Advertisement
ಮನಸಿನ ಮಾತು

ಮನೆ ಬೆಳಗುವ ಮಹಿಳೆಯ ದಿನವಿಂದು | ವಿಶ್ವ ಮಹಿಳಾ ದಿನದ ಶುಭಾಶಯ

Share

“ವಿಶ್ವ ಮಹಿಳಾ ದಿನ” ದ ಶುಭಾಶಯಗಳು

ಸಣ್ಣಪುಟ್ಟ ಸಂಗತಿಗಳು ದಿನನಿತ್ಯದ ಬದುಕಿನಲ್ಲಿ ಮಹತ್ವದ ಪಾತ್ರ ನಿರ್ವಹಿಸುತ್ತವೆ. ಅದೊಂದು ನಗುವಿರಬಹುದು,  ಬೆಳಗಿನ ನಮಸ್ಕಾರವಿರಬಹುದು, ಶುಭಾಶಯಗಳಿರ ಬಹುದು . ನಿನ್ನೆಯಿಂದಲೇ ಒಬ್ಬೊಬ್ಬ ರದೇ ಮೆಸೇಜ್ ಗಳನ್ನು  ಓದುವಾಗಲೇ ನಿರ್ಧರಿಸಿದ್ದೆ ಇವತ್ತು ಖುಷಿಯಿಂದಲೇ ಇಡೀ  ದಿನವನ್ನು  ಸವಿಯಬೇಕೆಂದು. ಅದರಲ್ಲೇನಿದೆ ನಿನ್ನೆಯಂತೆಯೇ ಅಲ್ಲವೇ ಇಂದು ಎಂದು ಪ್ರಶ್ನೆ ತಯಾರಿದೆಯಲ್ಲವೇ?  ಹೌದು ನಿನ್ನೆಯಂತೆಯೇ ಇಂದು. ತಾರೀಖು, ವಾರ  ಮಾತ್ರ ವ್ಯತ್ಯಾಸ. ಅದೇ ಮುಂಜಾವಿನ ಸೂರ್ಯೋದಯ,ಅದೇ ಹಕ್ಕಿಗಳ ಕಲರವ.  ಅದೇ ನಿತ್ಯಕರ್ಮಗಳು, ಅದೇ ಜನ, ಸೇಮ್ ಟು ಸೇಮ್. ಆದರೂ ಕೂಡ ನನಗಿಂದು ವಿಶೇಷ ದಿನವೇ. !

ಮಾರ್ಚ್ 8 ವಿಶ್ವ ಮಹಿಳಾ ದಿನ.  ಯಾಕೆ ಈ ಆಚರಣೆಗಿಷ್ಟು ಪ್ರಚಾರ?  ಮನಸು ಮೃದು, ಮಾತು ಕಠೋರ.  ತನ್ನೆಲ್ಲ ನಿರ್ಧಾರಗಳನ್ನು  ಭವಿಷ್ಯದ  ಕುರಿತು ಲಕ್ಷ್ಯವಿಟ್ಟು  ತೆಗೆದುಕೊಳ್ಳುವುದು ಮಹಿಳೆಯ  ವಿಶೇಷತೆ.

ಅಂದು ಅದೊಂದು ಪ್ರಮುಖ ಹೋರಾಟ ಒಬ್ಬ ಸಾಮಾನ್ಯ ಮಹಿಳೆಯನ್ನು ಅಸಾಮಾನ್ಯವಾಗಿಸಿತು.  ನ್ಯೂಯಾರ್ಕ್ ನ  ಕಾರ್ಮಿಕ ಮಹಿಳೆ ಕ್ಲಾರಾ ಜೆಟ್ ಕಿನ್  ಕೆಲಸಕ್ಕಾಗಿ , ಸಮಾನ ವೇತನಕ್ಕಾಗಿ, ಹೆರಿಗೆ ಸೌಲಭ್ಯ ಕ್ಕಾಗಿ ತಿಂಗಳಾನುಗಟ್ಟಲೆ ಹೋರಾಟ ಮಾಡಿ   ಗೆಲುವು ಸಾಧಿಸಿದ ದಿನ.  ಆದ್ದರಿಂದ ಈ ದಿನವನ್ನು ಸಾಧನೆಯ ದಿನ, ಮಹಿಳಾ ಯಶಸ್ಸಿನ ದಿನವೆಂದು  ಸಂಭ್ರಮಿಸುತ್ತೇವೆ.

