Advertisement
ಮನಸಿನ ಮಾತು

ಮನೆ ಬೆಳಗುವ ಮಹಿಳೆಯ ದಿನವಿಂದು | ವಿಶ್ವ ಮಹಿಳಾ ದಿನದ ಶುಭಾಶಯ

Share

“ವಿಶ್ವ ಮಹಿಳಾ ದಿನ” ದ ಶುಭಾಶಯಗಳು

ಸಣ್ಣಪುಟ್ಟ ಸಂಗತಿಗಳು ದಿನನಿತ್ಯದ ಬದುಕಿನಲ್ಲಿ ಮಹತ್ವದ ಪಾತ್ರ ನಿರ್ವಹಿಸುತ್ತವೆ. ಅದೊಂದು ನಗುವಿರಬಹುದು,  ಬೆಳಗಿನ ನಮಸ್ಕಾರವಿರಬಹುದು, ಶುಭಾಶಯಗಳಿರ ಬಹುದು . ನಿನ್ನೆಯಿಂದಲೇ ಒಬ್ಬೊಬ್ಬ ರದೇ ಮೆಸೇಜ್ ಗಳನ್ನು  ಓದುವಾಗಲೇ ನಿರ್ಧರಿಸಿದ್ದೆ ಇವತ್ತು ಖುಷಿಯಿಂದಲೇ ಇಡೀ  ದಿನವನ್ನು  ಸವಿಯಬೇಕೆಂದು. ಅದರಲ್ಲೇನಿದೆ ನಿನ್ನೆಯಂತೆಯೇ ಅಲ್ಲವೇ ಇಂದು ಎಂದು ಪ್ರಶ್ನೆ ತಯಾರಿದೆಯಲ್ಲವೇ?  ಹೌದು ನಿನ್ನೆಯಂತೆಯೇ ಇಂದು. ತಾರೀಖು, ವಾರ  ಮಾತ್ರ ವ್ಯತ್ಯಾಸ. ಅದೇ ಮುಂಜಾವಿನ ಸೂರ್ಯೋದಯ,ಅದೇ ಹಕ್ಕಿಗಳ ಕಲರವ.  ಅದೇ ನಿತ್ಯಕರ್ಮಗಳು, ಅದೇ ಜನ, ಸೇಮ್ ಟು ಸೇಮ್. ಆದರೂ ಕೂಡ ನನಗಿಂದು ವಿಶೇಷ ದಿನವೇ. !

ಮಾರ್ಚ್ 8 ವಿಶ್ವ ಮಹಿಳಾ ದಿನ.  ಯಾಕೆ ಈ ಆಚರಣೆಗಿಷ್ಟು ಪ್ರಚಾರ?  ಮನಸು ಮೃದು, ಮಾತು ಕಠೋರ.  ತನ್ನೆಲ್ಲ ನಿರ್ಧಾರಗಳನ್ನು  ಭವಿಷ್ಯದ  ಕುರಿತು ಲಕ್ಷ್ಯವಿಟ್ಟು  ತೆಗೆದುಕೊಳ್ಳುವುದು ಮಹಿಳೆಯ  ವಿಶೇಷತೆ.

ಅಂದು ಅದೊಂದು ಪ್ರಮುಖ ಹೋರಾಟ ಒಬ್ಬ ಸಾಮಾನ್ಯ ಮಹಿಳೆಯನ್ನು ಅಸಾಮಾನ್ಯವಾಗಿಸಿತು.  ನ್ಯೂಯಾರ್ಕ್ ನ  ಕಾರ್ಮಿಕ ಮಹಿಳೆ ಕ್ಲಾರಾ ಜೆಟ್ ಕಿನ್  ಕೆಲಸಕ್ಕಾಗಿ , ಸಮಾನ ವೇತನಕ್ಕಾಗಿ, ಹೆರಿಗೆ ಸೌಲಭ್ಯ ಕ್ಕಾಗಿ ತಿಂಗಳಾನುಗಟ್ಟಲೆ ಹೋರಾಟ ಮಾಡಿ   ಗೆಲುವು ಸಾಧಿಸಿದ ದಿನ.  ಆದ್ದರಿಂದ ಈ ದಿನವನ್ನು ಸಾಧನೆಯ ದಿನ, ಮಹಿಳಾ ಯಶಸ್ಸಿನ ದಿನವೆಂದು  ಸಂಭ್ರಮಿಸುತ್ತೇವೆ.

