ಪ್ರತಿ ವರ್ಷ ಮಾರ್ಚ್ 22 ರಂದು ವಿಶ್ವ ಜಲ ದಿನಾಚರಣೆಯನ್ನು ಆಚರಿಸಲಾಗುತ್ತದೆ. ಈಗೀಗ ಜನ ಸಂರಕ್ಷಣೆಯ ಅಗತ್ಯದ ಬಗ್ಗೆ ಮನವರಿಕೆಯಾಗಲು ಆರಂಭವಾಗಿದೆ. ಈ ವರ್ಷ ನೀರಿನ ಬಿಕ್ಕಟ್ಟು ಆರಂಭವಾಗಿದೆ. ಕೈಕೊಟ್ಟ ಮುಂಗಾರು, ಬತ್ತುತ್ತಿರುವ ಅಂರ್ತಜಲ, ವಿಪರೀತ ಬಿಸಿಲು ಇರುವ ನೀರನ್ನು ಬತ್ತುವಂತೆ ಮಾಡುತ್ತಿದೆ. ಹೀಗಾಗಿ ತಡವಾಗಿಯಾದರೂ ಜಲ ಸಂರಕ್ಷಣೆಯ ಕಡೆಗೆ ಗಮನಹರಿಸಬೇಕಿದೆ. ನೀರು ಉಳಿಸುವ ಬಗ್ಗೆ ಅತಿಯಾಗಿ ಗಮನ ಕೊಡಬೇಕಿದೆ.
1992 ರಲ್ಲಿ ಜನೈರೊದಲ್ಲಿ ನಡೆದ ವಿಶ್ವಸಂಸ್ಥೆಯ ಪರಿಸರ ಮತ್ತು ಅಭಿವೃದ್ಧಿಯ ಸಮ್ಮೇಳನದಲ್ಲಿ ಮಾರ್ಚ್ 22 ವಿಶ್ವ ಜಲ ದಿನ ಎಂದು ಘೋಷಿಸಲಾಯಿತು. ನೀರಿನ ಸಂಪನ್ಮೂಲಗಳ ಸುಸ್ಥಿರ ನಿರ್ವಹಣೆಗಾಗಿ ಈ ದಿನವನ್ನು ಆಚರಿಸಲಾಗುತ್ತಿದೆ. ಈ ದಿನದಂದು, ಪ್ರತಿ ವರ್ಷ ನೀರು ಮತ್ತು ನೈರ್ಮಲ್ಯದ ಕುರಿತು ಮಾಹಿತಿ ನೀಡಲಾಗುತ್ತದೆ. ಈ ವರ್ಷ ‘ಸಮೃದ್ಧಿ ಮತ್ತು ಶಾಂತಿಗಾಗಿ ನೀರು’ ಎಂಬ ವಿಷಯದ ಮೇಲೆ ಜಲ ದಿನವನ್ನು ಆಚರಿಸಲಾಗುತ್ತದೆ.
ನೀರು ಶಾಂತಿಯನ್ನು ಸೃಷ್ಟಿಸಬಹುದು, ಘರ್ಷಣೆಯನ್ನು ಸೃಷ್ಟಿಸಬಹುದು. ನೀರು ಕಡಿಮೆಯಾದಾಗ ಅಥವಾ ಕಲುಷಿತಗೊಂಡಾಗ ಸಮಾಜಗಳಲ್ಲಿ ಉದ್ವಿಗ್ನತೆ ಉಂಟಾಗುತ್ತದೆ. ಆ ಸಮಯದಲ್ಲಿ ಪ್ರತಿಯೊಬ್ಬರ ಸಹಕಾರದಿಂದ ಮಾತ್ರ ನೀರಿನ ಅಗತ್ಯವನ್ನು ಸರಿಗೊಳಿಸಬಹುದು. ನೀರು ಸಮೃದ್ಧಿಗಾಗಿ ಎನ್ನುವುದರಲ್ಲಿ ಎರಡು ಮಾತಿಲ್ಲ. ನೀರು ಇದ್ದರೆ ಮಾತ್ರವೇ ಕೃಷಿಯಿಂದ ತೊಡಗಿ ಎಲ್ಲಾ ಕಡೆಯೂ ಅಭಿವೃಧ್ಧಿ ಸಾಧ್ಯ.
ಜಲ ದಿನದ ಸಂದರ್ಭದ ವಿಶೇಷ ಗಮನಹರಿಸುವ ಭಾಗ ಇದು :
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…