Advertisement
ಸುದ್ದಿಗಳು

ಪುತ್ತೂರು ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ವಿಶ್ವ ಮಣ್ಣು ದಿನಾಚರಣೆ | ಸಂಪಾಜೆಯ ಗೇರು ಕೃಷಿಕರಿಗೆ ಮಣ್ಣಿನ ಆರೋಗ್ಯ ಕಾರ್ಡ್ ವಿತರಣೆ

Share

ಆರೋಗ್ಯಕರ ಮಣ್ಣಿನಿಂದ ಆರೋಗ್ಯಕರ ನಗರಗಳು ಎಂಬ ಈ ವರ್ಷದ ಧ್ಯೇಯ ವಾಕ್ಯದೊಂದಿಗೆ ಮಣ್ಣು ದಿನಾಚರಣೆ ಆಚರಿಸಲಾಯಿತು.

ಮುಖ್ಯ ಅತಿಥಿಗಳಾಗಿ ಬೆಂಗಳೂರಿನ ಜಿಕೆವಿಕೆ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ಮತ್ತು ಮುಖ್ಯಸ್ಥ ಮಣ್ಣು ವಿಜ್ಞಾನ ಹಾಗೂ ಕೇಂದ್ರ ಕೃಷಿ ವಿಶ್ವವಿದ್ಯಾಲಯದ ಇಂಪಾಲ್ ನ ಮಾಜಿ ಸಂಶೋಧನಾ ನಿರ್ದೇಶಕ ಡಾ. ಸಿ ಎ ಶ್ರೀನಿವಾಸಮೂರ್ತಿ ಮಾತನಾಡಿ, ಯಶಸ್ವಿ ತೋಟಗಾರಿಕಾ ಉದ್ಯಮಗಳಿಗೆ ಮಣ್ಣಿನ ಪ್ರಾಮುಖ್ಯತೆ ಮತ್ತು ನಿರ್ವಹಣೆ ಕುರಿತು ಉಪನ್ಯಾಸ ನೀಡಿ ತೋಟಗಾರಿಕಾ ಬೆಳೆಗಳ ಉತ್ಪಾದಕತೆಯನ್ನು ಹೆಚ್ಚಿಸಲು ಮಣ್ಣಿನ ಆರೋಗ್ಯವನ್ನು ಸುಧಾರಿಸುವ ವಿಭಿನ್ನ ತಳಿಗಳನ್ನು ತಿಳಿಸಿದರು.

ಪುತ್ತೂರಿನ ಗೇರು ಸಂಶೋಧನಾ ನಿರ್ದೇಶನಾಲಯದ ನಿರ್ದೇಶಕ ಡಾ. ಜೆ ದಿನಕರ ಅಡಿಗ ಅಧ್ಯಕ್ಷತೆ ವಹಿಸಿ ಮಾತನಾಡಿ, ಹೆಚ್ಚಿನ ಬೆಳೆ ಉತ್ಪಾದಕತೆಯನ್ನು ಸಾಧಿಸಲು ಆರೋಗ್ಯಕರ ಮಣ್ಣಿನ ಅಗತ್ಯತೆ, ಸಾವಯವ ಗೊಬ್ಬರದ ವಿಧಾನಗಳ ಮೂಲಕ ಮಣ್ಣಿನ ಗುಣಮಟ್ಟವನ್ನು ಉತ್ಕೃಷ್ಟಗೊಳಿಸುವ ವಿಧಾನಗಳ ಬಗ್ಗೆ ತಿಳಿಸಿದರು.

ಇದೇ ವೇಳೆ ಸುಳ್ಯ, ಪುತ್ತೂರು ತಾಲೂಕಿನ ರೈತರಿಗೆ ಮಣ್ಣಿನ ಆರೋಗ್ಯ ಕಾರ್ಡ್ ಗಳನ್ನು ವಿತರಿಸಲಾಯಿತು. ಆರ್‌ ಕೆ ವಿ ವೈ ಯೋಜನೆ ಅಡಿ ಗೇರು ಕೃಷಿಯಲ್ಲಿ ಮಾದರಿ ಗ್ರಾಮವಾಗಿ ಆಯ್ಕೆಯಾದ ಸುಳ್ಯ ತಾಲೂಕಿನ ಸಂಪಾಜೆ ಗ್ರಾಮದ ಗೇರು ಕೃಷಿಕರಿಗೆ ಮಣ್ಣಿನ ಆರೋಗ್ಯ ಕಾರ್ಡ್ ವಿತರಿಸಲಾಯಿತು. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಸಂಪಾದ ಗ್ರಾಮದ ಕೃಷಿಕರಿಗೆ ಹಾಗೂ ಶ್ರೀ ವಿಷ್ಣು ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟದ ಸಿಬ್ಬಂದಿಗಳು ಹಾಗೂ ಸದಸ್ಯರಿಗೆ ಮಣ್ಣಿನ ಮಾದರಿ ತಂತ್ರಗಳ ಕುರಿತು ಜಾಗೃತಿ ಮೂಡಿಸಲು ಮಣ್ಣು ಪರೀಕ್ಷೆಗೆ ಮಾದರಿ ತೆಗೆಯುವ ಕುರಿತು ಪ್ರಾತ್ಯಕ್ಷಿಕೆಯನ್ನು ಹೆಚ್ ಪಿ ವಿಜ್ಞಾನಿ ತೋಟಗಾರಿಕೆ ಡಾ. ಭಾಗ್ಯ ನಡೆಸಿಕೊಟ್ಟರು.

