Advertisement
ಮನಸಿನ ಮಾತು

ಮನೆ ಬೆಳಗುವ ಮಹಿಳೆಯ ದಿನವಿಂದು | ವಿಶ್ವ ಮಹಿಳಾ ದಿನದ ಶುಭಾಶಯ

Share

“ವಿಶ್ವ ಮಹಿಳಾ ದಿನ” ದ ಶುಭಾಶಯಗಳು

ಸಣ್ಣಪುಟ್ಟ ಸಂಗತಿಗಳು ದಿನನಿತ್ಯದ ಬದುಕಿನಲ್ಲಿ ಮಹತ್ವದ ಪಾತ್ರ ನಿರ್ವಹಿಸುತ್ತವೆ. ಅದೊಂದು ನಗುವಿರಬಹುದು,  ಬೆಳಗಿನ ನಮಸ್ಕಾರವಿರಬಹುದು, ಶುಭಾಶಯಗಳಿರ ಬಹುದು . ನಿನ್ನೆಯಿಂದಲೇ ಒಬ್ಬೊಬ್ಬ ರದೇ ಮೆಸೇಜ್ ಗಳನ್ನು  ಓದುವಾಗಲೇ ನಿರ್ಧರಿಸಿದ್ದೆ ಇವತ್ತು ಖುಷಿಯಿಂದಲೇ ಇಡೀ  ದಿನವನ್ನು  ಸವಿಯಬೇಕೆಂದು. ಅದರಲ್ಲೇನಿದೆ ನಿನ್ನೆಯಂತೆಯೇ ಅಲ್ಲವೇ ಇಂದು ಎಂದು ಪ್ರಶ್ನೆ ತಯಾರಿದೆಯಲ್ಲವೇ?  ಹೌದು ನಿನ್ನೆಯಂತೆಯೇ ಇಂದು. ತಾರೀಖು, ವಾರ  ಮಾತ್ರ ವ್ಯತ್ಯಾಸ. ಅದೇ ಮುಂಜಾವಿನ ಸೂರ್ಯೋದಯ,ಅದೇ ಹಕ್ಕಿಗಳ ಕಲರವ.  ಅದೇ ನಿತ್ಯಕರ್ಮಗಳು, ಅದೇ ಜನ, ಸೇಮ್ ಟು ಸೇಮ್. ಆದರೂ ಕೂಡ ನನಗಿಂದು ವಿಶೇಷ ದಿನವೇ. !

ಮಾರ್ಚ್ 8 ವಿಶ್ವ ಮಹಿಳಾ ದಿನ.  ಯಾಕೆ ಈ ಆಚರಣೆಗಿಷ್ಟು ಪ್ರಚಾರ?  ಮನಸು ಮೃದು, ಮಾತು ಕಠೋರ.  ತನ್ನೆಲ್ಲ ನಿರ್ಧಾರಗಳನ್ನು  ಭವಿಷ್ಯದ  ಕುರಿತು ಲಕ್ಷ್ಯವಿಟ್ಟು  ತೆಗೆದುಕೊಳ್ಳುವುದು ಮಹಿಳೆಯ  ವಿಶೇಷತೆ.

ಅಂದು ಅದೊಂದು ಪ್ರಮುಖ ಹೋರಾಟ ಒಬ್ಬ ಸಾಮಾನ್ಯ ಮಹಿಳೆಯನ್ನು ಅಸಾಮಾನ್ಯವಾಗಿಸಿತು.  ನ್ಯೂಯಾರ್ಕ್ ನ  ಕಾರ್ಮಿಕ ಮಹಿಳೆ ಕ್ಲಾರಾ ಜೆಟ್ ಕಿನ್  ಕೆಲಸಕ್ಕಾಗಿ , ಸಮಾನ ವೇತನಕ್ಕಾಗಿ, ಹೆರಿಗೆ ಸೌಲಭ್ಯ ಕ್ಕಾಗಿ ತಿಂಗಳಾನುಗಟ್ಟಲೆ ಹೋರಾಟ ಮಾಡಿ   ಗೆಲುವು ಸಾಧಿಸಿದ ದಿನ.  ಆದ್ದರಿಂದ ಈ ದಿನವನ್ನು ಸಾಧನೆಯ ದಿನ, ಮಹಿಳಾ ಯಶಸ್ಸಿನ ದಿನವೆಂದು  ಸಂಭ್ರಮಿಸುತ್ತೇವೆ.

