Advertisement
MIRROR FOCUS

#WorldEnvironmentDay #ವಿಶ್ವಪರಿಸರದಿನ | ಅನುದಿನವೂ ಹಸಿರಾಗಿರಲಿ ಜಗವು

Share
ವಿಶ್ವ ಪರಿಸರ ದಿನ.
1972 ರಿಂದ ಆರಂಭವಾಗಿ ವಿಶ್ವ ಪರಿಸರ ದಿನವನ್ನು ಪ್ರತಿ ವರ್ಷ ಜೂ.5 ರಂದು  ವಿಶ್ವದೆಲ್ಲೆಡೆ ಆಚರಿಸಲಾಗುತ್ತದೆ .  ಪರಿಸರದ ಬಗ್ಗೆ ಸಮಾಜಗಳಲ್ಲಿ ಅರಿವು ಮೂಡಿಸುತ್ತದೆ. ಈ ಆಚರಣೆ ಪರಿಸರದ ಕುರಿತಾಗಿ ವಿಶ್ವ ಜಾಗೃತಿ ಮೂಡಿಸುವ ಕಾರ್ಯವಾಗಿದೆ. ಈಗ ಜಗತ್ತಿನಾದ್ಯಂತ ವಿಶ್ವ ಪರಿಸರ ದಿನವನ್ನು ಆಚರಿಸಲಾಗುತ್ತಿದೆ. ಪರಿಸರವನ್ನು ಉಳಿಸುವುದು ಆ ಮೂಲಕ ಮುಂದಿನ ಪೀಳಿಗೆಗೆ ಉತ್ತಮ ವಾತಾವರಣವನ್ನು ನಿರ್ಮಾಣ ಮಾಡುವುದು ಇದರ ಉದ್ದೇಶ.

ಈ ಬಾರಿಯ ವಿಶ್ವ ಪರಿಸರ ದಿನಕ್ಕೆ ವಿಶ್ವಸಂಸ್ಥೆಯು Celebrate Biodiversity ಎಂಬ ಘೋಷ ವಾಕ್ಯವನ್ನು  ನೀಡಿದೆ. ಕಳೆದ ಬಾರಿ beat air pollution  ಎಂಬ ಘೋಷ ವಾಕ್ಯವನ್ನು ನೀಡಿತ್ತು.

Advertisement

ಈ ಬಾರಿ  ವಿಶ್ವ ಪರಿಸರ ದಿನ 2020 ರ  ಪ್ರಮುಖ ವಿಷಯವೆಂದರೆ “ಜೀವ ವೈವಿಧ್ಯತೆಯನ್ನು ಆಚರಿಸಿ”.  ಜಗತ್ತಿನಲ್ಲಿ ಸುಮಾರು 1 ಮಿಲಿಯನ್ ಜೀವ ಪ್ರಭೇದಗಳು ಅಳಿವಿನಂಚಿನಲ್ಲಿದೆ. ಹೀಗಾಗಿ ಈಗಲೇ ಜೀವವೈವಿಧ್ಯತೆಯ ಮೇಲೆ ಕೇಂದ್ರೀಕರಿಸಲು ಹೆಚ್ಚು ಮಹತ್ವದ ಸಮಯವಾಗಿದೆ. ಇಂತಹ ಅವಕಾಶ ಹಿಂದೆ ಇರಲಿಲ್ಲ. 


