Advertisement
ಮನಸಿನ ಮಾತು

ಮನೆ ಬೆಳಗುವ ಮಹಿಳೆಯ ದಿನವಿಂದು | ವಿಶ್ವ ಮಹಿಳಾ ದಿನದ ಶುಭಾಶಯ

Share

“ವಿಶ್ವ ಮಹಿಳಾ ದಿನ” ದ ಶುಭಾಶಯಗಳು

ಸಣ್ಣಪುಟ್ಟ ಸಂಗತಿಗಳು ದಿನನಿತ್ಯದ ಬದುಕಿನಲ್ಲಿ ಮಹತ್ವದ ಪಾತ್ರ ನಿರ್ವಹಿಸುತ್ತವೆ. ಅದೊಂದು ನಗುವಿರಬಹುದು,  ಬೆಳಗಿನ ನಮಸ್ಕಾರವಿರಬಹುದು, ಶುಭಾಶಯಗಳಿರ ಬಹುದು . ನಿನ್ನೆಯಿಂದಲೇ ಒಬ್ಬೊಬ್ಬ ರದೇ ಮೆಸೇಜ್ ಗಳನ್ನು  ಓದುವಾಗಲೇ ನಿರ್ಧರಿಸಿದ್ದೆ ಇವತ್ತು ಖುಷಿಯಿಂದಲೇ ಇಡೀ  ದಿನವನ್ನು  ಸವಿಯಬೇಕೆಂದು. ಅದರಲ್ಲೇನಿದೆ ನಿನ್ನೆಯಂತೆಯೇ ಅಲ್ಲವೇ ಇಂದು ಎಂದು ಪ್ರಶ್ನೆ ತಯಾರಿದೆಯಲ್ಲವೇ?  ಹೌದು ನಿನ್ನೆಯಂತೆಯೇ ಇಂದು. ತಾರೀಖು, ವಾರ  ಮಾತ್ರ ವ್ಯತ್ಯಾಸ. ಅದೇ ಮುಂಜಾವಿನ ಸೂರ್ಯೋದಯ,ಅದೇ ಹಕ್ಕಿಗಳ ಕಲರವ.  ಅದೇ ನಿತ್ಯಕರ್ಮಗಳು, ಅದೇ ಜನ, ಸೇಮ್ ಟು ಸೇಮ್. ಆದರೂ ಕೂಡ ನನಗಿಂದು ವಿಶೇಷ ದಿನವೇ. !

ಮಾರ್ಚ್ 8 ವಿಶ್ವ ಮಹಿಳಾ ದಿನ.  ಯಾಕೆ ಈ ಆಚರಣೆಗಿಷ್ಟು ಪ್ರಚಾರ?  ಮನಸು ಮೃದು, ಮಾತು ಕಠೋರ.  ತನ್ನೆಲ್ಲ ನಿರ್ಧಾರಗಳನ್ನು  ಭವಿಷ್ಯದ  ಕುರಿತು ಲಕ್ಷ್ಯವಿಟ್ಟು  ತೆಗೆದುಕೊಳ್ಳುವುದು ಮಹಿಳೆಯ  ವಿಶೇಷತೆ.

ಅಂದು ಅದೊಂದು ಪ್ರಮುಖ ಹೋರಾಟ ಒಬ್ಬ ಸಾಮಾನ್ಯ ಮಹಿಳೆಯನ್ನು ಅಸಾಮಾನ್ಯವಾಗಿಸಿತು.  ನ್ಯೂಯಾರ್ಕ್ ನ  ಕಾರ್ಮಿಕ ಮಹಿಳೆ ಕ್ಲಾರಾ ಜೆಟ್ ಕಿನ್  ಕೆಲಸಕ್ಕಾಗಿ , ಸಮಾನ ವೇತನಕ್ಕಾಗಿ, ಹೆರಿಗೆ ಸೌಲಭ್ಯ ಕ್ಕಾಗಿ ತಿಂಗಳಾನುಗಟ್ಟಲೆ ಹೋರಾಟ ಮಾಡಿ   ಗೆಲುವು ಸಾಧಿಸಿದ ದಿನ.  ಆದ್ದರಿಂದ ಈ ದಿನವನ್ನು ಸಾಧನೆಯ ದಿನ, ಮಹಿಳಾ ಯಶಸ್ಸಿನ ದಿನವೆಂದು  ಸಂಭ್ರಮಿಸುತ್ತೇವೆ.