1975 ರಲ್ಲಿ ವಿಶ್ವಸಂಸ್ಥೆಯು ಈ ದಿನವನ್ನು ‘ ವಿಶ್ವ ಮಹಿಳಾ ದಿನ’ವೆಂದು ಘೋಷಿಸಿತು. ದೊಡ್ಡ ದೊಡ್ಡ ಪ್ರಶಸ್ತಿಗಳು ಸಿಕ್ಕಿದರಷ್ಟೇ ಯಶಸ್ವಿ ಮಹಿಳೆ  ಎಂಬ ಮಾತು ಯಾಕೋ ಬೇಸರವುಂಟು ಮಾಡುತ್ತದೆ.  ಬದುಕಿನ ಪ್ರತಿಯೊಂದು ನಡೆಯಲ್ಲೂ ಎದುರಾಗುವ ಸಮಸ್ಯೆಗಳು ನಿರಂತರವಾಗಿ ಪ್ರಶ್ನೆ ಪತ್ರಿಕೆಗಳಾಗಿ  ಕಾಡುತ್ತವೆ. ತಾಳ್ಮೆ ಯಿಂದ ಉಪಾಯವಾಗಿ ಉತ್ತರಿಸುತ್ತಾ ಮುನ್ನಡೆದಾಗ ಗೋಜಲುಗಳು ನಿವಾರಣೆಯಾಗುತ್ತಾ  ಪರಿಹಾರ ತಾನಾಗಿಯೇ ದೊರೆಯಿತ್ತದೆ. ದೈಹಿಕ ಆರೋಗ್ಯ ದೊಂದಿಗೆ  ಮನಸ್ಸಿನ ಆರೋಗ್ಯವನ್ನು ಸಮರ್ಥವಾಗಿ ಕಾಪಾಡಿಕೊಂಡಾಗ ಮಹಿಳೆ ಯಶಸ್ವಿಯಾಗಿ , ಗಟ್ಟಿಗಿತ್ತಿಯಾಗಿ  ಹೊರಹೊಮ್ಮುತ್ತಾಳೆ.
ಎಲ್ಲಾ ಹೆಣ್ಣು ಮಕ್ಕಳಿಗೂ ‘ ವಿಶ್ವ ಮಹಿಳಾ ದಿನ’ದ ಶುಭಾಶಯಗಳು.

# ಅಶ್ವಿನಿ ಮೂರ್ತಿ ಅಯ್ಯನಕಟ್ಟೆ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ

ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…

13 hours ago

ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…

14 hours ago

ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ

ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…

14 hours ago

ಮುಂಗಾರು ದುರ್ಬಲ: ಯಾದಗಿರಿ ರೈತರಿಗೆ ಕೃಷಿ ಇಲಾಖೆಯ ಮಹತ್ವದ ಸಲಹೆ

ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…

14 hours ago

ಬ್ರಿಟನ್‌ನಲ್ಲಿ ಉರಿ ಬಿಸಿಲು – ಎರಡು ತಿಂಗಳಲ್ಲಿ 2,700ಕ್ಕೂ ಹೆಚ್ಚು ಸಾವು..! ಹವಾಮಾನ ಬದಲಾವಣೆಯಿಂದ ಶೇ.40ಕ್ಕೂ ಹೆಚ್ಚು ಜೀವಹಾನಿ ಎಂದ ಅಧ್ಯಯನ

ಬ್ರಿಟನ್‌ನಲ್ಲಿ ಮೇ–ಜೂನ್ ಉಷ್ಣ ಅಲೆಗಳಿಂದ 2,700ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಈ ಸಾವುಗಳಲ್ಲಿ…

14 hours ago

ನೈಸರ್ಗಿಕ ಕೃಷಿಗೆ ರಾಜಸ್ಥಾನದ ದೊಡ್ಡ ಹೆಜ್ಜೆ : 32 ಸಂಸ್ಥೆಗಳೊಂದಿಗೆ ಒಪ್ಪಂದ, ರೈತರಿಗೆ ತಂತ್ರಜ್ಞಾನ – ಮಾರುಕಟ್ಟೆ ಬೆಂಬಲ

ನೈಸರ್ಗಿಕ ಕೃಷಿ ಮತ್ತು ಕೃಷಿ ತಂತ್ರಜ್ಞಾನ ಅಭಿವೃದ್ಧಿಗೆ ರಾಜಸ್ಥಾನ ಸರ್ಕಾರ 32 ಸಂಸ್ಥೆಗಳೊಂದಿಗೆ…

22 hours ago