ಈ ದಿನ ವಿಶ್ವ ಪರಿಸರ ದಿನ. ಈ ಹೊತ್ತಿನಲ್ಲಿ ಒಂದು ಹೃದಯ ಚೂರಾಗುವಂತಹ ಸುದ್ದಿ ಬಹಿರಂಗವಾಗಿದೆ.‌
ಕೇರಳದ ಮಲಪ್ಪುರಂನಲ್ಲಿ ಅನನಾಸು ಹಣ್ಣಿನೊಳಗೆ ಸುಡುಮದ್ದು ಇಟ್ಟು ತಿನ್ನಿಸಿದ ಪರಿಣಾಮ ಗರ್ಭಿಣಿ ಆನೆಯೊಂದು ಸಾವನ್ನಪ್ಪಿದೆ…ಇದನ್ನು ನೋಡಿದ ಬಳಿಕ ನಮಗೆ ಕೋವಿಡ್19 ಎಂಬುವುದು ಅತ್ಯಂತ ಚಿಕ್ಕ ಶಿಕ್ಷೆಯಾಗಿಯೇ ತೋರುತ್ತದೆ..
ವಿಶ್ವ ಪರಿಸರ ದಿನದ ಆಚರಣೆಯ ಸಂದರ್ಭದಲ್ಲಿ ಈ ಸುದ್ದಿ ಮನಸು ಕೆಡಿಸುವಂತಿದೆ. ಪ್ರಕೃತಿ ಎಲ್ಲವನ್ನೂ  ಮನುಷ್ಯ ನಿಗೆ ಅಗತ್ಯ ಕ್ಕಿಂತ ‌ಹೆಚ್ಚೇ ಕೊಟ್ಟಾಗಿದೆ. ಮಣ್ಣು, ನೀರು, ಗಾಳಿ ಎಲ್ಲವನ್ನೂ ಧಾರಾಳವಾಗಿ ಬಳಸುವ ಸ್ವಾತಂತ್ರ್ಯ ಮನುಜನಿಗಿದೆ. ಯಾವತ್ತೂ  ಅದನ್ನು ಬಳಸ ಬೇಡ, ಇದನ್ನು ಮುಟ್ಟ ಬೇಡವೆಂದು ಭೂಮಿ ತಾಯಿ ಎಲ್ಲೂ ತಡೆದಿಲ್ಲ. ಅಗತ್ಯಕ್ಕಿಂತ ಹೆಚ್ಚೇ ಬಳಸಿ ಹಾಳು ಮಾಡುತ್ತಿರುವುದು ನಾವೇ.   ಪರಿಸರದ ಮಕ್ಕಳಾದ ನಾವು , ಪ್ರಾಣಿ , ಪಕ್ಷಿಗಳೆಲ್ಲರೂ ಒಂದಾಗಿ ಬಾಳುವುದನ್ನು ಬಿಟ್ಟು ನಮ್ಮ ಪ್ರಾಬಲ್ಯ ವನ್ನು ಮೆರೆಯುತ್ತಿದ್ದೇವೆ. ಈ ಮನಸ್ಥಿತಿಯಿಂದ ಹೊರಬರಬೇಕಾದ ಸಮಯ ಬಂದಿದೆ. ಮತ್ತೀಗ  ನಾವೇ ಎಚ್ವೆತ್ತು ಕೊಳ್ಳುವ ಸಂದರ್ಭ ಒದಗಿ ಬಂದಿದೆ.
ಒಂದಾದ ಮೇಲೆ ಒಂದು ಅಪಾಯಗಳು  ಬಂದೆರಗುತ್ತಿವೆ. ಕೊರೊನಾದೊಂದಿಗೆ  ಒಂದಾದ ಮೇಲೊಂದರಂತೆ ‌ ಬರುತ್ತಿರುವ ಪ್ರಾಕೃತಿಕ ವಿಕೋಪಗಳು  ದೃತಿಕೆಡಿಸುತ್ತಿದೆ. ವಿಶ್ವ ದೆಲ್ಲೆಡೆ ಕೊರೊನಾ ಬಹು ದೊಡ್ಡ ಪಾಠ ಕಲಿಸಿದೆ. ಲಾಕ್ ಡೌನ್ ಜನರ ವಿಪರೀತ ಗಳಿಗೆ ಕೊಂಚ ಬ್ರೇಕ್ ಹಾಕಿದೆ. ಅನಾವಶ್ಯಕ ತಿರುಗಾಟಗಳನ್ನು, ಖರ್ಚು ಗಳನ್ನು ನಿಯಂತ್ರಿಸುವ ಕಾರ್ಯ ಕೊರೊನಾ ಮಾಡಿದೆ. ದೇಶಗಳಿಗೆ ಆರ್ಥಿಕ ವಾಗಿ ಬಹು ದೊಡ್ಡ ಹೊಡೆತ ವಾದರು ಪ್ರಕೃತಿ ಗೆ ಒಳ್ಳೆಯದೇ ಆಗಿದೆ. ಎಷ್ಟೋ ನಗರಗಳು, ನದಿಗಳು, ಕಲುಷಿತ ಮುಕ್ತ ವಾಗಿವೆ.  ಪ್ರಾಣಿ ಪಕ್ಷಿಗಳು ಮುಕ್ತವಾಗಿ ಓಡಾಡುವ ದೃಶ್ಯ ಕ್ಯಾಮರಾ ಕಣ್ಣಲ್ಲಿ ಸೆರೆಯಾಗಿದೆ.     ವರ್ಷಕ್ಕೊಮ್ಮೆ 2 ತಿಂಗಳು ಲಾಕ್ ಡೌನ್ ಇದ್ದರೆ ಚೆಂದವೆಂದು ಜನರು ಅಭಿಪ್ರಾಯ ಪಡುವಂತಾಗಿದೆ.
ಈ ಸಂಧಿಕಾಲದಲ್ಲಿ  ಬಂದಿರುವ ವಿಶ್ವ ಪರಿಸರ ದಿನ ಆಚರಣೆ ಬಂದಿದೆ. ಜೂನ್ 5 ರಂದು ವಿಶ್ವದೆಲ್ಲೆಡೆ  ವಿಶ್ವ ಪರಿಸರ ದಿನಾಚರಣೆ ಆಚರಿಸುತ್ತೇವೆ.  ಪ್ರಕೃತಿಗಾಗಿ ಕಿಂಚಿತ್ತು ಕೊಡುಗೆ ಕೊಡುವ ಅವಕಾಶ.  ಪ್ರತಿವರ್ಷ ಒಂದು ಧ್ಯೇಯ, ಉದ್ದೇಶ ಗಳೊಂದಿಗೆ ಆಚರಿಸಲಾಗುತ್ತದೆ.  ‘ ಜೀವ ವೈವಿಧ್ಯ ದ ಸಂರಕ್ಷಣೆ ‘ ಎಂಬ ಧ್ಯೇಯ ವಾಕ್ಯ ವಾಗಿದೆ.     ‘ ಹಸಿರು ಉಳಿದರಷ್ಟೇ ಉಸಿರು, ಮನೆಗೊಂದು ಗಿಡ ನೆಡಿ’ ಆಶಯವನ್ನು  ಪಾಲಿಸ ಬೇಕಾಗಿದೆ.. ನಾವು ಇಂದು ಪೂರ್ಣ ಮನಸಿನಿಂದ ಸಂಕಲ್ಪ ಮಾಡೋಣ . ಮನೆಗೊಂದು ಗಿಡ ನೆಡೋಣ.
# ಅಶ್ವಿನಿ ಮೂರ್ತಿ ಅಯ್ಯನಕಟ್ಟೆ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ರಾಜ್ಯದಲ್ಲಿ ಬಿಸಿಲು ಬಿಸಿ ತೀವ್ರ : ಮೈಸೂರಿನಲ್ಲಿ ಸನ್ ಸ್ಟ್ರೋಕ್ ವಾರ್ಡ್ ಆರಂಭಿಸಿದ ಆಸ್ಪತ್ರೆ

