ನಾವು ನಮ್ಮ ಬದುಕು ಪೂರ್ಣವಾಗಿ ಅವಲಂಬಿತವಾಗಿರುವುದು ಮಣ್ಣಿನ ಮೇಲೆ. ಫಲವತ್ತಾದ ಮಣ್ಣು ಉತ್ತಮ ಪರಿಸರವನ್ನು ನಿರ್ಮಿಸುವಲ್ಲಿ ಮಹತ್ವದ ಪಾತ್ರವಹಿಸುತ್ತದೆ. ಅಗತ್ಯವಾದ ಪೋಷಕಾಂಶಗಳಿಂದ ಸಮೃದ್ಧವಾದ ಮಣ್ಣು ಇರುವ ಭೂಮಿ ನಮಗೆ ದೊರೆತುದು ಪುಣ್ಯವೇ.
ಇಂದು ಅತಿಯಾದ ಸಂಪನ್ಮೂಲಗಳ ಬಳಕೆಯ ನೇರ ಪರಿಣಾಮವಾಗುತ್ತಿರುವುದು ಮಣ್ಣಿನ ಮೇಲೆ ಅಂದರೆ ಭೂಮಿಯ ಮೇಲೆ. ಹಲವು ರೀತಿಯ ಕಲ್ಮಶಗಳನ್ನು ನೇರವಾಗಿ ಮಣ್ಣಿನ ಮೇಲೆ ಸುರಿದು ಹಾಳು ಮಾಡುತ್ತಿದ್ದೇವೆ. ಮಾಲಿನ್ಯವನ್ನು ನಿಯಂತ್ರಿಸುವ ಅಗತ್ಯವಿದೆ. ಸಕಾಲದಲ್ಲಿ ನಾವು ಎಚ್ಚೆತ್ತುಕೊಳ್ಳದಿದ್ದಲ್ಲಿ ಮಣ್ಣಿನೊಂದಿಗೆ ಭೂಮಿಯನ್ನು ಕಳೆದುಕೊಳ್ಳಬೇಕಾಗುತ್ತದೆ. ಹಾಗಾಗಿ ಮಣ್ಣಿನ ಜೀವ ವೈವಿಧ್ಯವನ್ನು ರಕ್ಷಿಸಿ.
ಆರೋಗ್ಯಕರ ಮಣ್ಣಿನ ಪರಿಸರ ವ್ಯವಸ್ಥೆಗಳನ್ನು ಕಾಪಾಡಿಕೊಳ್ಳುವ ಮಹತ್ವದ ಬಗ್ಗೆ ಜಾಗೃತಿ ಮೂಡಿಸುವುದು ಈ ಆಚರಣೆಯ ಉದ್ದೇಶ. ಈ ಕುರಿತು ಜಾಗೃತಿ ಮೂಡಿಸುವ ಸಲುವಾಗಿ “ವಿಶ್ವ ಮಣ್ಣು ದಿನ” ದ ಆಚರಣೆ ಆರಂಭವಾಯಿತು.
2014 ಡಿಸೆಂಬರ್ 5 ರಂದು ಮೊದಲ ಬಾರಿಗೆ “ವಿಶ್ವ ಮಣ್ಣು ದಿನ”ದ ಆಚರಣೆ ಆರಂಭವಾಯಿತು. ನಮಗಾಗಿ , ಮುಂದಿನ ಪೀಳಿಗೆಗಾಗಿ ಆರೋಗ್ಯಕರವಾದ ಮಣ್ಣನ್ನು ಉಳಿಸಿಕೊಳ್ಳೋಣ.
-ಅಶ್ವಿನಿ ಮೂರ್ತಿ ಅಯ್ಯನಕಟ್ಟೆ
ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…
ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…
ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…