಒಂದು ವಿಷ ಗಳಿಗೆಯಲ್ಲಿ ಆರೋಗ್ಯ ಕೈ ಕೊಡುತ್ತದೆ. ಇಂದು ಹೃದಯದ ಮಧುಮೇಹ, ಕ್ಯಾನ್ಸರ್ ನ ಬಳಿಕ ಹೆಚ್ಚಿನ ಸಂಖ್ಯೆಯ ಜನರು ಬಲಿಯಾಗುತ್ತಿರುವುದು ‘ಪಾರ್ಶ್ವ ವಾಯುವಿಗೆ’. ಇದರ ಗಂಭೀರತೆಯನ್ನು ಜನರು ಅರಿಯುವುದು ಅನಿವಾರ್ಯವಾಗಿದೆ.

“ನಾಲ್ವರಲ್ಲಿ ಒಬ್ಬರಿಗೆ ಪಾರ್ಶ್ವವಾಯು , ಅದರಲ್ಲಿ ನೀವು ಒಬ್ಬರಾಗ ಬೇಡಿ” ಎಂಬುದು ಈ ಬಾರಿಯ ಘೋಷ ವಾಕ್ಯ.‌
ಕೋವಿಡ್ ಸೋಂಕಿನಿಂದ ಮೆದುಳಿನ ಮೇಲೆ ತೀವ್ರವಾದ ಹಾನಿಯುಂಟಾಗುತ್ತದೆ. ಉಸಿರಾಟದ ಸಮಸ್ಯೆಯೊಂದಿಗೆ, ರೋಗನಿರೋಧಕ ಶಕ್ತಿಯೂ ಕುಂದುತ್ತದೆ. ರಕ್ತನಾಳಗಳಿಗೆ ಹಾನಿಯಾಗುವುದರಿಂದ ರಕ್ತ ಹೆಪ್ಪುಗಟ್ಟುತ್ತದೆ. ಇದರಿಂದ ಮೆದುಳಿನ ಕಾರ್ಯ ಕುಂಠಿತವಾಗುತ್ತದೆ. ಅಗತ್ಯ ಪ್ರಮಾಣದ ಆಮ್ಲಜನಕ ಲಭ್ಯವಾಗದೆ ಪಾರ್ಶ್ವವಾಯು ಸಮಸ್ಯೆ ಉಂಟಾಗಬಹುದೆಂದು ತಜ್ಞ ರು ಅಭಿಪ್ರಾಯ ಪಡುತ್ತಾರೆ. ಸಾಮಾನ್ಯವಾಗಿ ಒತ್ತಡದ ಜೀವನ ಶೈಲಿ , ಅವೈಜ್ಞಾನಿಕ ಆಹಾರ ಕ್ರಮಗಳು, ಕಡಿಮೆ ದೈಹಿಕ ಚಟುವಟಿಕೆಗಳು ಕಾರಣವಾಗಿವೆ.

ಆರೋಗ್ಯದಲ್ಲಿ ಸ್ವಲ್ಪ ಏರು ಪೇರಾದರೂ ತಕ್ಷಣವೇ ವೈದ್ಯಕೀಯ ಚಿಕಿತ್ಸೆಗೆ ಒಳ ಪಟ್ಟರೆ ಪಾತ್ರ ಪಾರ್ಶ್ವವಾಯುವಿನಿಂದ ಪಾರಾಗಾಬಹುದು. ಇಲ್ಲಿ ಸಮಯಕ್ಕೆ ಬಹಳ ಮಹತ್ವವಿದೆ. ನಿಮಿಷಗಳ ವಿಳಂಬವೂ ದುಬಾರಿ ಪರಿಣಾಮಕ್ಕೆ ಕಾರಣವಾಗ ಬಹುದು. ಪಾರ್ಶ್ವವಾಯುವಿನ ಕುರಿತು ಜನಜಾಗೃತಿಯ ಅಗತ್ಯವಿದೆ.

