Advertisement
ಅಂಕಣ

ಇಂದು ‘ಗುಬ್ಬಚ್ಚಿ ದಿನ’ | ಎಲ್ಲಿರುವೆ ಗುಬ್ಬಚ್ಚಿ….. ಎಲ್ಲಿರುವೆ ….ಬಾ….! |

Share

ಗುಬ್ಬಚ್ಚಿ ಹಕ್ಕಿಯ ಇಂದು ಹಕ್ಕಿನ ದಿನ ಇಂದು. ಗುಬ್ಬಚ್ಚಿಯ ರಕ್ಷಿಸುವ ದಿನ ಇಂದು. ಮಾರ್ಚ್ 20 ರಂದು ವಿಶ್ವ ಗುಬ್ಬಚ್ಚಿ ದಿನವೆಂದು ಪ್ರಪಂಚದಾದ್ಯಂತ ಆಚರಿಸಲಾಗುತ್ತದೆ.

Advertisement
Advertisement
Advertisement
Advertisement

“ಸಣ್ಣ ಹಕ್ಕಿಯೂ ಕೂಡ ದೊಡ್ಡ ಬದಲಾವಣೆಗೆ ಕಾರಣವಾಗ ಬಹುದು” ಇಂದು ಅಲ್ಲಲ್ಲಿ ಸಣ್ಣ ಪುಟ್ಟ ಮಣ್ಣಿನ ಪಾತ್ರೆಗಳಲ್ಲಿ ನೀರು ಇಡುವುದನ್ನು ಕಾಣಬಹುದು. ಮನೆಗಳ ಪಕ್ಕದಲ್ಲಿ ಹಕ್ಕಿಯ ಗೂಡುಗಳನ್ನು ತೂಗುತ್ತಿರುವುದು ಸಂತಸದ ಸಂಗತಿಗಳು.
ಗುಬ್ಬಚ್ಚಿ ಸಣ್ಣ ಹಕ್ಕಿ . ನಮ್ಮ ಮನಸಿಗೆ ಯಾಕೋ ಇದು ತುಂಬಾ ಹತ್ತಿರದ ಹಕ್ಕಿ ಎನಿಸುತ್ತದೆ. ಯಾವ ಶಾಲೆಯಲ್ಲೂ ಕಲಿತಿಲ್ಲ, ಯಾವ ಟೀಚರ್ ತರಬೇತಿಯನ್ನೂ ಕೊಟ್ಟಿಲ್ಲ, ಆದರೆ ಯಾವ ಇಂಜಿನಿಯರ್ ಗೂ ಕಮ್ಮಿ ಇಲ್ಲದಂತೆ ಸೊಗಸಾಗಿ ಗೂಡು ಕಟ್ಟುವ ಚಾಣಕ್ಯ ಹಕ್ಕಿ ಈ ಗುಬ್ಬಚ್ಚಿ. ಆದರೀಗ ಯಾಕೋ ಅಪರೂಪ. ಬೇಕೆಂದ ಕೂಡಲೇ ನೋಡಲು ಸಿಗದು. ಗುಬ್ಬಚ್ಚಿಗಳ ಆಹಾರ ಮೂಲವಾದ ಗದ್ದೆಗಳು ಕಮ್ಮಿಯಾದದ್ದು, ಹಕ್ಕಿಗಳ ಸಂಖ್ಯೆ ಗಣನೀಯವಾಗಿ ಕಡಿಮೆಯಾದುದರ ಕಾರಣವಿರಬಹುದೇ?.

Advertisement

ಗುಬ್ಬಚ್ಚಿಯು ಜೋಡಿಯಾಗಿ ಇರುತ್ತವೆ.  ಸರಾಸರಿ ಜೀವಿತಾವಧಿ 3 ವರ್ಷ. ಇದರ ವೇಗದ ಮಿತಿ ಗಂಟೆಗೆ46 ಕಿಮೀ. ಹಕ್ಕಿಯ ಉದ್ದ 14 ರಿಂದ 18 ಸೆ.ಮೀ. ಎತ್ತರ 16 ಸೆ.ಮೀ. ಸಾಮಾನ್ಯವಾಗಿ ತೂಕ 24 ರಿಂದ 40 ಗ್ರಾಂ. ಅವುಗಳ ಬಣ್ಣ ಕಂದು.ಬೆನ್ನು ಮತ್ತು ಪಕ್ಕಗಳಲ್ಲಿ ಬಿಳಿ ಮತ್ತು ಕಪ್ಪು ಬಣ್ಣಗಳು ಮಿಶ್ರಿತವಾಗಿರುತ್ತದೆ. ಮುಂಭಾಗ ಬೆಳ್ಳಗಿರುತ್ತದೆ. ಗಂಡು ಗುಬ್ಬಿಗೆ ಗಂಟಲ ಮೇಲೆ ಕಪ್ಪು ಕಲೆ ಇರುತ್ತದೆ. ಇವುಗಳ ಮೊಟ್ಟೆಗಳು ನಸು ಹಸಿರು ಮಿಶ್ರಿತ ಬಿಳಿ ಬಣ್ಣದ್ದಾಗಿರುತ್ತದೆ.

