ನಾವು ನಮ್ಮ ಬದುಕು ಪೂರ್ಣವಾಗಿ ಅವಲಂಬಿತವಾಗಿರುವುದು ಮಣ್ಣಿನ ಮೇಲೆ. ಫಲವತ್ತಾದ ಮಣ್ಣು ಉತ್ತಮ ಪರಿಸರವನ್ನು ನಿರ್ಮಿಸುವಲ್ಲಿ ಮಹತ್ವದ ಪಾತ್ರವಹಿಸುತ್ತದೆ. ಅಗತ್ಯವಾದ ಪೋಷಕಾಂಶಗಳಿಂದ ಸಮೃದ್ಧವಾದ ಮಣ್ಣು ಇರುವ ಭೂಮಿ ನಮಗೆ ದೊರೆತುದು ಪುಣ್ಯವೇ.
ಇಂದು ಅತಿಯಾದ ಸಂಪನ್ಮೂಲಗಳ ಬಳಕೆಯ ನೇರ ಪರಿಣಾಮವಾಗುತ್ತಿರುವುದು ಮಣ್ಣಿನ ಮೇಲೆ ಅಂದರೆ ಭೂಮಿಯ ಮೇಲೆ. ಹಲವು ರೀತಿಯ ಕಲ್ಮಶಗಳನ್ನು ನೇರವಾಗಿ ಮಣ್ಣಿನ ಮೇಲೆ ಸುರಿದು ಹಾಳು ಮಾಡುತ್ತಿದ್ದೇವೆ. ಮಾಲಿನ್ಯವನ್ನು ನಿಯಂತ್ರಿಸುವ ಅಗತ್ಯವಿದೆ. ಸಕಾಲದಲ್ಲಿ ನಾವು ಎಚ್ಚೆತ್ತುಕೊಳ್ಳದಿದ್ದಲ್ಲಿ ಮಣ್ಣಿನೊಂದಿಗೆ ಭೂಮಿಯನ್ನು ಕಳೆದುಕೊಳ್ಳಬೇಕಾಗುತ್ತದೆ. ಹಾಗಾಗಿ ಮಣ್ಣಿನ ಜೀವ ವೈವಿಧ್ಯವನ್ನು ರಕ್ಷಿಸಿ.
ಆರೋಗ್ಯಕರ ಮಣ್ಣಿನ ಪರಿಸರ ವ್ಯವಸ್ಥೆಗಳನ್ನು ಕಾಪಾಡಿಕೊಳ್ಳುವ ಮಹತ್ವದ ಬಗ್ಗೆ ಜಾಗೃತಿ ಮೂಡಿಸುವುದು ಈ ಆಚರಣೆಯ ಉದ್ದೇಶ. ಈ ಕುರಿತು ಜಾಗೃತಿ ಮೂಡಿಸುವ ಸಲುವಾಗಿ “ವಿಶ್ವ ಮಣ್ಣು ದಿನ” ದ ಆಚರಣೆ ಆರಂಭವಾಯಿತು.
2014 ಡಿಸೆಂಬರ್ 5 ರಂದು ಮೊದಲ ಬಾರಿಗೆ “ವಿಶ್ವ ಮಣ್ಣು ದಿನ”ದ ಆಚರಣೆ ಆರಂಭವಾಯಿತು. ನಮಗಾಗಿ , ಮುಂದಿನ ಪೀಳಿಗೆಗಾಗಿ ಆರೋಗ್ಯಕರವಾದ ಮಣ್ಣನ್ನು ಉಳಿಸಿಕೊಳ್ಳೋಣ.
-ಅಶ್ವಿನಿ ಮೂರ್ತಿ ಅಯ್ಯನಕಟ್ಟೆ
23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…