Advertisement
The Rural Mirror ವಾರದ ವಿಶೇಷ

World Water Day | ನೀರು ಉಳಿಸುವ ಬನ್ನಿ… | ಶಾಂತಿ ಹಾಗೂ ಸಮೃದ್ಧಿಗಾಗಿ ನೀರು |

Share

ಪ್ರತಿ ವರ್ಷ ಮಾರ್ಚ್ 22 ರಂದು ವಿಶ್ವ ಜಲ ದಿನಾಚರಣೆಯನ್ನು ಆಚರಿಸಲಾಗುತ್ತದೆ. ಈಗೀಗ ಜನ ಸಂರಕ್ಷಣೆಯ ಅಗತ್ಯದ ಬಗ್ಗೆ ಮನವರಿಕೆಯಾಗಲು ಆರಂಭವಾಗಿದೆ. ಈ ವರ್ಷ ನೀರಿನ ಬಿಕ್ಕಟ್ಟು ಆರಂಭವಾಗಿದೆ. ಕೈಕೊಟ್ಟ ಮುಂಗಾರು, ಬತ್ತುತ್ತಿರುವ ಅಂರ್ತಜಲ, ವಿಪರೀತ ಬಿಸಿಲು ಇರುವ ನೀರನ್ನು ಬತ್ತುವಂತೆ ಮಾಡುತ್ತಿದೆ. ಹೀಗಾಗಿ ತಡವಾಗಿಯಾದರೂ ಜಲ ಸಂರಕ್ಷಣೆಯ ಕಡೆಗೆ ಗಮನಹರಿಸಬೇಕಿದೆ. ನೀರು ಉಳಿಸುವ ಬಗ್ಗೆ ಅತಿಯಾಗಿ ಗಮನ ಕೊಡಬೇಕಿದೆ.

1992 ರಲ್ಲಿ ಜನೈರೊದಲ್ಲಿ ನಡೆದ ವಿಶ್ವಸಂಸ್ಥೆಯ ಪರಿಸರ ಮತ್ತು ಅಭಿವೃದ್ಧಿಯ ಸಮ್ಮೇಳನದಲ್ಲಿ ಮಾರ್ಚ್ 22 ವಿಶ್ವ ಜಲ ದಿನ ಎಂದು ಘೋಷಿಸಲಾಯಿತು. ನೀರಿನ ಸಂಪನ್ಮೂಲಗಳ ಸುಸ್ಥಿರ ನಿರ್ವಹಣೆಗಾಗಿ ಈ ದಿನವನ್ನು ಆಚರಿಸಲಾಗುತ್ತಿದೆ. ಈ ದಿನದಂದು, ಪ್ರತಿ ವರ್ಷ ನೀರು ಮತ್ತು ನೈರ್ಮಲ್ಯದ ಕುರಿತು ಮಾಹಿತಿ ನೀಡಲಾಗುತ್ತದೆ. ಈ ವರ್ಷ  ‘ಸಮೃದ್ಧಿ ಮತ್ತು ಶಾಂತಿಗಾಗಿ ನೀರು’ ಎಂಬ ವಿಷಯದ ಮೇಲೆ ಜಲ ದಿನವನ್ನು ಆಚರಿಸಲಾಗುತ್ತದೆ.

ನೀರು ಶಾಂತಿಯನ್ನು ಸೃಷ್ಟಿಸಬಹುದು, ಘರ್ಷಣೆಯನ್ನು ಸೃಷ್ಟಿಸಬಹುದು. ನೀರು ಕಡಿಮೆಯಾದಾಗ ಅಥವಾ ಕಲುಷಿತಗೊಂಡಾಗ ಸಮಾಜಗಳಲ್ಲಿ ಉದ್ವಿಗ್ನತೆ ಉಂಟಾಗುತ್ತದೆ. ಆ ಸಮಯದಲ್ಲಿ ಪ್ರತಿಯೊಬ್ಬರ ಸಹಕಾರದಿಂದ ಮಾತ್ರ  ನೀರಿನ ಅಗತ್ಯವನ್ನು ಸರಿಗೊಳಿಸಬಹುದು. ನೀರು ಸಮೃದ್ಧಿಗಾಗಿ ಎನ್ನುವುದರಲ್ಲಿ ಎರಡು ಮಾತಿಲ್ಲ. ನೀರು ಇದ್ದರೆ ಮಾತ್ರವೇ ಕೃಷಿಯಿಂದ ತೊಡಗಿ ಎಲ್ಲಾ ಕಡೆಯೂ ಅಭಿವೃಧ್ಧಿ ಸಾಧ್ಯ.

ಜಲ ದಿನದ ಸಂದರ್ಭದ ವಿಶೇಷ ಗಮನಹರಿಸುವ ಭಾಗ ಇದು : 

  • ಸಮೃದ್ಧಿ ಮತ್ತು ಶಾಂತಿ ನೀರಿನ ಮೇಲೆ ಅವಲಂಬಿಸಿದೆ.
  • ಸಾಮೂಹಿಕ ವಲಸೆ ಮತ್ತು ರಾಜಕೀಯ ಅಶಾಂತಿಯ ರಾಷ್ಟ್ರಗಳ ಪ್ರಮುಖ ಕಾರಣಗಳಲ್ಲಿ ಹವಾಮಾನ ಬದಲಾವಣೆ ಕೂಡಾ ಇರುತ್ತದೆ.
  • ನೀರು ನಮ್ಮನ್ನು ಎಲ್ಲಾ ಬಿಕ್ಕಟ್ಟಿನಿಂದ ಹೊರತರಬಹುದಾದ ಪ್ರಮುಖ ಭಾಗ
  • ನೀರಿನ ನ್ಯಾಯಯುತ ಮತ್ತು ಸುಸ್ಥಿರ ಬಳಕೆಯ ಕಡೆಗೆ ಗಮನ ಅಗತ್ಯ ಇದೆ.
  • ಶಾಂತಿಯುತವಾಗಿ ನೀರಿನ ಬಿಕ್ಕಟ್ಟನ್ನು ನಿವಾರಿಸಬಹುದು. ಇದಕ್ಕಾಗಿ ಎಲ್ಲಾ ವಿಭಾಗದಲ್ಲೂ ಕೆಲಸ ಆಗಬೇಕಿದೆ.
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಜಗತ್ತು ನಮ್ಮ ಜೊತೆಗಿದೆ ಎಂಬ ಭ್ರಮೆ

ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…

18 hours ago

ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ

ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…

1 day ago

ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ

ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…

1 day ago

ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ

ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…

2 days ago

ರಾಜ್ಯದ 102 ತಾಲೂಕುಗಳಲ್ಲಿ ಬರದ ಛಾಯೆ – ತಿಂಗಳಾಂತ್ಯಕ್ಕೆ ಕೇಂದ್ರಕ್ಕೆ ವರದಿ ಸಲ್ಲಿಕೆ

ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…

2 days ago

ಮಂಗಳೂರಿನ ಅಶ್ಮಿತ್ ಎ.ಜೆ. ಅವರಿಗೆ ‘ಸರಿಗಮಪ 2026’ರ ಕಿರೀಟ

ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…

2 days ago