ಮನಸಿನ ಮಾತು

ಮನೆ ಬೆಳಗುವ ಮಹಿಳೆಯ ದಿನವಿಂದು | ವಿಶ್ವ ಮಹಿಳಾ ದಿನದ ಶುಭಾಶಯ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

“ವಿಶ್ವ ಮಹಿಳಾ ದಿನ” ದ ಶುಭಾಶಯಗಳು

Advertisement

ಸಣ್ಣಪುಟ್ಟ ಸಂಗತಿಗಳು ದಿನನಿತ್ಯದ ಬದುಕಿನಲ್ಲಿ ಮಹತ್ವದ ಪಾತ್ರ ನಿರ್ವಹಿಸುತ್ತವೆ. ಅದೊಂದು ನಗುವಿರಬಹುದು,  ಬೆಳಗಿನ ನಮಸ್ಕಾರವಿರಬಹುದು, ಶುಭಾಶಯಗಳಿರ ಬಹುದು . ನಿನ್ನೆಯಿಂದಲೇ ಒಬ್ಬೊಬ್ಬ ರದೇ ಮೆಸೇಜ್ ಗಳನ್ನು  ಓದುವಾಗಲೇ ನಿರ್ಧರಿಸಿದ್ದೆ ಇವತ್ತು ಖುಷಿಯಿಂದಲೇ ಇಡೀ  ದಿನವನ್ನು  ಸವಿಯಬೇಕೆಂದು. ಅದರಲ್ಲೇನಿದೆ ನಿನ್ನೆಯಂತೆಯೇ ಅಲ್ಲವೇ ಇಂದು ಎಂದು ಪ್ರಶ್ನೆ ತಯಾರಿದೆಯಲ್ಲವೇ?  ಹೌದು ನಿನ್ನೆಯಂತೆಯೇ ಇಂದು. ತಾರೀಖು, ವಾರ  ಮಾತ್ರ ವ್ಯತ್ಯಾಸ. ಅದೇ ಮುಂಜಾವಿನ ಸೂರ್ಯೋದಯ,ಅದೇ ಹಕ್ಕಿಗಳ ಕಲರವ.  ಅದೇ ನಿತ್ಯಕರ್ಮಗಳು, ಅದೇ ಜನ, ಸೇಮ್ ಟು ಸೇಮ್. ಆದರೂ ಕೂಡ ನನಗಿಂದು ವಿಶೇಷ ದಿನವೇ. !

ಮಾರ್ಚ್ 8 ವಿಶ್ವ ಮಹಿಳಾ ದಿನ.  ಯಾಕೆ ಈ ಆಚರಣೆಗಿಷ್ಟು ಪ್ರಚಾರ?  ಮನಸು ಮೃದು, ಮಾತು ಕಠೋರ.  ತನ್ನೆಲ್ಲ ನಿರ್ಧಾರಗಳನ್ನು  ಭವಿಷ್ಯದ  ಕುರಿತು ಲಕ್ಷ್ಯವಿಟ್ಟು  ತೆಗೆದುಕೊಳ್ಳುವುದು ಮಹಿಳೆಯ  ವಿಶೇಷತೆ.

ಅಂದು ಅದೊಂದು ಪ್ರಮುಖ ಹೋರಾಟ ಒಬ್ಬ ಸಾಮಾನ್ಯ ಮಹಿಳೆಯನ್ನು ಅಸಾಮಾನ್ಯವಾಗಿಸಿತು.  ನ್ಯೂಯಾರ್ಕ್ ನ  ಕಾರ್ಮಿಕ ಮಹಿಳೆ ಕ್ಲಾರಾ ಜೆಟ್ ಕಿನ್  ಕೆಲಸಕ್ಕಾಗಿ , ಸಮಾನ ವೇತನಕ್ಕಾಗಿ, ಹೆರಿಗೆ ಸೌಲಭ್ಯ ಕ್ಕಾಗಿ ತಿಂಗಳಾನುಗಟ್ಟಲೆ ಹೋರಾಟ ಮಾಡಿ   ಗೆಲುವು ಸಾಧಿಸಿದ ದಿನ.  ಆದ್ದರಿಂದ ಈ ದಿನವನ್ನು ಸಾಧನೆಯ ದಿನ, ಮಹಿಳಾ ಯಶಸ್ಸಿನ ದಿನವೆಂದು  ಸಂಭ್ರಮಿಸುತ್ತೇವೆ.