1975 ರಲ್ಲಿ ವಿಶ್ವಸಂಸ್ಥೆಯು ಈ ದಿನವನ್ನು ‘ ವಿಶ್ವ ಮಹಿಳಾ ದಿನ’ವೆಂದು ಘೋಷಿಸಿತು. ದೊಡ್ಡ ದೊಡ್ಡ ಪ್ರಶಸ್ತಿಗಳು ಸಿಕ್ಕಿದರಷ್ಟೇ ಯಶಸ್ವಿ ಮಹಿಳೆ  ಎಂಬ ಮಾತು ಯಾಕೋ ಬೇಸರವುಂಟು ಮಾಡುತ್ತದೆ.  ಬದುಕಿನ ಪ್ರತಿಯೊಂದು ನಡೆಯಲ್ಲೂ ಎದುರಾಗುವ ಸಮಸ್ಯೆಗಳು ನಿರಂತರವಾಗಿ ಪ್ರಶ್ನೆ ಪತ್ರಿಕೆಗಳಾಗಿ  ಕಾಡುತ್ತವೆ. ತಾಳ್ಮೆ ಯಿಂದ ಉಪಾಯವಾಗಿ ಉತ್ತರಿಸುತ್ತಾ ಮುನ್ನಡೆದಾಗ ಗೋಜಲುಗಳು ನಿವಾರಣೆಯಾಗುತ್ತಾ  ಪರಿಹಾರ ತಾನಾಗಿಯೇ ದೊರೆಯಿತ್ತದೆ. ದೈಹಿಕ ಆರೋಗ್ಯ ದೊಂದಿಗೆ  ಮನಸ್ಸಿನ ಆರೋಗ್ಯವನ್ನು ಸಮರ್ಥವಾಗಿ ಕಾಪಾಡಿಕೊಂಡಾಗ ಮಹಿಳೆ ಯಶಸ್ವಿಯಾಗಿ , ಗಟ್ಟಿಗಿತ್ತಿಯಾಗಿ  ಹೊರಹೊಮ್ಮುತ್ತಾಳೆ.
ಎಲ್ಲಾ ಹೆಣ್ಣು ಮಕ್ಕಳಿಗೂ ‘ ವಿಶ್ವ ಮಹಿಳಾ ದಿನ’ದ ಶುಭಾಶಯಗಳು.

# ಅಶ್ವಿನಿ ಮೂರ್ತಿ ಅಯ್ಯನಕಟ್ಟೆ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ಶಿರಾಡಿ ಘಾಟ್‌ನಲ್ಲಿ ಸೋಮವಾರ ಟ್ರಾಫಿಕ್‌ ಸಂಕಷ್ಟದ ಸಾಧ್ಯತೆ – ಮುಂಜಾಗ್ರತಾ ಕ್ರಮ ಅಗತ್ಯ

ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್‌ನಲ್ಲಿ…

14 minutes ago

ಹವಾಮಾನ ವರದಿ |13-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಹಂತ ಹಂತವಾಗಿ ಚುರುಕಾಗಬಹುದೇ?

ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…

9 hours ago

ರೈತರ ಆದಾಯ ಹೆಚ್ಚಿಸಲು ಬಹುಬೆಳೆ, ಪಶುಸಂಗೋಪನೆ, ಮೀನುಗಾರಿಕೆಗೆ ಒತ್ತು

ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…

13 hours ago

ಹವಾಮಾನ ವರದಿ | 12.09.2026 | ಸೆ.15ರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು? ಕರಾವಳಿ–ಮಲೆನಾಡಿನಲ್ಲಿ ಸದ್ಯ ಬಿಸಿಲಿನ ವಾತಾವರಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…

1 day ago

ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ

ಇಂಪೀರಿಯಲ್ ಕಾಲೇಜ್ ಲಂಡನ್‌ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…

2 days ago

ಅಡಿಕೆಗೆ ಉತ್ತಮ ಬೆಲೆ , ಆದರೂ ಬೆಳೆಗಾರರ ಚಿಂತೆ ಮುಂದುವರಿದಿದೆ – ಕಾರಣವೇನು?

ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…

2 days ago