Advertisement
MIRROR FOCUS

ಇಂದು ವಿಶ್ವ ಪಾರ್ಶ್ವವಾಯು ದಿನ ( ಅಕ್ಟೋಬರ್ 29)

Share

ಬದುಕಿನುದ್ದಕ್ಕೂ ನಾವು ಒಬ್ಬರಿಗೊಬ್ಬರು ಆಸರೆಯಾಗಿರುವುದು ಅನಿವಾರ್ಯ. ಯಾರ ನೆರವೂ ನನಗೆ ಅಗತ್ಯವಿಲ್ಲವೆಂಬವರಿಗೂ ಇದರ ಅಗತ್ಯ ಖಂಡಿತಾ ಇದೆ. ಕೈ, ಕಾಲು ಗಟ್ಟಿಮುಟ್ಟಾಗಿರುವವರೆಗೆ ನಾನು ಯಾರಿಗೂ ಹೊರೆಯಲಾಗಲಾರೆ. ನನ್ನ ಕೆಲಸ ನಾನೇ ಮಾಡಿಕೊಳ್ಳಬಲ್ಲೆ‌ ಎಂಬ ವಿಶ್ವಾಸ ಜೀವನವನ್ನು ಹಗುರವಾಗಿಸುತ್ತದೆ. ಬದುಕಿನ ಓಟ ಒಂದೇ ರೀತಿ ಇರುವುದಿಲ್ಲ. ಒಂದು ವಿಷ ಗಳಿಗೆಯಲ್ಲಿ ಆರೋಗ್ಯ ಕೈ ಕೊಡುತ್ತದೆ. ಇಂದು ಹೃದಯದ ಮಧುಮೇಹ, ಕ್ಯಾನ್ಸರ್ ನ ಬಳಿಕ ಹೆಚ್ಚಿನ ಸಂಖ್ಯೆಯ ಜನರು ಬಲಿಯಾಗುತ್ತಿರುವುದು ‘ಪಾರ್ಶ್ವ ವಾಯುವಿಗೆ’. ಇದರ ಗಂಭೀರತೆಯನ್ನು ಜನರು ಅರಿಯುವುದು ಅನಿವಾರ್ಯವಾಗಿದೆ.

“ನಾಲ್ವರಲ್ಲಿ ಒಬ್ಬರಿಗೆ ಪಾರ್ಶ್ವವಾಯು , ಅದರಲ್ಲಿ ನೀವು ಒಬ್ಬರಾಗ ಬೇಡಿ” ಎಂಬುದು ಈ ಬಾರಿಯ ಘೋಷ ವಾಕ್ಯ.‌
ಕೋವಿಡ್ ಸೋಂಕಿನಿಂದ ಮೆದುಳಿನ ಮೇಲೆ ತೀವ್ರವಾದ ಹಾನಿಯುಂಟಾಗುತ್ತದೆ. ಉಸಿರಾಟದ ಸಮಸ್ಯೆಯೊಂದಿಗೆ, ರೋಗನಿರೋಧಕ ಶಕ್ತಿಯೂ ಕುಂದುತ್ತದೆ. ರಕ್ತನಾಳಗಳಿಗೆ ಹಾನಿಯಾಗುವುದರಿಂದ ರಕ್ತ ಹೆಪ್ಪುಗಟ್ಟುತ್ತದೆ. ಇದರಿಂದ ಮೆದುಳಿನ ಕಾರ್ಯ ಕುಂಠಿತವಾಗುತ್ತದೆ. ಅಗತ್ಯ ಪ್ರಮಾಣದ ಆಮ್ಲಜನಕ ಲಭ್ಯವಾಗದೆ ಪಾರ್ಶ್ವವಾಯು ಸಮಸ್ಯೆ ಉಂಟಾಗಬಹುದೆಂದು ತಜ್ಞ ರು ಅಭಿಪ್ರಾಯ ಪಡುತ್ತಾರೆ. ಸಾಮಾನ್ಯವಾಗಿ ಒತ್ತಡದ ಜೀವನ ಶೈಲಿ , ಅವೈಜ್ಞಾನಿಕ ಆಹಾರ ಕ್ರಮಗಳು, ಕಡಿಮೆ ದೈಹಿಕ ಚಟುವಟಿಕೆಗಳು ಕಾರಣವಾಗಿವೆ.

ಆರೋಗ್ಯದಲ್ಲಿ ಸ್ವಲ್ಪ ಏರು ಪೇರಾದರೂ ತಕ್ಷಣವೇ ವೈದ್ಯಕೀಯ ಚಿಕಿತ್ಸೆಗೆ ಒಳ ಪಟ್ಟರೆ ಪಾತ್ರ ಪಾರ್ಶ್ವವಾಯುವಿನಿಂದ ಪಾರಾಗಾಬಹುದು. ಇಲ್ಲಿ ಸಮಯಕ್ಕೆ ಬಹಳ ಮಹತ್ವವಿದೆ. ನಿಮಿಷಗಳ ವಿಳಂಬವೂ ದುಬಾರಿ ಪರಿಣಾಮಕ್ಕೆ ಕಾರಣವಾಗ ಬಹುದು. ಪಾರ್ಶ್ವವಾಯುವಿನ ಕುರಿತು ಜನಜಾಗೃತಿಯ ಅಗತ್ಯವಿದೆ.

-ಅಶ್ವಿನಿ ಮೂರ್ತಿ ಅಯ್ಯನಕಟ್ಟೆ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ರಾಜ್ಯದಲ್ಲಿ ಭಾರೀ ಮಳೆ ಆರ್ಭಟ – ಕೆಲವು ಜಿಲ್ಲೆಗಳಲ್ಲಿ ಇಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ರಾಜ್ಯದ ಹಲವೆಡೆ ಭಾರೀ ಮಳೆಯ ಹಿನ್ನೆಲೆಯಲ್ಲಿ ಕೆಲವು ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.…

3 hours ago

ಆಹಾರ-ನಿದ್ರೆ ಪರಸ್ಪರ ಪೂರಕ; ಉತ್ತಮ ನಿದ್ರೆಗೆ ಹಸಿವು ಅಗತ್ಯ: ರಾಘವೇಶ್ವರ ಶ್ರೀ

ಉತ್ತಮ ಆರೋಗ್ಯಕ್ಕೆ ಸರಿಯಾದ ಆಹಾರ ಮತ್ತು ನಿದ್ರೆ ಎರಡೂ ಅವಿಭಾಜ್ಯ ಎಂದು ಶ್ರೀ…

12 hours ago

ಕೃಷಿಕರ ಮಿತ್ರ ಸಾಯಿಶೇಖರ್‌ ಕರಿಕಳ ಅವರಿಗೆ ರೈತ ರತ್ನ ಪ್ರಶಸ್ತಿ

ಮಳೆ ಮಾಹಿತಿ ಮೂಲಕ ಕೃಷಿಕರಿಗೆ ನೆರವಾಗುತ್ತಿರುವ ಸಾಯಿಶೇಖರ್‌ ಕರಿಕಳ ಅವರಿಗೆ ರೈತ ರತ್ನ…

12 hours ago

ಮಂಗಳೂರಿನಲ್ಲಿ ರಾಷ್ಟ್ರೀಯ ಚೆಸ್ ಚಾಂಪಿಯನ್ ಶಿಪ್‌ಗೆ ಚಾಲನೆ – 28 ರಾಜ್ಯ–ಕೇಂದ್ರಾಡಳಿತ ಪ್ರದೇಶಗಳಿಂದ 644 ಬಾಲಕಿ-ಬಾಲಕಿಯರು

ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್‌-11 ಚೆಸ್ ಚಾಂಪಿಯನ್ಶಿಪ್‌ಗೆ ಭವ್ಯ ಚಾಲನೆ ದೊರೆತಿದ್ದು, ದೇಶದ 28…

13 hours ago

ಹವಾಮಾನ ವರದಿ | 02-08-2026 | ಕರಾವಳಿಯಲ್ಲಿ ಮಳೆ ಇಳಿಮುಖ ..? ರಾಜ್ಯದಲ್ಲಿ ಮುಂಗಾರು ಸ್ಥಿತಿ ಏನು..?

ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆಯ ತೀವ್ರತೆ ಇಳಿಮುಖವಾಗಲಿದ್ದು, ಆಗಸ್ಟ್‌ 3ರಿಂದ ತೋಟದ…

15 hours ago

ಭಾರೀ ಮಳೆಯ ಎಚ್ಚರಿಕೆ : 24 ಗಂಟೆ ಸನ್ನದ್ಧವಾಗಿರಲು ಡಿಸಿ ಸೂಚನೆ, ಭೂಕುಸಿತ ಪ್ರದೇಶಗಳ ಮೇಲೆ ಕಟ್ಟೆಚ್ಚರ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಎಲ್ಲಾ ಇಲಾಖೆಗಳನ್ನು 24…

1 day ago