1975 ರಲ್ಲಿ ವಿಶ್ವಸಂಸ್ಥೆಯು ಈ ದಿನವನ್ನು ‘ ವಿಶ್ವ ಮಹಿಳಾ ದಿನ’ವೆಂದು ಘೋಷಿಸಿತು. ದೊಡ್ಡ ದೊಡ್ಡ ಪ್ರಶಸ್ತಿಗಳು ಸಿಕ್ಕಿದರಷ್ಟೇ ಯಶಸ್ವಿ ಮಹಿಳೆ  ಎಂಬ ಮಾತು ಯಾಕೋ ಬೇಸರವುಂಟು ಮಾಡುತ್ತದೆ.  ಬದುಕಿನ ಪ್ರತಿಯೊಂದು ನಡೆಯಲ್ಲೂ ಎದುರಾಗುವ ಸಮಸ್ಯೆಗಳು ನಿರಂತರವಾಗಿ ಪ್ರಶ್ನೆ ಪತ್ರಿಕೆಗಳಾಗಿ  ಕಾಡುತ್ತವೆ. ತಾಳ್ಮೆ ಯಿಂದ ಉಪಾಯವಾಗಿ ಉತ್ತರಿಸುತ್ತಾ ಮುನ್ನಡೆದಾಗ ಗೋಜಲುಗಳು ನಿವಾರಣೆಯಾಗುತ್ತಾ  ಪರಿಹಾರ ತಾನಾಗಿಯೇ ದೊರೆಯಿತ್ತದೆ. ದೈಹಿಕ ಆರೋಗ್ಯ ದೊಂದಿಗೆ  ಮನಸ್ಸಿನ ಆರೋಗ್ಯವನ್ನು ಸಮರ್ಥವಾಗಿ ಕಾಪಾಡಿಕೊಂಡಾಗ ಮಹಿಳೆ ಯಶಸ್ವಿಯಾಗಿ , ಗಟ್ಟಿಗಿತ್ತಿಯಾಗಿ  ಹೊರಹೊಮ್ಮುತ್ತಾಳೆ.
ಎಲ್ಲಾ ಹೆಣ್ಣು ಮಕ್ಕಳಿಗೂ ‘ ವಿಶ್ವ ಮಹಿಳಾ ದಿನ’ದ ಶುಭಾಶಯಗಳು.

# ಅಶ್ವಿನಿ ಮೂರ್ತಿ ಅಯ್ಯನಕಟ್ಟೆ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ಮುಂದುವರಿದ ಮಳೆ ಅಬ್ಬರ : ಆಗಸ್ಟ್‌ 4ರಂದು ದ ಕ -ಉಡುಪಿ-ಕಾಸರಗೋಡು ಜಿಲ್ಲೆಯ ಕೆಲವು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್‌ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…

8 hours ago

ಯಡಕುಮೇರಿ ಹಳಿ ದುರಸ್ತಿ ಪೂರ್ಣ : ಮಂಗಳೂರು–ಬೆಂಗಳೂರು ರೈಲು ರೈಲು ಸಂಚಾರ ಪುನರಾರಂಭ

ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…

8 hours ago

ಹಗಲು ನಿದ್ರೆ ಅನೇಕ ರೋಗಗಳಿಗೆ ಆಹ್ವಾನ ; ಔಷಧಿಗಿಂತ ಉತ್ತಮ ಜೀವನಶೈಲಿಯೇ ಪರಿಹಾರ: ರಾಘವೇಶ್ವರ ಶ್ರೀ

ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…

10 hours ago

ಕೇರಳದಲ್ಲಿ ಭಾರಿ ಮಳೆ ಆರ್ಭಟ : ಮಲಪ್ಪುರಂನಲ್ಲಿ ಸರಣಿ ಭೂಕುಸಿತ , ಸಂಚಾರ ಸಂಪೂರ್ಣ ಸ್ಥಗಿತ

ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…

13 hours ago