Advertisement
ಮನಸಿನ ಮಾತು

ಮನೆ ಬೆಳಗುವ ಮಹಿಳೆಯ ದಿನವಿಂದು | ವಿಶ್ವ ಮಹಿಳಾ ದಿನದ ಶುಭಾಶಯ

Share

“ವಿಶ್ವ ಮಹಿಳಾ ದಿನ” ದ ಶುಭಾಶಯಗಳು

ಸಣ್ಣಪುಟ್ಟ ಸಂಗತಿಗಳು ದಿನನಿತ್ಯದ ಬದುಕಿನಲ್ಲಿ ಮಹತ್ವದ ಪಾತ್ರ ನಿರ್ವಹಿಸುತ್ತವೆ. ಅದೊಂದು ನಗುವಿರಬಹುದು,  ಬೆಳಗಿನ ನಮಸ್ಕಾರವಿರಬಹುದು, ಶುಭಾಶಯಗಳಿರ ಬಹುದು . ನಿನ್ನೆಯಿಂದಲೇ ಒಬ್ಬೊಬ್ಬ ರದೇ ಮೆಸೇಜ್ ಗಳನ್ನು  ಓದುವಾಗಲೇ ನಿರ್ಧರಿಸಿದ್ದೆ ಇವತ್ತು ಖುಷಿಯಿಂದಲೇ ಇಡೀ  ದಿನವನ್ನು  ಸವಿಯಬೇಕೆಂದು. ಅದರಲ್ಲೇನಿದೆ ನಿನ್ನೆಯಂತೆಯೇ ಅಲ್ಲವೇ ಇಂದು ಎಂದು ಪ್ರಶ್ನೆ ತಯಾರಿದೆಯಲ್ಲವೇ?  ಹೌದು ನಿನ್ನೆಯಂತೆಯೇ ಇಂದು. ತಾರೀಖು, ವಾರ  ಮಾತ್ರ ವ್ಯತ್ಯಾಸ. ಅದೇ ಮುಂಜಾವಿನ ಸೂರ್ಯೋದಯ,ಅದೇ ಹಕ್ಕಿಗಳ ಕಲರವ.  ಅದೇ ನಿತ್ಯಕರ್ಮಗಳು, ಅದೇ ಜನ, ಸೇಮ್ ಟು ಸೇಮ್. ಆದರೂ ಕೂಡ ನನಗಿಂದು ವಿಶೇಷ ದಿನವೇ. !

ಮಾರ್ಚ್ 8 ವಿಶ್ವ ಮಹಿಳಾ ದಿನ.  ಯಾಕೆ ಈ ಆಚರಣೆಗಿಷ್ಟು ಪ್ರಚಾರ?  ಮನಸು ಮೃದು, ಮಾತು ಕಠೋರ.  ತನ್ನೆಲ್ಲ ನಿರ್ಧಾರಗಳನ್ನು  ಭವಿಷ್ಯದ  ಕುರಿತು ಲಕ್ಷ್ಯವಿಟ್ಟು  ತೆಗೆದುಕೊಳ್ಳುವುದು ಮಹಿಳೆಯ  ವಿಶೇಷತೆ.

ಅಂದು ಅದೊಂದು ಪ್ರಮುಖ ಹೋರಾಟ ಒಬ್ಬ ಸಾಮಾನ್ಯ ಮಹಿಳೆಯನ್ನು ಅಸಾಮಾನ್ಯವಾಗಿಸಿತು.  ನ್ಯೂಯಾರ್ಕ್ ನ  ಕಾರ್ಮಿಕ ಮಹಿಳೆ ಕ್ಲಾರಾ ಜೆಟ್ ಕಿನ್  ಕೆಲಸಕ್ಕಾಗಿ , ಸಮಾನ ವೇತನಕ್ಕಾಗಿ, ಹೆರಿಗೆ ಸೌಲಭ್ಯ ಕ್ಕಾಗಿ ತಿಂಗಳಾನುಗಟ್ಟಲೆ ಹೋರಾಟ ಮಾಡಿ   ಗೆಲುವು ಸಾಧಿಸಿದ ದಿನ.  ಆದ್ದರಿಂದ ಈ ದಿನವನ್ನು ಸಾಧನೆಯ ದಿನ, ಮಹಿಳಾ ಯಶಸ್ಸಿನ ದಿನವೆಂದು  ಸಂಭ್ರಮಿಸುತ್ತೇವೆ.

