Advertisement
ಸುದ್ದಿಗಳು

ಯಾದಗಿರಿ ನೀರಿನ ಸಂಕಷ್ಟಕ್ಕೆ ತಾತ್ಕಾಲಿಕ ಪರಿಹಾರ – 45 ಗ್ರಾಮಗಳಿಗೆ ಬಾಡಿಗೆ ಕೊಳವೆಬಾವಿ ಮೂಲಕ ನೀರು ಪೂರೈಕೆ

Share

ಯಾದಗಿರಿ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿರುವ ಹಿನ್ನೆಲೆ 45 ಸಮಸ್ಯಾತ್ಮಕ ಗ್ರಾಮಗಳನ್ನು ಗುರುತಿಸಿ, 54 ಬಾಡಿಗೆ ಕೊಳವೆಬಾವಿಗಳ ಮೂಲಕ ನೀರು ಪೂರೈಕೆ ಮಾಡಲಾಗುತ್ತಿದೆ ಎಂದು ಜಿಲ್ಲಾ ಪಂಚಾಯಿತಿ ಸಿಇಒ ಲವೀಶ್ ಒರಡಿಯಾ ತಿಳಿಸಿದ್ದಾರೆ.

ಜಿಲ್ಲೆಯ 25 ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆ ಕಂಡುಬಂದಿದೆ. ಯಾದಗಿರಿ ತಾಲ್ಲೂಕು ವ್ಯಾಪ್ತಿಯ 21 ಗ್ರಾಮಗಳಿಗೆ 24 ಕೊಳವೆಬಾವಿಗಳ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ. ಗುರುಮಠಕಲ್ ತಾಲ್ಲೂಕು ವ್ಯಾಪ್ತಿಯ 12 ಗ್ರಾಮಗಳಲ್ಲಿ 15 ಕೊಳವೆಬಾವಿ, ವಡಗೇರಿ ತಾಲ್ಲೂಕು ವ್ಯಾಪ್ತಿಯ 7 ಗ್ರಾಮಗಳಲ್ಲಿ 10 ಕೊಳವೆಬಾವಿ ಹಾಗೂ ಸುರಪುರ ತಾಲ್ಲೂಕು ವ್ಯಾಪ್ತಿಯ 5 ಗ್ರಾಮಗಳಲ್ಲಿ 5 ಕೊಳವೆಬಾವಿಗಳ ