ಬದುಕಿನುದ್ದಕ್ಕೂ ನಾವು ಒಬ್ಬರಿಗೊಬ್ಬರು ಆಸರೆಯಾಗಿರುವುದು ಅನಿವಾರ್ಯ. ಯಾರ ನೆರವೂ ನನಗೆ ಅಗತ್ಯವಿಲ್ಲವೆಂಬವರಿಗೂ ಇದರ ಅಗತ್ಯ ಖಂಡಿತಾ ಇದೆ. ಕೈ, ಕಾಲು ಗಟ್ಟಿಮುಟ್ಟಾಗಿರುವವರೆಗೆ ನಾನು ಯಾರಿಗೂ ಹೊರೆಯಲಾಗಲಾರೆ. ನನ್ನ ಕೆಲಸ ನಾನೇ ಮಾಡಿಕೊಳ್ಳಬಲ್ಲೆ ಎಂಬ ವಿಶ್ವಾಸ ಜೀವನವನ್ನು ಹಗುರವಾಗಿಸುತ್ತದೆ. ಬದುಕಿನ ಓಟ ಒಂದೇ ರೀತಿ ಇರುವುದಿಲ್ಲ. ಒಂದು ವಿಷ ಗಳಿಗೆಯಲ್ಲಿ ಆರೋಗ್ಯ ಕೈ ಕೊಡುತ್ತದೆ. ಇಂದು ಹೃದಯದ ಮಧುಮೇಹ, ಕ್ಯಾನ್ಸರ್ ನ ಬಳಿಕ ಹೆಚ್ಚಿನ ಸಂಖ್ಯೆಯ ಜನರು ಬಲಿಯಾಗುತ್ತಿರುವುದು ‘ಪಾರ್ಶ್ವ ವಾಯುವಿಗೆ’. ಇದರ ಗಂಭೀರತೆಯನ್ನು ಜನರು ಅರಿಯುವುದು ಅನಿವಾರ್ಯವಾಗಿದೆ.
“ನಾಲ್ವರಲ್ಲಿ ಒಬ್ಬರಿಗೆ ಪಾರ್ಶ್ವವಾಯು , ಅದರಲ್ಲಿ ನೀವು ಒಬ್ಬರಾಗ ಬೇಡಿ” ಎಂಬುದು ಈ ಬಾರಿಯ ಘೋಷ ವಾಕ್ಯ.
ಕೋವಿಡ್ ಸೋಂಕಿನಿಂದ ಮೆದುಳಿನ ಮೇಲೆ ತೀವ್ರವಾದ ಹಾನಿಯುಂಟಾಗುತ್ತದೆ. ಉಸಿರಾಟದ ಸಮಸ್ಯೆಯೊಂದಿಗೆ, ರೋಗನಿರೋಧಕ ಶಕ್ತಿಯೂ ಕುಂದುತ್ತದೆ. ರಕ್ತನಾಳಗಳಿಗೆ ಹಾನಿಯಾಗುವುದರಿಂದ ರಕ್ತ ಹೆಪ್ಪುಗಟ್ಟುತ್ತದೆ. ಇದರಿಂದ ಮೆದುಳಿನ ಕಾರ್ಯ ಕುಂಠಿತವಾಗುತ್ತದೆ. ಅಗತ್ಯ ಪ್ರಮಾಣದ ಆಮ್ಲಜನಕ ಲಭ್ಯವಾಗದೆ ಪಾರ್ಶ್ವವಾಯು ಸಮಸ್ಯೆ ಉಂಟಾಗಬಹುದೆಂದು ತಜ್ಞ ರು ಅಭಿಪ್ರಾಯ ಪಡುತ್ತಾರೆ. ಸಾಮಾನ್ಯವಾಗಿ ಒತ್ತಡದ ಜೀವನ ಶೈಲಿ , ಅವೈಜ್ಞಾನಿಕ ಆಹಾರ ಕ್ರಮಗಳು, ಕಡಿಮೆ ದೈಹಿಕ ಚಟುವಟಿಕೆಗಳು ಕಾರಣವಾಗಿವೆ.
ಆರೋಗ್ಯದಲ್ಲಿ ಸ್ವಲ್ಪ ಏರು ಪೇರಾದರೂ ತಕ್ಷಣವೇ ವೈದ್ಯಕೀಯ ಚಿಕಿತ್ಸೆಗೆ ಒಳ ಪಟ್ಟರೆ ಪಾತ್ರ ಪಾರ್ಶ್ವವಾಯುವಿನಿಂದ ಪಾರಾಗಾಬಹುದು. ಇಲ್ಲಿ ಸಮಯಕ್ಕೆ ಬಹಳ ಮಹತ್ವವಿದೆ. ನಿಮಿಷಗಳ ವಿಳಂಬವೂ ದುಬಾರಿ ಪರಿಣಾಮಕ್ಕೆ ಕಾರಣವಾಗ ಬಹುದು. ಪಾರ್ಶ್ವವಾಯುವಿನ ಕುರಿತು ಜನಜಾಗೃತಿಯ ಅಗತ್ಯವಿದೆ.
-ಅಶ್ವಿನಿ ಮೂರ್ತಿ ಅಯ್ಯನಕಟ್ಟೆ
ಇತ್ತೀಚಿನ ದಿನಗಳಲ್ಲಿ, ಜನರು ಮೊಬೈಲ್ ಫೋನ್ಗಳನ್ನು(Mobile Phone) ಹಿಡಿದಿಟ್ಟುಕೊಳ್ಳುವ ಬದಲು ಇಯರ್ಫೋನ್(Ear Phone)…
ಸಸ್ಯಗಳು ಆರೋಗ್ಯಪೂರ್ಣವಾಗಿರಬೇಕಾದರೆ ಸರಿಯಾದ ಪೋಷಕಾಂಶಗಳು ಬೇಕು. ಗೋವಿನ ಸಗಣಿಯಲ್ಲಿ(Cow dung) ಪೂರ್ಣ ಪ್ರಮಾಣದ…
ರಾಜ್ಯದ ಕೆಲ ಭಾಗಗಳಲ್ಲಿ ಚೆನ್ನಾಗಿ ಮಳೆಯಾಗುತ್ತಿದೆ(Heavy Rain). ನೀರಿಲ್ಲದೆ ಬೇಸತ್ತಿದ್ದ ಜನ ಜಾನುವಾರುಗಳು…
ಹವಾಮಾನ ವೈಪರೀತ್ಯ, ತಾಪಮಾನ ಏರಿಕೆ ಜಗತ್ತಿನಲ್ಲಿ ಬಹುದೊಡ್ಡ ಸಮಸ್ಯೆಯಾಗಿದೆ. ಆಹಾರ ಉತ್ಪಾದನೆ ಮೇಲೂ…
ಮೇ 22ರ ನಂತರ ಪ್ರಭಲ ಮುಂಗಾರು ಮಾರುತಗಳು ಅಂಡಮಾನ್ ಕಡೆ ಚಲಿಸುವುದರಿಂದ ಬಂಗಾಳಕೊಲ್ಲಿಯಲ್ಲಿ…
ದಕ್ಷಿಣ ಭಾರತದಲ್ಲಿ ಭಾರೀ ಮಳೆಯ ಎಚ್ಚರಿಕೆ ಇದೆ. ಅದೇ ರೀತಿ ನೈರುತ್ಯ ಮಾನ್ಸೂನ್…