Advertisement
MIRROR FOCUS

ಇಂದು ವಿಶ್ವ ಪಾರ್ಶ್ವವಾಯು ದಿನ ( ಅಕ್ಟೋಬರ್ 29)

Share

ಬದುಕಿನುದ್ದಕ್ಕೂ ನಾವು ಒಬ್ಬರಿಗೊಬ್ಬರು ಆಸರೆಯಾಗಿರುವುದು ಅನಿವಾರ್ಯ. ಯಾರ ನೆರವೂ ನನಗೆ ಅಗತ್ಯವಿಲ್ಲವೆಂಬವರಿಗೂ ಇದರ ಅಗತ್ಯ ಖಂಡಿತಾ ಇದೆ. ಕೈ, ಕಾಲು ಗಟ್ಟಿಮುಟ್ಟಾಗಿರುವವರೆಗೆ ನಾನು ಯಾರಿಗೂ ಹೊರೆಯಲಾಗಲಾರೆ. ನನ್ನ ಕೆಲಸ ನಾನೇ ಮಾಡಿಕೊಳ್ಳಬಲ್ಲೆ‌ ಎಂಬ ವಿಶ್ವಾಸ ಜೀವನವನ್ನು ಹಗುರವಾಗಿಸುತ್ತದೆ. ಬದುಕಿನ ಓಟ ಒಂದೇ ರೀತಿ ಇರುವುದಿಲ್ಲ. ಒಂದು ವಿಷ ಗಳಿಗೆಯಲ್ಲಿ ಆರೋಗ್ಯ ಕೈ ಕೊಡುತ್ತದೆ. ಇಂದು ಹೃದಯದ ಮಧುಮೇಹ, ಕ್ಯಾನ್ಸರ್ ನ ಬಳಿಕ ಹೆಚ್ಚಿನ ಸಂಖ್ಯೆಯ ಜನರು ಬಲಿಯಾಗುತ್ತಿರುವುದು ‘ಪಾರ್ಶ್ವ ವಾಯುವಿಗೆ’. ಇದರ ಗಂಭೀರತೆಯನ್ನು ಜನರು ಅರಿಯುವುದು ಅನಿವಾರ್ಯವಾಗಿದೆ.

“ನಾಲ್ವರಲ್ಲಿ ಒಬ್ಬರಿಗೆ ಪಾರ್ಶ್ವವಾಯು , ಅದರಲ್ಲಿ ನೀವು ಒಬ್ಬರಾಗ ಬೇಡಿ” ಎಂಬುದು ಈ ಬಾರಿಯ ಘೋಷ ವಾಕ್ಯ.‌
ಕೋವಿಡ್ ಸೋಂಕಿನಿಂದ ಮೆದುಳಿನ ಮೇಲೆ ತೀವ್ರವಾದ ಹಾನಿಯುಂಟಾಗುತ್ತದೆ. ಉಸಿರಾಟದ ಸಮಸ್ಯೆಯೊಂದಿಗೆ, ರೋಗನಿರೋಧಕ ಶಕ್ತಿಯೂ ಕುಂದುತ್ತದೆ. ರಕ್ತನಾಳಗಳಿಗೆ ಹಾನಿಯಾಗುವುದರಿಂದ ರಕ್ತ ಹೆಪ್ಪುಗಟ್ಟುತ್ತದೆ. ಇದರಿಂದ ಮೆದುಳಿನ ಕಾರ್ಯ ಕುಂಠಿತವಾಗುತ್ತದೆ. ಅಗತ್ಯ ಪ್ರಮಾಣದ ಆಮ್ಲಜನಕ ಲಭ್ಯವಾಗದೆ ಪಾರ್ಶ್ವವಾಯು ಸಮಸ್ಯೆ ಉಂಟಾಗಬಹುದೆಂದು ತಜ್ಞ ರು ಅಭಿಪ್ರಾಯ ಪಡುತ್ತಾರೆ. ಸಾಮಾನ್ಯವಾಗಿ ಒತ್ತಡದ ಜೀವನ ಶೈಲಿ , ಅವೈಜ್ಞಾನಿಕ ಆಹಾರ ಕ್ರಮಗಳು, ಕಡಿಮೆ ದೈಹಿಕ ಚಟುವಟಿಕೆಗಳು ಕಾರಣವಾಗಿವೆ.

ಆರೋಗ್ಯದಲ್ಲಿ ಸ್ವಲ್ಪ ಏರು ಪೇರಾದರೂ ತಕ್ಷಣವೇ ವೈದ್ಯಕೀಯ ಚಿಕಿತ್ಸೆಗೆ ಒಳ ಪಟ್ಟರೆ ಪಾತ್ರ ಪಾರ್ಶ್ವವಾಯುವಿನಿಂದ ಪಾರಾಗಾಬಹುದು. ಇಲ್ಲಿ ಸಮಯಕ್ಕೆ ಬಹಳ ಮಹತ್ವವಿದೆ. ನಿಮಿಷಗಳ ವಿಳಂಬವೂ ದುಬಾರಿ ಪರಿಣಾಮಕ್ಕೆ ಕಾರಣವಾಗ ಬಹುದು. ಪಾರ್ಶ್ವವಾಯುವಿನ ಕುರಿತು ಜನಜಾಗೃತಿಯ ಅಗತ್ಯವಿದೆ.

-ಅಶ್ವಿನಿ ಮೂರ್ತಿ ಅಯ್ಯನಕಟ್ಟೆ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ಹವಾಮಾನ ವರದಿ | 12.09.2026 | ಸೆ.15ರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು? ಕರಾವಳಿ–ಮಲೆನಾಡಿನಲ್ಲಿ ಸದ್ಯ ಬಿಸಿಲಿನ ವಾತಾವರಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…

8 hours ago

ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ

ಇಂಪೀರಿಯಲ್ ಕಾಲೇಜ್ ಲಂಡನ್‌ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…

14 hours ago

ಅಡಿಕೆಗೆ ಉತ್ತಮ ಬೆಲೆ , ಆದರೂ ಬೆಳೆಗಾರರ ಚಿಂತೆ ಮುಂದುವರಿದಿದೆ – ಕಾರಣವೇನು?

ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…

14 hours ago

ಚಂಡಮಾರುತಗಳು ಏಕೆ ಕಡಿಮೆಯಾಗುತ್ತಿವೆ? ಎಲ್ ನಿನೋದಿಂದ ಮಳೆ–ಬಿಸಿಲಿನ ಚಿತ್ರಣ ಬದಲಾಗುತ್ತಿದೆಯೇ?

ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…

1 day ago

ಹವಾಮಾನ ವರದಿ | 11-09-2026 | ಸೆ.12ರಿಂದ ಬಿಸಿಲು ಹೆಚ್ಚಳ, ಕೆಲವೆಡೆ ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…

1 day ago

ಕ್ಯಾಂಪ್ಕೊ ದಾಖಲೆ ಸಾಧನೆ – ₹3,735 ಕೋಟಿ ವಹಿವಾಟು, ₹49.62 ಕೋಟಿ ಲಾಭ – 14% ಡಿವಿಡೆಂಡ್ ಶಿಫಾರಸು

2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…

1 day ago