Advertisement
ಮನಸಿನ ಮಾತು

ಮನೆ ಬೆಳಗುವ ಮಹಿಳೆಯ ದಿನವಿಂದು | ವಿಶ್ವ ಮಹಿಳಾ ದಿನದ ಶುಭಾಶಯ

Share

“ವಿಶ್ವ ಮಹಿಳಾ ದಿನ” ದ ಶುಭಾಶಯಗಳು

Advertisement

ಸಣ್ಣಪುಟ್ಟ ಸಂಗತಿಗಳು ದಿನನಿತ್ಯದ ಬದುಕಿನಲ್ಲಿ ಮಹತ್ವದ ಪಾತ್ರ ನಿರ್ವಹಿಸುತ್ತವೆ. ಅದೊಂದು ನಗುವಿರಬಹುದು,  ಬೆಳಗಿನ ನಮಸ್ಕಾರವಿರಬಹುದು, ಶುಭಾಶಯಗಳಿರ ಬಹುದು . ನಿನ್ನೆಯಿಂದಲೇ ಒಬ್ಬೊಬ್ಬ ರದೇ ಮೆಸೇಜ್ ಗಳನ್ನು  ಓದುವಾಗಲೇ ನಿರ್ಧರಿಸಿದ್ದೆ ಇವತ್ತು ಖುಷಿಯಿಂದಲೇ ಇಡೀ  ದಿನವನ್ನು  ಸವಿಯಬೇಕೆಂದು. ಅದರಲ್ಲೇನಿದೆ ನಿನ್ನೆಯಂತೆಯೇ ಅಲ್ಲವೇ ಇಂದು ಎಂದು ಪ್ರಶ್ನೆ ತಯಾರಿದೆಯಲ್ಲವೇ?  ಹೌದು ನಿನ್ನೆಯಂತೆಯೇ ಇಂದು. ತಾರೀಖು, ವಾರ  ಮಾತ್ರ ವ್ಯತ್ಯಾಸ. ಅದೇ ಮುಂಜಾವಿನ ಸೂರ್ಯೋದಯ,ಅದೇ ಹಕ್ಕಿಗಳ ಕಲರವ.  ಅದೇ ನಿತ್ಯಕರ್ಮಗಳು, ಅದೇ ಜನ, ಸೇಮ್ ಟು ಸೇಮ್. ಆದರೂ ಕೂಡ ನನಗಿಂದು ವಿಶೇಷ ದಿನವೇ. !

ಮಾರ್ಚ್ 8 ವಿಶ್ವ ಮಹಿಳಾ ದಿನ.  ಯಾಕೆ ಈ ಆಚರಣೆಗಿಷ್ಟು ಪ್ರಚಾರ?  ಮನಸು ಮೃದು, ಮಾತು ಕಠೋರ.  ತನ್ನೆಲ್ಲ ನಿರ್ಧಾರಗಳನ್ನು  ಭವಿಷ್ಯದ  ಕುರಿತು ಲಕ್ಷ್ಯವಿಟ್ಟು  ತೆಗೆದುಕೊಳ್ಳುವುದು ಮಹಿಳೆಯ  ವಿಶೇಷತೆ.

ಅಂದು ಅದೊಂದು ಪ್ರಮುಖ ಹೋರಾಟ ಒಬ್ಬ ಸಾಮಾನ್ಯ ಮಹಿಳೆಯನ್ನು ಅಸಾಮಾನ್ಯವಾಗಿಸಿತು.  ನ್ಯೂಯಾರ್ಕ್ ನ  ಕಾರ್ಮಿಕ ಮಹಿಳೆ ಕ್ಲಾರಾ ಜೆಟ್ ಕಿನ್  ಕೆಲಸಕ್ಕಾಗಿ , ಸಮಾನ ವೇತನಕ್ಕಾಗಿ, ಹೆರಿಗೆ ಸೌಲಭ್ಯ ಕ್ಕಾಗಿ ತಿಂಗಳಾನುಗಟ್ಟಲೆ ಹೋರಾಟ ಮಾಡಿ   ಗೆಲುವು ಸಾಧಿಸಿದ ದಿನ.  ಆದ್ದರಿಂದ ಈ ದಿನವನ್ನು ಸಾಧನೆಯ ದಿನ, ಮಹಿಳಾ ಯಶಸ್ಸಿನ ದಿನವೆಂದು  ಸಂಭ್ರಮಿಸುತ್ತೇವೆ.

