ಅಂದು ಆಕಸ್ಮಿಕವಾಗಿ ಗೆಳತಿ ಬಸ್ಸ್ ನಲ್ಲಿ ಸಿಕ್ಕಿದ್ದಳು. ಎಷ್ಟೋ ವರ್ಷಗಳ ನಂತರ ಸಿಕ್ಕಿದಾಗ ನನಗಂತು ಗೊತ್ತೇ ಆಗಲಿಲ್ಲ. ಅವಳ ಮುಖದಲ್ಲಿ ಕಣ್ಣು ಮಾತ್ರ ಕಾಣುತ್ತಿತ್ತು. ಅಷ್ಟು ವೀಕ್ ಆಗಿ ಬಿಟ್ಟಿದ್ದಳು. ಸದೃಢ ವಾಗಿದ್ದ ಗೆಳತಿ ಹೀಗೇಕಾದಳು ಎಂಬ ಚಿಂತೆ ಕಾಡ ತೊಡಗಿತು. ಬಸ್ಸ್ ಲ್ಲಿ ಸಿಕ್ಕಿದ ಕಾರಣ ಹೆಚ್ಚು ಮಾತಾಡಿಸದೆ ಧೈರ್ಯ ತುಂಬಿದೆ. ಅವಳನ್ನು ನೋಡುತ್ತಲೇ ಅರಿವಿಲ್ಲದೆ ಕಣ್ಣು ಹನಿಗೂಡಿತು.
ಒಂದೆರಡು ದಿನ ಕಳೆಯುತ್ತಲೇ ನಾನಾಕೆಗೆ ಫೋನಾಯಿಸಿದೆ. ಏನಾಯಿತೇ ನಿನಗೆ ಎಂದು ನೇರವಾಗಿ ಕೇಳಿಯೇ ಬಿಟ್ಟೆ. ನಿಟ್ಟುಸಿರು ಬಿಡುತ್ತಾ ಆಕೆ ಹೇಳಿದ ಶಬ್ದ ಕೇಳಿ ನಾನು ಹೌಹಾರಿದೆ. ಹೌದಾ ಹೇಗಾಯ್ತು ಮಾರಾಯಿತಿ ಎನ್ನುತ್ತಲೇ ಅವಳು ಎಲ್ಲಾ ವಿಷಯಗಳನ್ನು ಹೇಳ ತೊಡಗಿದಳು. ಮೊದಲಿಗೆ ಶೀತ ಸುರುವಾಯಿತು. ಅದಕ್ಕೆ ಮದ್ದು ತಗೊಂಡಾಯಿತು. ಸ್ವಲ್ಪ ಕಮ್ಮಿ ಆಯಿತು ಅನ್ನುತ್ತಲೇ ಮತ್ತೆ ಜೋರಾಗ ತೊಡಗಿತು. ಯಾವ ಮದ್ದಿಗೂ ಜಗ್ಗುತ್ತಲೇ ಇರಲಿಲ್ಲ. ಹಲವು ವೈದ್ಯ ರನ್ನು ಭೇಟಿಯಾದರೂ ಉತ್ತರ ಶೂನ್ಯ. ಕೊನೆಗೆ ಹಲವು ಪರೀಕ್ಷೆಗಳ ನಂತರ ಕ್ಷಯ ರೋಗದ ಪತ್ತೆಯಾಯಿತು. ಅದು ಹ್ಯಾಗೆ, ಎಲ್ಲಿಂದ ನನಗೆ ಬಂತೆಂದೇ ತಿಳಿಯದು. ಆದರೆ ಈಗ ಚಿಕಿತ್ಸೆಯ ನಂತರ ನಿಧಾನವಾಗಿ ಚೇತರಿಸಿ ಕೊಳ್ಳುತ್ತಿದ್ದೇನೆ. ದೇವರು ದೊಡ್ಡವನು , ಸಕಾಲದಲ್ಲಿ ಗೊತ್ತಾಯಿತು.
# ಅಶ್ವಿನಿಮೂರ್ತಿ ಅಯ್ಯನಕಟ್ಟೆ
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…