Advertisement
MIRROR FOCUS

ಇಂದು ವಿಶ್ವ ಪಾರ್ಶ್ವವಾಯು ದಿನ ( ಅಕ್ಟೋಬರ್ 29)

Share

ಬದುಕಿನುದ್ದಕ್ಕೂ ನಾವು ಒಬ್ಬರಿಗೊಬ್ಬರು ಆಸರೆಯಾಗಿರುವುದು ಅನಿವಾರ್ಯ. ಯಾರ ನೆರವೂ ನನಗೆ ಅಗತ್ಯವಿಲ್ಲವೆಂಬವರಿಗೂ ಇದರ ಅಗತ್ಯ ಖಂಡಿತಾ ಇದೆ. ಕೈ, ಕಾಲು ಗಟ್ಟಿಮುಟ್ಟಾಗಿರುವವರೆಗೆ ನಾನು ಯಾರಿಗೂ ಹೊರೆಯಲಾಗಲಾರೆ. ನನ್ನ ಕೆಲಸ ನಾನೇ ಮಾಡಿಕೊಳ್ಳಬಲ್ಲೆ‌ ಎಂಬ ವಿಶ್ವಾಸ ಜೀವನವನ್ನು ಹಗುರವಾಗಿಸುತ್ತದೆ. ಬದುಕಿನ ಓಟ ಒಂದೇ ರೀತಿ ಇರುವುದಿಲ್ಲ. ಒಂದು ವಿಷ ಗಳಿಗೆಯಲ್ಲಿ ಆರೋಗ್ಯ ಕೈ ಕೊಡುತ್ತದೆ. ಇಂದು ಹೃದಯದ ಮಧುಮೇಹ, ಕ್ಯಾನ್ಸರ್ ನ ಬಳಿಕ ಹೆಚ್ಚಿನ ಸಂಖ್ಯೆಯ ಜನರು ಬಲಿಯಾಗುತ್ತಿರುವುದು ‘ಪಾರ್ಶ್ವ ವಾಯುವಿಗೆ’. ಇದರ ಗಂಭೀರತೆಯನ್ನು ಜನರು ಅರಿಯುವುದು ಅನಿವಾರ್ಯವಾಗಿದೆ.

“ನಾಲ್ವರಲ್ಲಿ ಒಬ್ಬರಿಗೆ ಪಾರ್ಶ್ವವಾಯು , ಅದರಲ್ಲಿ ನೀವು ಒಬ್ಬರಾಗ ಬೇಡಿ” ಎಂಬುದು ಈ ಬಾರಿಯ ಘೋಷ ವಾಕ್ಯ.‌
ಕೋವಿಡ್ ಸೋಂಕಿನಿಂದ ಮೆದುಳಿನ ಮೇಲೆ ತೀವ್ರವಾದ ಹಾನಿಯುಂಟಾಗುತ್ತದೆ. ಉಸಿರಾಟದ ಸಮಸ್ಯೆಯೊಂದಿಗೆ, ರೋಗನಿರೋಧಕ ಶಕ್ತಿಯೂ ಕುಂದುತ್ತದೆ. ರಕ್ತನಾಳಗಳಿಗೆ ಹಾನಿಯಾಗುವುದರಿಂದ ರಕ್ತ ಹೆಪ್ಪುಗಟ್ಟುತ್ತದೆ. ಇದರಿಂದ ಮೆದುಳಿನ ಕಾರ್ಯ ಕುಂಠಿತವಾಗುತ್ತದೆ. ಅಗತ್ಯ ಪ್ರಮಾಣದ ಆಮ್ಲಜನಕ ಲಭ್ಯವಾಗದೆ ಪಾರ್ಶ್ವವಾಯು ಸಮಸ್ಯೆ ಉಂಟಾಗಬಹುದೆಂದು ತಜ್ಞ ರು ಅಭಿಪ್ರಾಯ ಪಡುತ್ತಾರೆ. ಸಾಮಾನ್ಯವಾಗಿ ಒತ್ತಡದ ಜೀವನ ಶೈಲಿ , ಅವೈಜ್ಞಾನಿಕ ಆಹಾರ ಕ್ರಮಗಳು, ಕಡಿಮೆ ದೈಹಿಕ ಚಟುವಟಿಕೆಗಳು ಕಾರಣವಾಗಿವೆ.