Advertisement
ವಿಶ್ವದಲ್ಲಿ 26 ಜಾತಿಯ ಗುಬ್ಬಚ್ಚಿಗಳನ್ನು ಗುರುತಿಸಲಾಗಿದೆ. ನಮ್ಮ ದೇಶದಲ್ಲಿ 5 ವಿಭಿನ್ನ ಜಾತಿಯ ಗುಬ್ಬಿಗಳಿವೆ. ಇವುಗಳಲ್ಲಿ ಸರ್ವವ್ಯಾಪಿಯಾದುದು ಮನೆ ಗುಬ್ಬಿ. ಧಾನ್ಯ, ಹುಳು ಹುಪ್ಪಟೆಗಳು ಇವುಗಳ ಮುಖ್ಯ ಆಹಾರ. ಸರ್ವ ಭಕ್ಷಕವೆಂದರೂ ಸರಿಯೇ.
ಗುಬ್ಬಿಗಳಿಗೆ ಧೂಳು ಸ್ನಾನವೆಂದರೆ ಬಹಳ ಪ್ರೀತಿ. ಗುಬ್ಬಿಗಳು ಅಗತ್ಯ ಬಿದ್ದರೆ ನೀರಿನ ಮೇಲೆ ಈಜ ಬಲ್ಲುದು. ಈ ಹಕ್ಕಿ ತನ್ನ ವಾಸ್ತವ್ಯ ಪ್ರದೇಶದಿಂದ ಹೆಚ್ಚೆಂದರೆ 2 ಕಿ.ಮೀ ಸಂಚರಿಸುತ್ತವೆ. ಗುಬ್ಬಚ್ಚಿ ವಲಸೆ ಹಕ್ಕಿಯಲ್ಲ.
2022 ನೇ ಇಸವಿಯಲ್ಲಿ ದೆಹಲಿಯ “ರಾಜ್ಯ ಪಕ್ಷಿ”ಯೆಂದು ಗುಬ್ಬಚ್ಚಿಯನ್ನು ಘೋಷಿಸಲಾಗಿದೆ. ಮಾರ್ಚ್ 20 ರಂದು ವಿಶ್ವ ಗುಬ್ಬಚ್ಚಿ ದಿನವೆಂದು ಪ್ರಪಂಚದಾದ್ಯಂತ ಆಚರಿಸಲಾಗುತ್ತದೆ.ಮಹಮದ್ ದಿಲ್ವಾರ್ ಎಂಬ ನಾಸಿಕ್ ಮೂಲದ ವ್ಯಕ್ತಿ ನಮ್ಮ ಭಾರತದಲ್ಲಿ ಮೊದಲ ಬಾರಿಗೆ ಗುಬ್ಬಚ್ಚಿಗಳ ಅಳಿವಿನ ಕುರಿತು ಜಾಗೃತಿ ಕಾರ್ಯಕ್ರಮಗಳನ್ನು ಆರಂಭಿಸಿದರು. ಆ ಸಂಬಂಧ ಮಾರ್ಚ್ 20 ರಂದು ‘ ಗುಬ್ಬಚ್ಚಿ ದಿನ’ ವೆಂದು ಆಚರಿಸಲು ನಿರ್ಧರಿಸಲಾಯಿತು.‌ ಮನದಲ್ಲಿ ಮಾತ್ರವಲ್ಲ ಮನೆಯ ಸುತ್ತಮುತ್ತಲೂ ಗುಬ್ಬಚ್ಚಿ ಗಳು ಚೀಂವ್ ಚೀಂವ್ ಕಲರವ ಕೇಳುತ್ತಿರಲಿ ಅಲ್ಲವೇ.!!!!
Advertisement
# ಅಶ್ವಿನಿಮೂರ್ತಿ ಅಯ್ಯನಕಟ್ಟೆ
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ಹವಾಮಾನ ವರದಿ | 27-02-2025 | ಮಳೆಯ ಸಾಧ್ಯತೆ ಕ್ಷೀಣ | ಒಣ ಹವೆ ಮುಂದುವರಿಕೆ | ಕೆಲವು ಕಡೆ ತುಂತುರು ಮಳೆ ನಿರೀಕ್ಷೆ |

