ನಾವು ನಮ್ಮ ಬದುಕು ಪೂರ್ಣವಾಗಿ ಅವಲಂಬಿತವಾಗಿರುವುದು ಮಣ್ಣಿನ ಮೇಲೆ. ಫಲವತ್ತಾದ ಮಣ್ಣು ಉತ್ತಮ ಪರಿಸರವನ್ನು ನಿರ್ಮಿಸುವಲ್ಲಿ ಮಹತ್ವದ ಪಾತ್ರವಹಿಸುತ್ತದೆ. ಅಗತ್ಯವಾದ ಪೋಷಕಾಂಶಗಳಿಂದ ಸಮೃದ್ಧವಾದ ಮಣ್ಣು ಇರುವ ಭೂಮಿ ನಮಗೆ ದೊರೆತುದು ಪುಣ್ಯವೇ.
ಇಂದು ಅತಿಯಾದ ಸಂಪನ್ಮೂಲಗಳ ಬಳಕೆಯ ನೇರ ಪರಿಣಾಮವಾಗುತ್ತಿರುವುದು ಮಣ್ಣಿನ ಮೇಲೆ ಅಂದರೆ ಭೂಮಿಯ ಮೇಲೆ. ಹಲವು ರೀತಿಯ ಕಲ್ಮಶಗಳನ್ನು ನೇರವಾಗಿ ಮಣ್ಣಿನ ಮೇಲೆ ಸುರಿದು ಹಾಳು ಮಾಡುತ್ತಿದ್ದೇವೆ. ಮಾಲಿನ್ಯವನ್ನು ನಿಯಂತ್ರಿಸುವ ಅಗತ್ಯವಿದೆ. ಸಕಾಲದಲ್ಲಿ ನಾವು ಎಚ್ಚೆತ್ತುಕೊಳ್ಳದಿದ್ದಲ್ಲಿ ಮಣ್ಣಿನೊಂದಿಗೆ ಭೂಮಿಯನ್ನು ಕಳೆದುಕೊಳ್ಳಬೇಕಾಗುತ್ತದೆ. ಹಾಗಾಗಿ ಮಣ್ಣಿನ ಜೀವ ವೈವಿಧ್ಯವನ್ನು ರಕ್ಷಿಸಿ.
ಆರೋಗ್ಯಕರ ಮಣ್ಣಿನ ಪರಿಸರ ವ್ಯವಸ್ಥೆಗಳನ್ನು ಕಾಪಾಡಿಕೊಳ್ಳುವ ಮಹತ್ವದ ಬಗ್ಗೆ ಜಾಗೃತಿ ಮೂಡಿಸುವುದು ಈ ಆಚರಣೆಯ ಉದ್ದೇಶ. ಈ ಕುರಿತು ಜಾಗೃತಿ ಮೂಡಿಸುವ ಸಲುವಾಗಿ “ವಿಶ್ವ ಮಣ್ಣು ದಿನ” ದ ಆಚರಣೆ ಆರಂಭವಾಯಿತು.
2014 ಡಿಸೆಂಬರ್ 5 ರಂದು ಮೊದಲ ಬಾರಿಗೆ “ವಿಶ್ವ ಮಣ್ಣು ದಿನ”ದ ಆಚರಣೆ ಆರಂಭವಾಯಿತು. ನಮಗಾಗಿ , ಮುಂದಿನ ಪೀಳಿಗೆಗಾಗಿ ಆರೋಗ್ಯಕರವಾದ ಮಣ್ಣನ್ನು ಉಳಿಸಿಕೊಳ್ಳೋಣ.
-ಅಶ್ವಿನಿ ಮೂರ್ತಿ ಅಯ್ಯನಕಟ್ಟೆ
ತೋಟಗಾರಿಕೆ ಬೆಳೆ ಬೆಳೆದ ರೈತರು ಹವಾಮಾನ ವೈಪರೀತ್ಯದಿಂದ ಬೆಳೆ ನಷ್ಟ ಸಂಭವಿಸಿದಲ್ಲಿ ನಷ್ಟ…
ಬಹುನಿರೀಕ್ಷಿತ ಆಕ್ಸಿಯಮ್ ಮಿಷನ್-4 ಇಂದು ಭಾರತೀಯ ಕಾಲಮಾನ ಮಧ್ಯಾಹ್ನ 12 ಗಂಟೆ 1ನಿಮಿಷಕ್ಕೆ…
ಕಳೆದ 11 ವರ್ಷಗಳಲ್ಲಿ ದೇಶದ ಬಡತನ ಪ್ರಮಾಣ ಗಣನೀಯವಾಗಿ ಇಳಿಕೆಯಾಗಿದೆ ಎಂದು ಕೇಂದ್ರ…
ಗದಗ ಜಿಲ್ಲೆಯಲ್ಲಿ ಜೂನ್ ತಿಂಗಳಲ್ಲಿ ಸಾಕಷ್ಟು ಮಳೆಯಾಗಿ ಭೂಮಿಯಲ್ಲಿ ತೇವಾಂಶ ಹೆಚ್ಚಾಗಿದೆ. ಈ…
ರಾಜ್ಯದ ಮಾವು ಬೆಳೆಗಾರರ ಹಿತ ಕಾಪಾಡುವಂತೆ ಕೇಂದ್ರ ಕೈಗಾರಿಕಾ ಸಚಿವ ಹೆಚ್.ಡಿ. ಕುಮಾರಸ್ವಾಮಿ…
ಬಂಗಾಳಕೊಲ್ಲಿಯ ಪಶ್ಚಿಮ ಬಂಗಾಳ, ಒಡಿಶಾ ಕರಾವಳಿಗೆ ತಲುಪಿರುವ ತಿರುವಿಕೆಯು ಇನ್ನೆರಡು ದಿನಗಳಲ್ಲಿ ಶಿಥಿಲಗೊಳ್ಳುವ…