ಆರೋಗ್ಯದಲ್ಲಿ ಸ್ವಲ್ಪ ಏರು ಪೇರಾದರೂ ತಕ್ಷಣವೇ ವೈದ್ಯಕೀಯ ಚಿಕಿತ್ಸೆಗೆ ಒಳ ಪಟ್ಟರೆ ಪಾತ್ರ ಪಾರ್ಶ್ವವಾಯುವಿನಿಂದ ಪಾರಾಗಾಬಹುದು. ಇಲ್ಲಿ ಸಮಯಕ್ಕೆ ಬಹಳ ಮಹತ್ವವಿದೆ. ನಿಮಿಷಗಳ ವಿಳಂಬವೂ ದುಬಾರಿ ಪರಿಣಾಮಕ್ಕೆ ಕಾರಣವಾಗ ಬಹುದು. ಪಾರ್ಶ್ವವಾಯುವಿನ ಕುರಿತು ಜನಜಾಗೃತಿಯ ಅಗತ್ಯವಿದೆ.

-ಅಶ್ವಿನಿ ಮೂರ್ತಿ ಅಯ್ಯನಕಟ್ಟೆ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ಅಳಿವಿನಂಚಿನಲ್ಲಿದ್ದ ಪೆರಿಯಾರ್ ಹಸುವಿಗೆ ರಾಷ್ಟ್ರೀಯ ತಳಿ ಮಾನ್ಯತೆ – ಕೇರಳದ ಎರಡನೇ ದೇಶಿ ಗೋತಳಿ

ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…

17 minutes ago

ಪಿಒಪಿ ಗಣಪತಿಗೆ ಬ್ರೇಕ್..? ಕರಾವಳಿಯ 90–95% ಪರಿಸರ ಸ್ನೇಹಿ ಮಾದರಿ ರಾಜ್ಯಕ್ಕೆ ಪಾಠ

ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸುವಂತೆ…

2 hours ago

ಪಶ್ಚಿಮ ಘಟ್ಟ ಸಂರಕ್ಷಣೆ ಹೆಸರಿನಲ್ಲಿ ಕೃಷಿಕರಿಗೆ ನಿರ್ಬಂಧ ಬೇಡ – ಕಸ್ತೂರಿ ರಂಗನ್ ವರದಿ ಸಂಪೂರ್ಣ ತಿರಸ್ಕರಿಸಲು ಆಗ್ರಹ

ಪಶ್ಚಿಮ ಘಟ್ಟ ಸಂರಕ್ಷಣೆಯ ಹೆಸರಿನಲ್ಲಿ ಕೃಷಿಕರ ಜೀವನೋಪಾಯಕ್ಕೆ ನಿರ್ಬಂಧ ಹೇರಬಾರದು, ಕಸ್ತೂರಿ ರಂಗನ್…

3 hours ago

ಮುಂಗಾರು ಬೇಗನೆ ವಿದಾಯ ಹೇಳುತ್ತಿದೆಯೇ..? ಸೆಪ್ಟೆಂಬರ್‌ನಲ್ಲಿ ಮಳೆ ಕಡಿಮೆಯಾಗುವ ಮುನ್ಸೂಚನೆ..?

ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…

16 hours ago

ಹವಾಮಾನ ವರದಿ | 22-08-2026 | ಕರಾವಳಿಯಲ್ಲಿ ಮಳೆ ಇಳಿಕೆ, 26ರಿಂದ ಮತ್ತಷ್ಟು ದುರ್ಬಲವಾಗುವ ಸಾಧ್ಯತೆ

ಕರ್ನಾಟಕದಲ್ಲಿ ಆಗಸ್ಟ್ 23ರಿಂದ 25ರವರೆಗೆ ಹಲವೆಡೆ ಅಲ್ಲಲ್ಲಿ ಸಾಮಾನ್ಯ ಮಳೆಯಷ್ಟೇ ನಿರೀಕ್ಷಿಸಲಾಗಿದ್ದು, ಕರಾವಳಿ…

1 day ago

ಸೆಪ್ಟೆಂಬರ್‌ನಲ್ಲಿ ಪಿಎಂ ಕಿಸಾನ್ ಹಣ ಬರಬೇಕೇ? ರೈತರು ಈಗಲೇ e-KYC ಪೂರ್ಣಗೊಳಿಸಿ

PM-Kisan ಯೋಜನೆಯ 24ನೇ ಕಂತಿನ ಹಣ ಪಡೆಯಲು ಅರ್ಹ ರೈತರು ಬಯೋಮೆಟ್ರಿಕ್ ಅಥವಾ…

1 day ago