ತಾಪಮಾನ ಏರಿಕೆಯಿಂದ ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ 30 ಹಾಸಿಗೆಗಳ ಸನ್ ಸ್ಟ್ರೋಕ್ ವಾರ್ಡ್…

59 minutes ago

ರೈತರು ಇಂಧನದಾತರಾಗಬೇಕು – ಭೂಮಿ ಉಳಿಸಿ ಸಮ್ಮೇಳನದಲ್ಲಿ ಸಂದೇಶ

ಭೂಮಿ ಉಳಿಸಿ ಸಮ್ಮೇಳನದಲ್ಲಿ ನಿತಿನ್ ಗಡ್ಕರಿ, ರೈತರು ಇಂಧನ ಉತ್ಪಾದನೆಗೆ ಕೈಜೋಡಿಸಿದರೆ ಮಾಲಿನ್ಯ…

1 hour ago

ರೈತರ ಆದಾಯ ಹೆಚ್ಚಿಸಲು ಸಮಗ್ರ ಕೃಷಿ ಮಾದರಿ ಅಗತ್ಯ

ರೈತರಿಗೆ ಸರಳ ಹಣಕಾಸು ವ್ಯವಸ್ಥೆ ಅಗತ್ಯವಿದ್ದು, ಸಮಗ್ರ ಕೃಷಿ ಮಾದರಿಯಿಂದ ಆದಾಯ ಹೆಚ್ಚಿಸಬಹುದು…

1 hour ago

ಹವಾಮಾನ ವರದಿ | 23-04-2026 | ಏಪ್ರಿಲ್ 25 ರಿಂದ ಮಳೆಯ ಸಾಧ್ಯತೆ ಹೆಚ್ಚು

ರಾಜ್ಯದಲ್ಲಿ ಬಿಸಿಲು ಮುಂದುವರಿದರೂ, ಏಪ್ರಿಲ್ 25ರಿಂದ ಮಳೆಯ ಚಟುವಟಿಕೆ ಹೆಚ್ಚಾಗುವ ಸೂಚನೆ ಇದೆ.…

2 hours ago

ಹವಾಮಾನ ವರದಿ | 22-04-2026 | ಎ.25ರಿಂದ ಮತ್ತೆ ಮಳೆ – ಯಾವ ಭಾಗಕ್ಕೆ ಏನು ಮುನ್ಸೂಚನೆ?

ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಏಪ್ರಿಲ್ 25ರಿಂದ…

1 day ago

ಹವಾಮಾನ ವರದಿ | 21-04-2026 | ಕರಾವಳಿ-ಮಲೆನಾಡಿನಲ್ಲಿ ಮಳೆ ಜೋರಾಗಲಿದೆ, ಉತ್ತರ ಒಳನಾಡಿಗೂ ಗುಡುಗು ಮಳೆ..!

ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…

2 days ago