-ಅಶ್ವಿನಿ ಮೂರ್ತಿ ಅಯ್ಯನಕಟ್ಟೆ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ಭಾರತದ ಕಸದಿಂದ ₹4.3 ಲಕ್ಷ ಕೋಟಿ ಮಾರುಕಟ್ಟೆ ಅವಕಾಶ..! 26 ಲಕ್ಷ ಉದ್ಯೋಗ ಸೃಷ್ಟಿಸುವ ಸಾಮರ್ಥ್ಯ…!

ಭಾರತದ ನಗರಗಳ ಸಾವಯವ ತ್ಯಾಜ್ಯವನ್ನು ಸಮರ್ಥವಾಗಿ ನಿರ್ವಹಿಸಿದರೆ 2047ರ ವೇಳೆಗೆ ₹4.3 ಲಕ್ಷ…

5 hours ago

‘ಸೂಪರ್‌ ಎಲ್‌ ನಿನೊ’ ಆತಂಕ | ಭಾರತದಲ್ಲಿ ಮುಂಗಾರು ಸಂಕಷ್ಟ – ಕೃಷಿ ಮತ್ತು ವಿದ್ಯುತ್‌ ಬೇಡಿಕೆಗೆ ದೊಡ್ಡ ಸವಾಲು?

ಸೂಪರ್‌ ಎಲ್‌ ನಿನೊ ರೂಪುಗೊಳ್ಳುವ ಸಾಧ್ಯತೆ ಹೆಚ್ಚಿದ್ದು, ಭಾರತದ ಮುಂಗಾರು ಮಳೆ, ಕೃಷಿ…

1 day ago

ಗ್ರಾಮೀಣ ಕರಕುಶಲ ಗ್ರಾಮಗಳಿಗೆ ಹೊಸ ಜೀವ ತುಂಬುತ್ತಿರುವ ಪ್ರವಾಸೋದ್ಯಮ – ವಿಯೆಟ್ನಾಂ ಮಾದರಿ ಗಮನ ಸೆಳೆಯುತ್ತಿದೆ

ಗ್ರಾಮೀಣ ಪ್ರವಾಸೋದ್ಯಮದ ಮೂಲಕ ವಿಯೆಟ್ನಾಂನಲ್ಲಿ ಸಾಂಪ್ರದಾಯಿಕ ಕರಕುಶಲ ಗ್ರಾಮಗಳಿಗೆ ಹೊಸ ಜೀವ ಸಿಕ್ಕಿದೆ.…

1 day ago

ಮಿಜೋರಾಂ ಅಭಿವೃದ್ಧಿಗೆ ₹339 ಕೋಟಿ ಹೂಡಿಕೆ – ಕೃಷಿ, ಪ್ರವಾಸೋದ್ಯಮ, ರಸ್ತೆ ಸಂಪರ್ಕಕ್ಕೆ ಉತ್ತೇಜನ

ಮಿಜೋರಾಂನಲ್ಲಿ ₹339 ಕೋಟಿ ಅಭಿವೃದ್ಧಿ ಯೋಜನೆಗಳಿಗೆ ಹೂಡಿಕೆ ಮಾಡಿರುವ NEC, ಕೃಷಿ, ಅಡಿಕೆ…

1 day ago

ದೇಶವ್ಯಾಪಿ ಗೋಹತ್ಯೆ ನಿಷೇಧ ಅಥವಾ ‘ರಾಷ್ಟ್ರೀಯ ಪ್ರಾಣಿ’ ಸ್ಥಾನಮಾನಕ್ಕೆ ಪ್ರಸ್ತಾವನೆ ಇಲ್ಲ

ಹಸುವಿಗೆ ರಾಷ್ಟ್ರೀಯ ಪ್ರಾಣಿಯ ಸ್ಥಾನಮಾನ ನೀಡುವುದು ಅಥವಾ ದೇಶವ್ಯಾಪಿ ಗೋಹತ್ಯೆ ನಿಷೇಧ ಜಾರಿಗೊಳಿಸುವ…

1 day ago