ನಾವು ನಮ್ಮ ಬದುಕು ಪೂರ್ಣವಾಗಿ ಅವಲಂಬಿತವಾಗಿರುವುದು ಮಣ್ಣಿನ ಮೇಲೆ. ಫಲವತ್ತಾದ ಮಣ್ಣು ಉತ್ತಮ ಪರಿಸರವನ್ನು ನಿರ್ಮಿಸುವಲ್ಲಿ ಮಹತ್ವದ ಪಾತ್ರವಹಿಸುತ್ತದೆ. ಅಗತ್ಯವಾದ ಪೋಷಕಾಂಶಗಳಿಂದ ಸಮೃದ್ಧವಾದ ಮಣ್ಣು ಇರುವ ಭೂಮಿ ನಮಗೆ ದೊರೆತುದು ಪುಣ್ಯವೇ.
ಇಂದು ಅತಿಯಾದ ಸಂಪನ್ಮೂಲಗಳ ಬಳಕೆಯ ನೇರ ಪರಿಣಾಮವಾಗುತ್ತಿರುವುದು ಮಣ್ಣಿನ ಮೇಲೆ ಅಂದರೆ ಭೂಮಿಯ ಮೇಲೆ. ಹಲವು ರೀತಿಯ ಕಲ್ಮಶಗಳನ್ನು ನೇರವಾಗಿ ಮಣ್ಣಿನ ಮೇಲೆ ಸುರಿದು ಹಾಳು ಮಾಡುತ್ತಿದ್ದೇವೆ. ಮಾಲಿನ್ಯವನ್ನು ನಿಯಂತ್ರಿಸುವ ಅಗತ್ಯವಿದೆ. ಸಕಾಲದಲ್ಲಿ ನಾವು ಎಚ್ಚೆತ್ತುಕೊಳ್ಳದಿದ್ದಲ್ಲಿ ಮಣ್ಣಿನೊಂದಿಗೆ ಭೂಮಿಯನ್ನು ಕಳೆದುಕೊಳ್ಳಬೇಕಾಗುತ್ತದೆ. ಹಾಗಾಗಿ ಮಣ್ಣಿನ ಜೀವ ವೈವಿಧ್ಯವನ್ನು ರಕ್ಷಿಸಿ.
ಆರೋಗ್ಯಕರ ಮಣ್ಣಿನ ಪರಿಸರ ವ್ಯವಸ್ಥೆಗಳನ್ನು ಕಾಪಾಡಿಕೊಳ್ಳುವ ಮಹತ್ವದ ಬಗ್ಗೆ ಜಾಗೃತಿ ಮೂಡಿಸುವುದು ಈ ಆಚರಣೆಯ ಉದ್ದೇಶ. ಈ ಕುರಿತು ಜಾಗೃತಿ ಮೂಡಿಸುವ ಸಲುವಾಗಿ “ವಿಶ್ವ ಮಣ್ಣು ದಿನ” ದ ಆಚರಣೆ ಆರಂಭವಾಯಿತು.
2014 ಡಿಸೆಂಬರ್ 5 ರಂದು ಮೊದಲ ಬಾರಿಗೆ “ವಿಶ್ವ ಮಣ್ಣು ದಿನ”ದ ಆಚರಣೆ ಆರಂಭವಾಯಿತು. ನಮಗಾಗಿ , ಮುಂದಿನ ಪೀಳಿಗೆಗಾಗಿ ಆರೋಗ್ಯಕರವಾದ ಮಣ್ಣನ್ನು ಉಳಿಸಿಕೊಳ್ಳೋಣ.
-ಅಶ್ವಿನಿ ಮೂರ್ತಿ ಅಯ್ಯನಕಟ್ಟೆ
ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…
ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…
ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…
ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…
ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…