ಅಂದು ಆಕಸ್ಮಿಕವಾಗಿ ಗೆಳತಿ ಬಸ್ಸ್ ನಲ್ಲಿ ಸಿಕ್ಕಿದ್ದಳು. ಎಷ್ಟೋ ವರ್ಷಗಳ ನಂತರ ಸಿಕ್ಕಿದಾಗ ನನಗಂತು ಗೊತ್ತೇ ಆಗಲಿಲ್ಲ. ಅವಳ ಮುಖದಲ್ಲಿ ಕಣ್ಣು ಮಾತ್ರ ಕಾಣುತ್ತಿತ್ತು. ಅಷ್ಟು ವೀಕ್ ಆಗಿ ಬಿಟ್ಟಿದ್ದಳು. ಸದೃಢ ವಾಗಿದ್ದ ಗೆಳತಿ ಹೀಗೇಕಾದಳು ಎಂಬ ಚಿಂತೆ ಕಾಡ ತೊಡಗಿತು. ಬಸ್ಸ್ ಲ್ಲಿ ಸಿಕ್ಕಿದ ಕಾರಣ ಹೆಚ್ಚು ಮಾತಾಡಿಸದೆ ಧೈರ್ಯ ತುಂಬಿದೆ. ಅವಳನ್ನು ನೋಡುತ್ತಲೇ ಅರಿವಿಲ್ಲದೆ ಕಣ್ಣು ಹನಿಗೂಡಿತು.
ಒಂದೆರಡು ದಿನ ಕಳೆಯುತ್ತಲೇ ನಾನಾಕೆಗೆ ಫೋನಾಯಿಸಿದೆ. ಏನಾಯಿತೇ ನಿನಗೆ ಎಂದು ನೇರವಾಗಿ ಕೇಳಿಯೇ ಬಿಟ್ಟೆ. ನಿಟ್ಟುಸಿರು ಬಿಡುತ್ತಾ ಆಕೆ ಹೇಳಿದ ಶಬ್ದ ಕೇಳಿ ನಾನು ಹೌಹಾರಿದೆ. ಹೌದಾ ಹೇಗಾಯ್ತು ಮಾರಾಯಿತಿ ಎನ್ನುತ್ತಲೇ ಅವಳು ಎಲ್ಲಾ ವಿಷಯಗಳನ್ನು ಹೇಳ ತೊಡಗಿದಳು. ಮೊದಲಿಗೆ ಶೀತ ಸುರುವಾಯಿತು. ಅದಕ್ಕೆ ಮದ್ದು ತಗೊಂಡಾಯಿತು. ಸ್ವಲ್ಪ ಕಮ್ಮಿ ಆಯಿತು ಅನ್ನುತ್ತಲೇ ಮತ್ತೆ ಜೋರಾಗ ತೊಡಗಿತು. ಯಾವ ಮದ್ದಿಗೂ ಜಗ್ಗುತ್ತಲೇ ಇರಲಿಲ್ಲ. ಹಲವು ವೈದ್ಯ ರನ್ನು ಭೇಟಿಯಾದರೂ ಉತ್ತರ ಶೂನ್ಯ. ಕೊನೆಗೆ ಹಲವು ಪರೀಕ್ಷೆಗಳ ನಂತರ ಕ್ಷಯ ರೋಗದ ಪತ್ತೆಯಾಯಿತು. ಅದು ಹ್ಯಾಗೆ, ಎಲ್ಲಿಂದ ನನಗೆ ಬಂತೆಂದೇ ತಿಳಿಯದು. ಆದರೆ ಈಗ ಚಿಕಿತ್ಸೆಯ ನಂತರ ನಿಧಾನವಾಗಿ ಚೇತರಿಸಿ ಕೊಳ್ಳುತ್ತಿದ್ದೇನೆ. ದೇವರು ದೊಡ್ಡವನು , ಸಕಾಲದಲ್ಲಿ ಗೊತ್ತಾಯಿತು.
# ಅಶ್ವಿನಿಮೂರ್ತಿ ಅಯ್ಯನಕಟ್ಟೆ
ಮಿಜೋರಾಂನ ಅಸ್ಸಾಂ ರೈಫಲ್ಸ್ ಸಿಬ್ಬಂದಿ ಮತ್ತು ಕಸ್ಟಮ್ಸ್ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ,…
ಜೂನ್ 14 ರಿಂದ ಕರಾವಳಿ ಜಿಲ್ಲೆಗಳಲ್ಲಿ ಸಾಮಾನ್ಯ ಮುಂಗಾರು ಮಳೆ ಮುಂದುವರಿಯಲಿದ್ದು, ಜೂನ್…
ಕರಾವಳಿ ಹಾಗೂ ರಾಜ್ಯದ ಹಲವೆಡೆ ಮಳೆಯಾಗುತ್ತಿದೆ.ಉತ್ತರಕನ್ನಡ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ ಹಾಗೂ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಟೇಕ್ ಆಫ್ ಆಗುತ್ತಿದ್ದ ಏರ್ ಇಂಡಿಯಾ ವಿಮಾನ ಪತನವಾಗಿರುವ ಘಟನೆ ಗುಜರಾತಿನ ಅಹಮದಾಬಾದ್ನಲ್ಲಿ…
ಜೂನ್ 13ರಿಂದ ಗಾಳಿಯ ಚಲನೆಯು ನೈರುತ್ಯದಿಂದ ಈಶಾನ್ಯಕ್ಕೆ ಬದಲಾಗುವ ಸಾಧ್ಯತೆಗಳಿರುವುದರಿಂದ ರಾಜ್ಯದ ವಿವಿದೆಡೆ…