ವಿಶೇಷ ಅತಿಥಿಗಳಾಗಿ ಜಯರಾಮ ಕೆ ಇ ಯೋಜನಾ ನಿರ್ದೇಶಕರು ಜಿಲ್ಲಾ ಪಂಚಾಯತ್ ಮಂಗಳೂರು, ಪ್ರಸಾದ್ ಶೆಟ್ಟಿ ಭಾರತ ಕೃಷಿ ಅಭಿವೃದ್ಧಿ ಸಂಸ್ಥೆ ಕೇಂದ್ರ ವಿಟ್ಲ , ಹರಿಪ್ರಸಾದ್ ಸಂಜೀವಿನಿ ಎನ್ ಆರ್ ಎಲ್ ಎಂ ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕರು ಜಿಲ್ಲಾ ಪಂಚಾಯತ್ ಮಂಗಳೂರು ಉಪಸ್ಥಿತರಿದ್ದರು.

85 ಜನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು ಸಂಪಾಜೆ ಗ್ರಾಮ ಪಂಚಾಯತ್ ವತಿಯಿಂದ ಅಧ್ಯಕ್ಷರು ಸುಮತಿ ಶಕ್ತಿವೇಲು, ಉಪಾಧ್ಯಕ್ಷರು ಹನೀಫ್ ಎಸ್‌ ಕೆ, ಕಾಂತಿ ಬಿ ಎಸ್, ಸೌಮ್ಯ, ಭಾರತಿ, ಮಾಲತಿ, ಸಂಜೀವಿನಿ ಸಿಬ್ಬಂದಿಗಳು, ಕೃಷಿ ಸಖಿ ಮೋಹಿನಿ ವಿಶ್ವನಾಥ್ (ನಿಶಾ) ಭಾಗವಹಿಸಿದ್ದರು. ಜಗದೀಶ್ ಕೆಪಿ ಸಹಕರಿಸಿದರು.

ಡಾ. ವೆಂಕಟೇಶ್ ಎಂ ಪ್ರಧಾನ ವಿಜ್ಞಾನಿ ಮಣ್ಣು ಶಾಸ್ತ್ರ ಸ್ವಾಗತಿಸಿ, ಡಾ. ವೀಣಾ ಜಿ ಎಲ್ ಹಿರಿಯ ವಿಜ್ಞಾನಿ ತೋಟಗಾರಿಕೆ ವಂದಿಸಿ, ಪ್ರಕಾಶ್ ಭಟ್ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ರೋಗ ನಿಯಂತ್ರಣಕ್ಕೆ ಕೇಂದ್ರದ ಬೆಂಬಲ – ಕ್ಯಾ. ಚೌಟಗೆ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್ ಭರವಸೆ

ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…

9 hours ago

ಹವಾಮಾನ ವರದಿ | 23-08-2026 | ಆಗಸ್ಟ್ 25 ರವರೆಗೆ ಮಳೆ – ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…

14 hours ago

ಅಳಿವಿನಂಚಿನಲ್ಲಿದ್ದ ಪೆರಿಯಾರ್ ಹಸುವಿಗೆ ರಾಷ್ಟ್ರೀಯ ತಳಿ ಮಾನ್ಯತೆ – ಕೇರಳದ ಎರಡನೇ ದೇಶಿ ಗೋತಳಿ

ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…

15 hours ago

ಪಿಒಪಿ ಗಣಪತಿಗೆ ಬ್ರೇಕ್..? ಕರಾವಳಿಯ 90–95% ಪರಿಸರ ಸ್ನೇಹಿ ಮಾದರಿ ರಾಜ್ಯಕ್ಕೆ ಪಾಠ

ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸುವಂತೆ…

17 hours ago

ಪಶ್ಚಿಮ ಘಟ್ಟ ಸಂರಕ್ಷಣೆ ಹೆಸರಿನಲ್ಲಿ ಕೃಷಿಕರಿಗೆ ನಿರ್ಬಂಧ ಬೇಡ – ಕಸ್ತೂರಿ ರಂಗನ್ ವರದಿ ಸಂಪೂರ್ಣ ತಿರಸ್ಕರಿಸಲು ಆಗ್ರಹ

ಪಶ್ಚಿಮ ಘಟ್ಟ ಸಂರಕ್ಷಣೆಯ ಹೆಸರಿನಲ್ಲಿ ಕೃಷಿಕರ ಜೀವನೋಪಾಯಕ್ಕೆ ನಿರ್ಬಂಧ ಹೇರಬಾರದು, ಕಸ್ತೂರಿ ರಂಗನ್…

17 hours ago

ಮುಂಗಾರು ಬೇಗನೆ ವಿದಾಯ ಹೇಳುತ್ತಿದೆಯೇ..? ಸೆಪ್ಟೆಂಬರ್‌ನಲ್ಲಿ ಮಳೆ ಕಡಿಮೆಯಾಗುವ ಮುನ್ಸೂಚನೆ..?

ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…

1 day ago