ನಾವು ನಮ್ಮ ಬದುಕು ಪೂರ್ಣವಾಗಿ ಅವಲಂಬಿತವಾಗಿರುವುದು ಮಣ್ಣಿನ ಮೇಲೆ. ಫಲವತ್ತಾದ ಮಣ್ಣು ಉತ್ತಮ ಪರಿಸರವನ್ನು ನಿರ್ಮಿಸುವಲ್ಲಿ ಮಹತ್ವದ ಪಾತ್ರವಹಿಸುತ್ತದೆ. ಅಗತ್ಯವಾದ ಪೋಷಕಾಂಶಗಳಿಂದ ಸಮೃದ್ಧವಾದ ಮಣ್ಣು ಇರುವ ಭೂಮಿ ನಮಗೆ ದೊರೆತುದು ಪುಣ್ಯವೇ.
ಇಂದು ಅತಿಯಾದ ಸಂಪನ್ಮೂಲಗಳ ಬಳಕೆಯ ನೇರ ಪರಿಣಾಮವಾಗುತ್ತಿರುವುದು ಮಣ್ಣಿನ ಮೇಲೆ ಅಂದರೆ ಭೂಮಿಯ ಮೇಲೆ. ಹಲವು ರೀತಿಯ ಕಲ್ಮಶಗಳನ್ನು ನೇರವಾಗಿ ಮಣ್ಣಿನ ಮೇಲೆ ಸುರಿದು ಹಾಳು ಮಾಡುತ್ತಿದ್ದೇವೆ. ಮಾಲಿನ್ಯವನ್ನು ನಿಯಂತ್ರಿಸುವ ಅಗತ್ಯವಿದೆ. ಸಕಾಲದಲ್ಲಿ ನಾವು ಎಚ್ಚೆತ್ತುಕೊಳ್ಳದಿದ್ದಲ್ಲಿ ಮಣ್ಣಿನೊಂದಿಗೆ ಭೂಮಿಯನ್ನು ಕಳೆದುಕೊಳ್ಳಬೇಕಾಗುತ್ತದೆ. ಹಾಗಾಗಿ ಮಣ್ಣಿನ ಜೀವ ವೈವಿಧ್ಯವನ್ನು ರಕ್ಷಿಸಿ.
ಆರೋಗ್ಯಕರ ಮಣ್ಣಿನ ಪರಿಸರ ವ್ಯವಸ್ಥೆಗಳನ್ನು ಕಾಪಾಡಿಕೊಳ್ಳುವ ಮಹತ್ವದ ಬಗ್ಗೆ ಜಾಗೃತಿ ಮೂಡಿಸುವುದು ಈ ಆಚರಣೆಯ ಉದ್ದೇಶ. ಈ ಕುರಿತು ಜಾಗೃತಿ ಮೂಡಿಸುವ ಸಲುವಾಗಿ “ವಿಶ್ವ ಮಣ್ಣು ದಿನ” ದ ಆಚರಣೆ ಆರಂಭವಾಯಿತು.
2014 ಡಿಸೆಂಬರ್ 5 ರಂದು ಮೊದಲ ಬಾರಿಗೆ “ವಿಶ್ವ ಮಣ್ಣು ದಿನ”ದ ಆಚರಣೆ ಆರಂಭವಾಯಿತು. ನಮಗಾಗಿ , ಮುಂದಿನ ಪೀಳಿಗೆಗಾಗಿ ಆರೋಗ್ಯಕರವಾದ ಮಣ್ಣನ್ನು ಉಳಿಸಿಕೊಳ್ಳೋಣ.
-ಅಶ್ವಿನಿ ಮೂರ್ತಿ ಅಯ್ಯನಕಟ್ಟೆ
ಹವಾಮಾನ ಬದಲಾವಣೆಯಿಂದ ಲಾ ನೀನಾದ ತಂಪು ಪರಿಣಾಮ ದುರ್ಬಲವಾಗಿ ಭಾರತದಲ್ಲಿ ಬೇಸಿಗೆ ಮುಂಚಿತವಾಗಿ…
ಹಲಸಿನ ಹಣ್ಣಿನಿಂದ ಸುಲಭವಾಗಿ ತಯಾರಿಸಬಹುದಾದ ಕಸ್ಟರ್ಡ್ ಬೇಸಿಗೆಯಲ್ಲಿ ಉತ್ತಮ ಡೆಸರ್ಟ್ ಆಯ್ಕೆಯಾಗಿದೆ. ಕಡಿಮೆ…
ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿ ವೇಳೆಯಲ್ಲಿ ಗುಡುಗು…
ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ ಭಾರತೀಯ ರೈತರಿಗೆ ಬೆಲೆ ಬೆಂಬಲದ ಸೂಚನೆ ನೀಡುತ್ತಿದೆ.…
ಕೊಡಗಿನಲ್ಲಿ ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಗಣಪತಿ ಮೃತಪಟ್ಟಿದ್ದಾರೆ. ಕಾಡಾನೆ ಹಾವಳಿ…
ಹಾಲಿನ ಗುಣಮಟ್ಟ ಕಾಪಾಡಲು ಸಹಕಾರ ಸಂಘಗಳಿಗೆ ವಿಶೇಷ ಕಲಬೆರಕೆ ಪತ್ತೆ ಕಿಟ್ಗಳನ್ನು ವಿತರಿಸಲಾಗುತ್ತಿದೆ.