Advertisement
MIRROR FOCUS

ಇಂದು ವಿಶ್ವ ಪಾರ್ಶ್ವವಾಯು ದಿನ ( ಅಕ್ಟೋಬರ್ 29)

Share

ಬದುಕಿನುದ್ದಕ್ಕೂ ನಾವು ಒಬ್ಬರಿಗೊಬ್ಬರು ಆಸರೆಯಾಗಿರುವುದು ಅನಿವಾರ್ಯ. ಯಾರ ನೆರವೂ ನನಗೆ ಅಗತ್ಯವಿಲ್ಲವೆಂಬವರಿಗೂ ಇದರ ಅಗತ್ಯ ಖಂಡಿತಾ ಇದೆ. ಕೈ, ಕಾಲು ಗಟ್ಟಿಮುಟ್ಟಾಗಿರುವವರೆಗೆ ನಾನು ಯಾರಿಗೂ ಹೊರೆಯಲಾಗಲಾರೆ. ನನ್ನ ಕೆಲಸ ನಾನೇ ಮಾಡಿಕೊಳ್ಳಬಲ್ಲೆ‌ ಎಂಬ ವಿಶ್ವಾಸ ಜೀವನವನ್ನು ಹಗುರವಾಗಿಸುತ್ತದೆ. ಬದುಕಿನ ಓಟ ಒಂದೇ ರೀತಿ ಇರುವುದಿಲ್ಲ. ಒಂದು ವಿಷ ಗಳಿಗೆಯಲ್ಲಿ ಆರೋಗ್ಯ ಕೈ ಕೊಡುತ್ತದೆ. ಇಂದು ಹೃದಯದ ಮಧುಮೇಹ, ಕ್ಯಾನ್ಸರ್ ನ ಬಳಿಕ ಹೆಚ್ಚಿನ ಸಂಖ್ಯೆಯ ಜನರು ಬಲಿಯಾಗುತ್ತಿರುವುದು ‘ಪಾರ್ಶ್ವ ವಾಯುವಿಗೆ’. ಇದರ ಗಂಭೀರತೆಯನ್ನು ಜನರು ಅರಿಯುವುದು ಅನಿವಾರ್ಯವಾಗಿದೆ.

“ನಾಲ್ವರಲ್ಲಿ ಒಬ್ಬರಿಗೆ ಪಾರ್ಶ್ವವಾಯು , ಅದರಲ್ಲಿ ನೀವು ಒಬ್ಬರಾಗ ಬೇಡಿ” ಎಂಬುದು ಈ ಬಾರಿಯ ಘೋಷ ವಾಕ್ಯ.‌
ಕೋವಿಡ್ ಸೋಂಕಿನಿಂದ ಮೆದುಳಿನ ಮೇಲೆ ತೀವ್ರವಾದ ಹಾನಿಯುಂಟಾಗುತ್ತದೆ. ಉಸಿರಾಟದ ಸಮಸ್ಯೆಯೊಂದಿಗೆ, ರೋಗನಿರೋಧಕ ಶಕ್ತಿಯೂ ಕುಂದುತ್ತದೆ. ರಕ್ತನಾಳಗಳಿಗೆ ಹಾನಿಯಾಗುವುದರಿಂದ ರಕ್ತ ಹೆಪ್ಪುಗಟ್ಟುತ್ತದೆ. ಇದರಿಂದ ಮೆದುಳಿನ ಕಾರ್ಯ ಕುಂಠಿತವಾಗುತ್ತದೆ. ಅಗತ್ಯ ಪ್ರಮಾಣದ ಆಮ್ಲಜನಕ ಲಭ್ಯವಾಗದೆ ಪಾರ್ಶ್ವವಾಯು ಸಮಸ್ಯೆ ಉಂಟಾಗಬಹುದೆಂದು ತಜ್ಞ ರು ಅಭಿಪ್ರಾಯ ಪಡುತ್ತಾರೆ. ಸಾಮಾನ್ಯವಾಗಿ ಒತ್ತಡದ ಜೀವನ ಶೈಲಿ , ಅವೈಜ್ಞಾನಿಕ ಆಹಾರ ಕ್ರಮಗಳು, ಕಡಿಮೆ ದೈಹಿಕ ಚಟುವಟಿಕೆಗಳು ಕಾರಣವಾಗಿವೆ.

