Advertisement
The Rural Mirror ವಾರದ ವಿಶೇಷ

World Water Day | ನೀರು ಉಳಿಸುವ ಬನ್ನಿ… | ಶಾಂತಿ ಹಾಗೂ ಸಮೃದ್ಧಿಗಾಗಿ ನೀರು |

Share

ಪ್ರತಿ ವರ್ಷ ಮಾರ್ಚ್ 22 ರಂದು ವಿಶ್ವ ಜಲ ದಿನಾಚರಣೆಯನ್ನು ಆಚರಿಸಲಾಗುತ್ತದೆ. ಈಗೀಗ ಜನ ಸಂರಕ್ಷಣೆಯ ಅಗತ್ಯದ ಬಗ್ಗೆ ಮನವರಿಕೆಯಾಗಲು ಆರಂಭವಾಗಿದೆ. ಈ ವರ್ಷ ನೀರಿನ ಬಿಕ್ಕಟ್ಟು ಆರಂಭವಾಗಿದೆ. ಕೈಕೊಟ್ಟ ಮುಂಗಾರು, ಬತ್ತುತ್ತಿರುವ ಅಂರ್ತಜಲ, ವಿಪರೀತ ಬಿಸಿಲು ಇರುವ ನೀರನ್ನು ಬತ್ತುವಂತೆ ಮಾಡುತ್ತಿದೆ. ಹೀಗಾಗಿ ತಡವಾಗಿಯಾದರೂ ಜಲ ಸಂರಕ್ಷಣೆಯ ಕಡೆಗೆ ಗಮನಹರಿಸಬೇಕಿದೆ. ನೀರು ಉಳಿಸುವ ಬಗ್ಗೆ ಅತಿಯಾಗಿ ಗಮನ ಕೊಡಬೇಕಿದೆ.

1992 ರಲ್ಲಿ ಜನೈರೊದಲ್ಲಿ ನಡೆದ ವಿಶ್ವಸಂಸ್ಥೆಯ ಪರಿಸರ ಮತ್ತು ಅಭಿವೃದ್ಧಿಯ ಸಮ್ಮೇಳನದಲ್ಲಿ ಮಾರ್ಚ್ 22 ವಿಶ್ವ ಜಲ ದಿನ ಎಂದು ಘೋಷಿಸಲಾಯಿತು. ನೀರಿನ ಸಂಪನ್ಮೂಲಗಳ ಸುಸ್ಥಿರ ನಿರ್ವಹಣೆಗಾಗಿ ಈ ದಿನವನ್ನು ಆಚರಿಸಲಾಗುತ್ತಿದೆ. ಈ ದಿನದಂದು, ಪ್ರತಿ ವರ್ಷ ನೀರು ಮತ್ತು ನೈರ್ಮಲ್ಯದ ಕುರಿತು ಮಾಹಿತಿ ನೀಡಲಾಗುತ್ತದೆ. ಈ ವರ್ಷ  ‘ಸಮೃದ್ಧಿ ಮತ್ತು ಶಾಂತಿಗಾಗಿ ನೀರು’ ಎಂಬ ವಿಷಯದ ಮೇಲೆ ಜಲ ದಿನವನ್ನು ಆಚರಿಸಲಾಗುತ್ತದೆ.

ನೀರು ಶಾಂತಿಯನ್ನು ಸೃಷ್ಟಿಸಬಹುದು, ಘರ್ಷಣೆಯನ್ನು ಸೃಷ್ಟಿಸಬಹುದು. ನೀರು ಕಡಿಮೆಯಾದಾಗ ಅಥವಾ ಕಲುಷಿತಗೊಂಡಾಗ ಸಮಾಜಗಳಲ್ಲಿ ಉದ್ವಿಗ್ನತೆ ಉಂಟಾಗುತ್ತದೆ. ಆ ಸಮಯದಲ್ಲಿ ಪ್ರತಿಯೊಬ್ಬರ ಸಹಕಾರದಿಂದ ಮಾತ್ರ  ನೀರಿನ ಅಗತ್ಯವನ್ನು ಸರಿಗೊಳಿಸಬಹುದು. ನೀರು ಸಮೃದ್ಧಿಗಾಗಿ ಎನ್ನುವುದರಲ್ಲಿ ಎರಡು ಮಾತಿಲ್ಲ. ನೀರು ಇದ್ದರೆ ಮಾತ್ರವೇ ಕೃಷಿಯಿಂದ ತೊಡಗಿ ಎಲ್ಲಾ ಕಡೆಯೂ ಅಭಿವೃಧ್ಧಿ ಸಾಧ್ಯ.