1975 ರಲ್ಲಿ ವಿಶ್ವಸಂಸ್ಥೆಯು ಈ ದಿನವನ್ನು ‘ ವಿಶ್ವ ಮಹಿಳಾ ದಿನ’ವೆಂದು ಘೋಷಿಸಿತು. ದೊಡ್ಡ ದೊಡ್ಡ ಪ್ರಶಸ್ತಿಗಳು ಸಿಕ್ಕಿದರಷ್ಟೇ ಯಶಸ್ವಿ ಮಹಿಳೆ  ಎಂಬ ಮಾತು ಯಾಕೋ ಬೇಸರವುಂಟು ಮಾಡುತ್ತದೆ.  ಬದುಕಿನ ಪ್ರತಿಯೊಂದು ನಡೆಯಲ್ಲೂ ಎದುರಾಗುವ ಸಮಸ್ಯೆಗಳು ನಿರಂತರವಾಗಿ ಪ್ರಶ್ನೆ ಪತ್ರಿಕೆಗಳಾಗಿ  ಕಾಡುತ್ತವೆ. ತಾಳ್ಮೆ ಯಿಂದ ಉಪಾಯವಾಗಿ ಉತ್ತರಿಸುತ್ತಾ ಮುನ್ನಡೆದಾಗ ಗೋಜಲುಗಳು ನಿವಾರಣೆಯಾಗುತ್ತಾ  ಪರಿಹಾರ ತಾನಾಗಿಯೇ ದೊರೆಯಿತ್ತದೆ. ದೈಹಿಕ ಆರೋಗ್ಯ ದೊಂದಿಗೆ  ಮನಸ್ಸಿನ ಆರೋಗ್ಯವನ್ನು ಸಮರ್ಥವಾಗಿ ಕಾಪಾಡಿಕೊಂಡಾಗ ಮಹಿಳೆ ಯಶಸ್ವಿಯಾಗಿ , ಗಟ್ಟಿಗಿತ್ತಿಯಾಗಿ  ಹೊರಹೊಮ್ಮುತ್ತಾಳೆ.
ಎಲ್ಲಾ ಹೆಣ್ಣು ಮಕ್ಕಳಿಗೂ ‘ ವಿಶ್ವ ಮಹಿಳಾ ದಿನ’ದ ಶುಭಾಶಯಗಳು.

# ಅಶ್ವಿನಿ ಮೂರ್ತಿ ಅಯ್ಯನಕಟ್ಟೆ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ಹವಾಮಾನ ವರದಿ | 22-04-2026 | ಎ.25ರಿಂದ ಮತ್ತೆ ಮಳೆ – ಯಾವ ಭಾಗಕ್ಕೆ ಏನು ಮುನ್ಸೂಚನೆ?

ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಏಪ್ರಿಲ್ 25ರಿಂದ…

20 hours ago

ಹವಾಮಾನ ವರದಿ | 21-04-2026 | ಕರಾವಳಿ-ಮಲೆನಾಡಿನಲ್ಲಿ ಮಳೆ ಜೋರಾಗಲಿದೆ, ಉತ್ತರ ಒಳನಾಡಿಗೂ ಗುಡುಗು ಮಳೆ..!

ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…

2 days ago

ವಿದ್ಯುತ್ ದರ ಶಾಕ್..! ಸಣ್ಣ ಕೈಗಾರಿಕೆಗಳಿಗೆ ಭಾರೀ ಹೊರೆ – ಉಮಾ ರೆಡ್ಡಿ ಎಚ್ಚರಿಕೆ

ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…

2 days ago

ಮುಳಬಾಗಿಲಿನಲ್ಲಿ ಹೋಟೆಲ್ ಮೇಲೆ ದಾಳಿ : 30 ಲೀಟರ್ ಹಳೆಯ ತುಪ್ಪ ಜಪ್ತಿ, ದಂಡ

ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…

2 days ago

ರೈತರಿಗೆ ಗುಡ್ ನ್ಯೂಸ್..! ತೊಗರಿ ಖರೀದಿ ಅವಧಿ ಮೇ 15ರವರೆಗೆ ವಿಸ್ತರಣೆ

ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…

2 days ago

ವಿಜಯಪುರದಲ್ಲಿ ತಾಪಮಾನ ಹೆಚ್ಚಳ : ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ AC ವಾರ್ಡ್ ಸಿದ್ಧ

ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…

2 days ago