1975 ರಲ್ಲಿ ವಿಶ್ವಸಂಸ್ಥೆಯು ಈ ದಿನವನ್ನು ‘ ವಿಶ್ವ ಮಹಿಳಾ ದಿನ’ವೆಂದು ಘೋಷಿಸಿತು. ದೊಡ್ಡ ದೊಡ್ಡ ಪ್ರಶಸ್ತಿಗಳು ಸಿಕ್ಕಿದರಷ್ಟೇ ಯಶಸ್ವಿ ಮಹಿಳೆ  ಎಂಬ ಮಾತು ಯಾಕೋ ಬೇಸರವುಂಟು ಮಾಡುತ್ತದೆ.  ಬದುಕಿನ ಪ್ರತಿಯೊಂದು ನಡೆಯಲ್ಲೂ ಎದುರಾಗುವ ಸಮಸ್ಯೆಗಳು ನಿರಂತರವಾಗಿ ಪ್ರಶ್ನೆ ಪತ್ರಿಕೆಗಳಾಗಿ  ಕಾಡುತ್ತವೆ. ತಾಳ್ಮೆ ಯಿಂದ ಉಪಾಯವಾಗಿ ಉತ್ತರಿಸುತ್ತಾ ಮುನ್ನಡೆದಾಗ ಗೋಜಲುಗಳು ನಿವಾರಣೆಯಾಗುತ್ತಾ  ಪರಿಹಾರ ತಾನಾಗಿಯೇ ದೊರೆಯಿತ್ತದೆ. ದೈಹಿಕ ಆರೋಗ್ಯ ದೊಂದಿಗೆ  ಮನಸ್ಸಿನ ಆರೋಗ್ಯವನ್ನು ಸಮರ್ಥವಾಗಿ ಕಾಪಾಡಿಕೊಂಡಾಗ ಮಹಿಳೆ ಯಶಸ್ವಿಯಾಗಿ , ಗಟ್ಟಿಗಿತ್ತಿಯಾಗಿ  ಹೊರಹೊಮ್ಮುತ್ತಾಳೆ.
ಎಲ್ಲಾ ಹೆಣ್ಣು ಮಕ್ಕಳಿಗೂ ‘ ವಿಶ್ವ ಮಹಿಳಾ ದಿನ’ದ ಶುಭಾಶಯಗಳು.

# ಅಶ್ವಿನಿ ಮೂರ್ತಿ ಅಯ್ಯನಕಟ್ಟೆ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ಹವಾಮಾನ ವರದಿ | 03-06-2026 | ಕರಾವಳಿಯಲ್ಲಿ ಮುಂಗಾರು ಚುರುಕು – ಜೂನ್ 8 ರಿಂದ ರಾಜ್ಯಾದ್ಯಂತ ಮಳೆಯ ಅಬ್ಬರ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…

13 hours ago

ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶ ಸಾಧ್ಯತೆ – ಕರಾವಳಿ, ಉತ್ತರ ಒಳನಾಡಿನಲ್ಲಿ ಭಾರೀ ಮಳೆ ಎಚ್ಚರಿಕೆ

ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…

20 hours ago

ಮಿಜೋರಾಂನಲ್ಲಿ ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ | ₹24 ಕೋಟಿ ಮೌಲ್ಯದ ಅಡಿಕೆ ವಶ, 468 ಪ್ರಕರಣ ದಾಖಲು, 292 ಮಂದಿ ಬಂಧನ

ಮ್ಯಾನ್ಮಾರ್‌ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…

20 hours ago

ಮಳೆ ಆರಂಭವಾಗುತ್ತಿದ್ದಂತೆಯೇ ಗಿಡಗಳ ನಾಟಿಗೆ ಸಿದ್ಧತೆ – ಅಡಿಕೆ ಗಿಡಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ…!

ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…

1 day ago

ಕೇಂದ್ರ ಸರ್ಕಾರದ ಸೌಲಭ್ಯಗಳಿಗೆ ‘ಕೇಂದ್ರ ರೈತ ಐಡಿ’ ಕಡ್ಡಾಯ – ಮಂಗಳೂರು ತಾಲೂಕಿನ 14,520 ರೈತರು ಇನ್ನೂ ನೋಂದಣಿ ಬಾಕಿ

ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…

1 day ago

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಧಾರಣೆ ಏರಿಕೆ | ಮತ್ತೆ ಚೇತರಿಕೆಯ ಸಂಕೇತ ನೀಡಿದ ಅಡಿಕೆ ಧಾರಣೆ

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…

2 days ago