ಜಲ ದಿನದ ಸಂದರ್ಭದ ವಿಶೇಷ ಗಮನಹರಿಸುವ ಭಾಗ ಇದು : 

  • ಸಮೃದ್ಧಿ ಮತ್ತು ಶಾಂತಿ ನೀರಿನ ಮೇಲೆ ಅವಲಂಬಿಸಿದೆ.
  • ಸಾಮೂಹಿಕ ವಲಸೆ ಮತ್ತು ರಾಜಕೀಯ ಅಶಾಂತಿಯ ರಾಷ್ಟ್ರಗಳ ಪ್ರಮುಖ ಕಾರಣಗಳಲ್ಲಿ ಹವಾಮಾನ ಬದಲಾವಣೆ ಕೂಡಾ ಇರುತ್ತದೆ.
  • ನೀರು ನಮ್ಮನ್ನು ಎಲ್ಲಾ ಬಿಕ್ಕಟ್ಟಿನಿಂದ ಹೊರತರಬಹುದಾದ ಪ್ರಮುಖ ಭಾಗ
  • ನೀರಿನ ನ್ಯಾಯಯುತ ಮತ್ತು ಸುಸ್ಥಿರ ಬಳಕೆಯ ಕಡೆಗೆ ಗಮನ ಅಗತ್ಯ ಇದೆ.
  • ಶಾಂತಿಯುತವಾಗಿ ನೀರಿನ ಬಿಕ್ಕಟ್ಟನ್ನು ನಿವಾರಿಸಬಹುದು. ಇದಕ್ಕಾಗಿ ಎಲ್ಲಾ ವಿಭಾಗದಲ್ಲೂ ಕೆಲಸ ಆಗಬೇಕಿದೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೆಳಗಿನಿಂದಲೇ ಮಳೆ- ಸಂಜೆ ಗುಡುಗು ಸಹಿತ ಭರ್ಜರಿ ಮಳೆ

ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಭಾಗಗಳಲ್ಲಿ ಮಧ್ಯಾಹ್ನ ನಂತರ ಗುಡುಗು-ಮಿಂಚು ಸಹಿತ ಸಾಧಾರಣ…

19 minutes ago

ಹವಾಮಾನ ವರದಿ | 16-05-2026 | ಕರ್ನಾಟಕದಲ್ಲಿ ಪೂರ್ವ ಮುಂಗಾರು ಚುರುಕು – ಮೇ 20 ರಿಂದ ಕರಾವಳಿಯಲ್ಲಿ ಮುಂಗಾರು ಮಾದರಿಯ ಮಳೆ ಸಾಧ್ಯತೆ

ಕರ್ನಾಟಕದ ಹಲವೆಡೆ ಪೂರ್ವ ಮುಂಗಾರು ಮಳೆ ಮುಂದುವರಿದಿದ್ದು, ಕರಾವಳಿಯಲ್ಲಿ ಮೇ 20ರಿಂದ ಮುಂಗಾರು…

2 hours ago

ಮುಂಗಾರು ಮೇ 26ಕ್ಕೆ ಕೇರಳ ಪ್ರವೇಶ ಸಾಧ್ಯ : ಕರ್ನಾಟಕದ ಹಲವೆಡೆ ಭಾರೀ ಮಳೆ ಎಚ್ಚರಿಕೆ – ರೈತರಿಗೆ ಸಲಹೆ ಏನು..?

ಮೇ 26ರಂದು ಕೇರಳಕ್ಕೆ ಮುಂಗಾರು ಪ್ರವೇಶಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ…

2 hours ago

ಅಡಿಕೆ ಮಾರುಕಟ್ಟೆಯಲ್ಲಿ ಆತಂಕದ ತಿರುವು..! ಧಾರಣೆ ಇಳಿಕೆ ಯಾಕೆ..? ಮತ್ತೆ ಏರಿಕೆಯಾಗುತ್ತದಾ..? ಬೆಳೆಗಾರರಲ್ಲಿ ಹೆಚ್ಚಿದ ಕುತೂಹಲ

ಚಾಲಿ ಅಡಿಕೆ ಧಾರಣೆ ಮೇ ತಿಂಗಳಲ್ಲಿ ಇಳಿಕೆಯಾಗುತ್ತಿರುವುದು ರೈತರ ಆತಂಕಕ್ಕೆ ಕಾರಣವಾಗಿದೆ. ಬರ್ಮಾ-ಇಂಡೋನೇಷ್ಯಾ…

4 hours ago

ರಬ್ಬರ್‌ ದರ 13 ವರ್ಷಗಳಲ್ಲಿ ದಾಖಲೆ ಮಟ್ಟಕ್ಕೆ..! ಆದರೆ ಯಾಕೆ ಬೆಳೆಗಾರರು ಇನ್ನೂ ಚಿಂತೆಯಲ್ಲಿ..?

ರಬ್ಬರ್‌ ದರವು ದೇಶದಲ್ಲಿ ದಾಖಲೆ ಮಟ್ಟ ತಲುಪಿದ್ದು, ರೈತರಿಗೆ ಲಾಭದ ನಿರೀಕ್ಷೆ ಮೂಡಿಸಿದೆ.…

9 hours ago