1975 ರಲ್ಲಿ ವಿಶ್ವಸಂಸ್ಥೆಯು ಈ ದಿನವನ್ನು ‘ ವಿಶ್ವ ಮಹಿಳಾ ದಿನ’ವೆಂದು ಘೋಷಿಸಿತು. ದೊಡ್ಡ ದೊಡ್ಡ ಪ್ರಶಸ್ತಿಗಳು ಸಿಕ್ಕಿದರಷ್ಟೇ ಯಶಸ್ವಿ ಮಹಿಳೆ  ಎಂಬ ಮಾತು ಯಾಕೋ ಬೇಸರವುಂಟು ಮಾಡುತ್ತದೆ.  ಬದುಕಿನ ಪ್ರತಿಯೊಂದು ನಡೆಯಲ್ಲೂ ಎದುರಾಗುವ ಸಮಸ್ಯೆಗಳು ನಿರಂತರವಾಗಿ ಪ್ರಶ್ನೆ ಪತ್ರಿಕೆಗಳಾಗಿ  ಕಾಡುತ್ತವೆ. ತಾಳ್ಮೆ ಯಿಂದ ಉಪಾಯವಾಗಿ ಉತ್ತರಿಸುತ್ತಾ ಮುನ್ನಡೆದಾಗ ಗೋಜಲುಗಳು ನಿವಾರಣೆಯಾಗುತ್ತಾ  ಪರಿಹಾರ ತಾನಾಗಿಯೇ ದೊರೆಯಿತ್ತದೆ. ದೈಹಿಕ ಆರೋಗ್ಯ ದೊಂದಿಗೆ  ಮನಸ್ಸಿನ ಆರೋಗ್ಯವನ್ನು ಸಮರ್ಥವಾಗಿ ಕಾಪಾಡಿಕೊಂಡಾಗ ಮಹಿಳೆ ಯಶಸ್ವಿಯಾಗಿ , ಗಟ್ಟಿಗಿತ್ತಿಯಾಗಿ  ಹೊರಹೊಮ್ಮುತ್ತಾಳೆ.
ಎಲ್ಲಾ ಹೆಣ್ಣು ಮಕ್ಕಳಿಗೂ ‘ ವಿಶ್ವ ಮಹಿಳಾ ದಿನ’ದ ಶುಭಾಶಯಗಳು.

# ಅಶ್ವಿನಿ ಮೂರ್ತಿ ಅಯ್ಯನಕಟ್ಟೆ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ಮಂಗಳೂರು ಅಡಿಕೆ ಮಾರುಕಟ್ಟೆ | ಸ್ಥಿರತೆಯಿಂದ ಏರಿಕೆಯತ್ತ ಮುಖ ಮಾಡಿದ ಧಾರಣೆ

ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.

24 hours ago

ಜನಗಣತಿ 2026 – ಏಪ್ರಿಲ್ 1ರಿಂದ ಸ್ವಯಂ-ಎಣಿಕೆ ಆರಂಭ – ಸಹಕರಿಸಲು ಜಿಲ್ಲಾಧಿಕಾರಿ ಕರೆ

ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…

24 hours ago

ಹವಾಮಾನ ವರದಿ | 01-04-2026 | ಕರಾವಳಿ-ಮಲೆನಾಡಿನಲ್ಲಿ ಗುಡುಗು ಮಳೆ ಮುಂದುವರಿಕೆ – ಏ.10 ರಿಂದ ಮತ್ತೆ ಮಳೆ ಚುರುಕು ಸಾಧ್ಯತೆ!

ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…

2 days ago

ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!

ಏಪ್ರಿಲ್‌ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…

2 days ago

ಗ್ಯಾಸ್ ಸಿಲಿಂಡರ್ ಕೊರತೆ ಪರಿಣಾಮ : ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆ

ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…

2 days ago

ಹಸಿರು ಅಮೋನಿಯಾ ಒಪ್ಪಂದಗಳು | ಭಾರತದ ಇಂಧನ ಭದ್ರತೆಗೆ ಹೊಸ ಬಲ..! 2030 ಗುರಿಗೆ ವೇಗ

ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…

2 days ago