1975 ರಲ್ಲಿ ವಿಶ್ವಸಂಸ್ಥೆಯು ಈ ದಿನವನ್ನು ‘ ವಿಶ್ವ ಮಹಿಳಾ ದಿನ’ವೆಂದು ಘೋಷಿಸಿತು. ದೊಡ್ಡ ದೊಡ್ಡ ಪ್ರಶಸ್ತಿಗಳು ಸಿಕ್ಕಿದರಷ್ಟೇ ಯಶಸ್ವಿ ಮಹಿಳೆ  ಎಂಬ ಮಾತು ಯಾಕೋ ಬೇಸರವುಂಟು ಮಾಡುತ್ತದೆ.  ಬದುಕಿನ ಪ್ರತಿಯೊಂದು ನಡೆಯಲ್ಲೂ ಎದುರಾಗುವ ಸಮಸ್ಯೆಗಳು ನಿರಂತರವಾಗಿ ಪ್ರಶ್ನೆ ಪತ್ರಿಕೆಗಳಾಗಿ  ಕಾಡುತ್ತವೆ. ತಾಳ್ಮೆ ಯಿಂದ ಉಪಾಯವಾಗಿ ಉತ್ತರಿಸುತ್ತಾ ಮುನ್ನಡೆದಾಗ ಗೋಜಲುಗಳು ನಿವಾರಣೆಯಾಗುತ್ತಾ  ಪರಿಹಾರ ತಾನಾಗಿಯೇ ದೊರೆಯಿತ್ತದೆ. ದೈಹಿಕ ಆರೋಗ್ಯ ದೊಂದಿಗೆ  ಮನಸ್ಸಿನ ಆರೋಗ್ಯವನ್ನು ಸಮರ್ಥವಾಗಿ ಕಾಪಾಡಿಕೊಂಡಾಗ ಮಹಿಳೆ ಯಶಸ್ವಿಯಾಗಿ , ಗಟ್ಟಿಗಿತ್ತಿಯಾಗಿ  ಹೊರಹೊಮ್ಮುತ್ತಾಳೆ.
ಎಲ್ಲಾ ಹೆಣ್ಣು ಮಕ್ಕಳಿಗೂ ‘ ವಿಶ್ವ ಮಹಿಳಾ ದಿನ’ದ ಶುಭಾಶಯಗಳು.

Advertisement

# ಅಶ್ವಿನಿ ಮೂರ್ತಿ ಅಯ್ಯನಕಟ್ಟೆ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ಹಂಸ ಮಹಾಪುರುಷ ರಾಜಯೋಗ | ಈ 3 ರಾಶಿಯವರಿಗೆ ಸಂಪತ್ತಿನ ಸುರಿಮಳೆ..!

2025 ರಲ್ಲಿ ಗುರು ಗ್ರಹವು ತನ್ನ ಸ್ವಂತ ರಾಶಿಯಾದ ಮೇಷದಲ್ಲಿ ಸಂಚರಿಸುತ್ತಿದ್ದಾಗ, ಶುಕ್ರ…

28 minutes ago

ರಾಜ್ಯದ 6 ಕಡೆ ಕೌಶಲ್ಯ ಪ್ರಯೋಗಾಲಯ ನಿರ್ಮಿಸಲು ಸರ್ಕಾರ ನಿರ್ಧಾರ

ಮಂಗಳೂರಿನಲ್ಲಿ ನಿರ್ಮಾಣಗೊಳ್ಳುತ್ತಿರುವ ರಾಜೀವ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾನಿಲಯದ ಪ್ರಾದೇಶಿಕ ಕಚೇರಿ ಕಟ್ಟಡ…

9 hours ago

ಕೋಲಾರದಲ್ಲಿ ಬಾಕಿ ಇರುವ 3610 ಜಮೀನಿನ ಸರ್ವೆ ಮುಂದಿನ ಎರಡು ತಿಂಗಳೊಳಗಾಗಿ ಪೂರ್ಣ

ಕೋಲಾರ ಜಿಲ್ಲೆಯಲ್ಲಿ ಸರ್ಕಾರಿ ಜಮೀನುಗಳಲ್ಲಿ ರೈತರಿಗೆ ಮಂಜೂರಾಗಿರುವ ಜಮೀನುಗಳಿಗೆ ಪೋಡಿ ದುರಸ್ತಿ ಮಾಡಲಾಗುತ್ತಿದೆ.…

9 hours ago

ಭಾರಿ ಮಳೆಗೆ ಮೂರು ಜನರು ಬಲಿ | ಕರಾವಳಿ ಜಿಲ್ಲೆಗಳಲ್ಲಿ ಜೂ.21 ರವರೆಗೆ ವ್ಯಾಪಕ ಮಳೆ |  ಹವಾಮಾನ ಇಲಾಖೆ ಮುನ್ಸೂಚನೆ

ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆಯಾಗಿದೆ. ಉತ್ತರ ಹಾಗೂ ದಕ್ಷಿಣ ಒಳನಾಡಿನ ಕೆಲವೆಡೆ ಮಳೆಯಾಗಿದೆ.…

9 hours ago

ಎತ್ತಿನಹೊಳೆ ಯೋಜನೆಗಾಗಿ ವಿಶ್ವೇಶ್ವರಯ್ಯ ಜಲ ನಿಗಮಕ್ಕೆ ಐಐಎನ್ ಪ್ಲಾಟಿನಂ 2025 ರಾಷ್ಟ್ರೀಯ ಪ್ರಶಸ್ತಿ

ಅಕ್ವಡಕ್ಟ್ ಇಂಜಿನಿಯರಿಂಗ್ ತಂತ್ರಜ್ಞಾನದ ಮೂಲಕ ಆರೋಗ್ಯ, ಸುರಕ್ಷತೆ, ಪರಿಸರ ಸ್ನೇಹಿ ಮಾದರಿಯಲ್ಲಿ ಎತ್ತಿನಹೊಳೆ…

9 hours ago

ಉನ್ನತ ಶಿಕ್ಷಣದಲ್ಲಿ ಪರಿಸರ ಪಠ್ಯಕ್ರಮ ಜಾರಿಗೆ ತರಲು ಸರ್ಕಾರ ನಿರ್ಧಾರ

ಉನ್ನತ ಶಿಕ್ಷಣದಲ್ಲಿ ಪರಿಸರ ಪಠ್ಯಕ್ರಮವಾಗಬೇಕಿದ್ದು, ಇದು ಅತ್ಯಂತ ಅವಶ್ಯಕವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

10 hours ago