ಆರೋಗ್ಯದಲ್ಲಿ ಸ್ವಲ್ಪ ಏರು ಪೇರಾದರೂ ತಕ್ಷಣವೇ ವೈದ್ಯಕೀಯ ಚಿಕಿತ್ಸೆಗೆ ಒಳ ಪಟ್ಟರೆ ಪಾತ್ರ ಪಾರ್ಶ್ವವಾಯುವಿನಿಂದ ಪಾರಾಗಾಬಹುದು. ಇಲ್ಲಿ ಸಮಯಕ್ಕೆ ಬಹಳ ಮಹತ್ವವಿದೆ. ನಿಮಿಷಗಳ ವಿಳಂಬವೂ ದುಬಾರಿ ಪರಿಣಾಮಕ್ಕೆ ಕಾರಣವಾಗ ಬಹುದು. ಪಾರ್ಶ್ವವಾಯುವಿನ ಕುರಿತು ಜನಜಾಗೃತಿಯ ಅಗತ್ಯವಿದೆ.

-ಅಶ್ವಿನಿ ಮೂರ್ತಿ ಅಯ್ಯನಕಟ್ಟೆ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

16 ವರ್ಷದೊಳಗಿನ ಮಕ್ಕಳಿಗೆ ಸೋಷಿಯಲ್ ಮೀಡಿಯಾ ನಿರ್ಬಂಧ – ಆಸ್ಟ್ರೇಲಿಯಾದ ಕ್ರಮಕ್ಕೆ ಪ್ರಧಾನಿ ಮೋದಿ ಮೆಚ್ಚುಗೆ

16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ನಿರ್ಬಂಧ ವಿಧಿಸಿರುವ ಆಸ್ಟ್ರೇಲಿಯಾದ ಕ್ರಮವನ್ನು ಪ್ರಧಾನಿ…

9 hours ago

ಎಲ್‌ ನಿನೊ ಎಫೆಕ್ಟ್‌ – ಮುಂದಿನ ವರ್ಷ ಮತ್ಸ್ಯೋದ್ಯಮಕ್ಕೆ ಸಂಕಷ್ಟ?

ಎಲ್‌ ನಿನೊ ಪರಿಣಾಮದಿಂದ 2027ರಲ್ಲಿ ಎಣ್ಣೆ ಸಾರ್ಡಿನ್ ಮೀನುಗಳ ಉತ್ಪಾದನೆ ಕುಸಿಯುವ ಸಾಧ್ಯತೆ…

9 hours ago

ಮುಂಗಾರು ಇದ್ದಕ್ಕಿದ್ದಂತೆ ದುರ್ಬಲವಾಗಿದ್ದೇಕೆ..? ಇಲ್ಲಿದೆ ವೈಜ್ಞಾನಿಕ ಕಾರಣ

ದೇಶದ ಬಹುತೇಕ ಭಾಗಗಳಿಂದ ಮಳೆ ಮೋಡಗಳು ಕಡಿಮೆಯಾಗಲು ಪಶ್ಚಿಮ ಪೆಸಿಫಿಕ್‌ನ ಪ್ರಬಲ ಚಂಡಮಾರುತ…

14 hours ago

ಮತ್ತೆ ಹೆಚ್ಚಿದ ದೇಶದ ಮಳೆ ಕೊರತೆ – ಜುಲೈ ಆರಂಭದ ಚೇತರಿಕೆ ಕುಂಠಿತ, ಮುಂಗಾರು ಮತ್ತೆ ದುರ್ಬಲ

ಜುಲೈ ಮೊದಲ ವಾರದ ಚೇತರಿಕೆಯ ಬಳಿಕ ದೇಶದ ಮುಂಗಾರು ಮತ್ತೆ ದುರ್ಬಲಗೊಂಡಿದ್ದು, ಮಳೆ…

14 hours ago

ಆರೋಪದ ಆಚೆ ನಿಂತು ಒಮ್ಮೆ ಯೋಚಿಸಿದ್ದೀರಾ..?

ಯಾರನ್ನಾದರೂ ಆರೋಪಿಸುವ ಮೊದಲು ಅವರ ಪರಿಸ್ಥಿತಿ ಅರ್ಥಮಾಡಿಕೊಳ್ಳುವ ಪ್ರಯತ್ನ ಮಾಡಿದರೆ ಅನೇಕ ಸಂಬಂಧಗಳು…

18 hours ago

ಮಳೆಗಾಲವೂ ಬೇಸಿಗೆಯಷ್ಟೇ ಅಪಾಯಕಾರಿ..? ಹವಾಮಾನ ಬದಲಾವಣೆಯಿಂದ ಹೆಚ್ಚುತ್ತಿದೆ ‘ಹೀಟ್‌ ಸ್ಟ್ರೆಸ್‌’ ಆತಂಕ

ಹವಾಮಾನ ಬದಲಾವಣೆಯಿಂದ ಮಳೆಗಾಲದಲ್ಲೂ ಅಪಾಯಕಾರಿ ಹೀಟ್‌ ಸ್ಟ್ರೆಸ್‌ ಹೆಚ್ಚುವ ಸಾಧ್ಯತೆ ಇದೆ ಎಂದು…

22 hours ago