ತಾಪಮಾನ ಅಧಿಕವಾಗಿದ್ದರೂ, ರಾತ್ರಿಯ ವೇಳೆ ತಂಪು ವಾತಾವರಣ ಇರುವುದರಿಂದ ಮಳೆಯ ಸಾಧ್ಯತೆ ಕ್ಷೀಣಿಸುತ್ತಿದೆ.

1 hour ago

ಧರ್ಮಸ್ಥಳದಲ್ಲಿ ಶಿವರಾತ್ರಿ ಜಾಗರಣೆ | ಅಹೋ ರಾತ್ರಿ ಶಿವ ಪಂಚಾಕ್ಷರಿ ಪಠಣದೊಂದಿಗೆ ಶಿವರಾತ್ರಿ ಜಾಗರಣೆಗೆ ಚಾಲನೆ

ಪರಿಶುದ್ಧ ಮನಸ್ಸಿನಿಂದ ಶಿವನ ಧ್ಯಾನ, ಉಪಾಸನೆ ಮಾಡಿದಾಗ ಸಕಲ ಪಾಪ ಕರ್ಮಗಳ ಕೊಳೆ…

12 hours ago

ಈಶಾ ಫೌಂಡೇಷನ್ ನಿಂದ ಶಿವರಾತ್ರಿ | ಆತ್ಮ ಜಾಗೃತಿಯ ರಾತ್ರಿ, ಆತ್ಮಕ್ಕೆ ಮೂಲ ಆಧಾರ

ತಮಿಳುನಾಡಿನ ಕೊಯಮತ್ತೂರಿನ ಈಶಾ ಫೌಂಡೇಷನ್ ಆದಿ ಯೋಗಿ ಪ್ರತಿಮೆಯ ಬಳಿ ಹಮ್ಮಿಕೊಂಡಿದ್ದ ಶಿವರಾತ್ರಿ…

12 hours ago

ಶಿವರಾತ್ರಿ | ನೇಪಾಳದ ಪಶುಪತಿನಾಥನಿಗೆ ವಿಶೇಷ ಪೂಜೆ- ಲಕ್ಷಾಂತರ ಭಕ್ತಾದಿಗಳಿಂದ ದರ್ಶನ

ಮಹಾಶಿವರಾತ್ರಿಯ ಹಿನ್ನಲೆಯಲ್ಲಿ ನೇಪಾಳದ ಕಠ್ಮಂಡುವಿನಲ್ಲಿರುವ ಪಶುಪತಿನಾಥ ಮಂದಿರಕ್ಕೆ ಲಕ್ಷಾಂತರ ಭಕ್ತಾದಿಗಳು ಭೇಟಿ ನೀಡಿ…

12 hours ago

ಮಹಾಕುಂಭದಿಂದ ನಿರ್ಗಮಿಸಲು ವಿಶೇಷ ರೈಲು ಸಂಚಾರ | ಪ್ರಯಾಗ್‌ರಾಜ್‌ನಿಂದ 350 ಕ್ಕೂ ಹೆಚ್ಚು ರೈಲು ಓಡಾಟ

ರೈಲ್ವೆ ಇಲಾಖೆ ಪ್ರಯಾಗ್‌ರಾಜ್‌ನಿಂದ 350 ಕ್ಕೂ ಹೆಚ್ಚು ರೈಲುಗಳನ್ನು ಓಡಿಸಲು ನಿರ್ಧರಿಸಿದೆ.

13 hours ago

ಈ ವರ್ಷ ಮ್ಯಾನ್ಮಾರ್‌ನಿಂದ ಭಾರತಕ್ಕೆ ಅಡಿಕೆ ಆಮದು..?

ಮ್ಯಾನ್ಮಾರ್‌ ಅಡಿಕೆ ಮಾರುಕಟ್ಟೆ ವಲಯದಲ್ಲಿ ಈ ಬಾರಿ ಭಾರತವು ಅಡಿಕೆ ಖರೀದಿಯನ್ನು ಪುನರಾರಂಭ…

13 hours ago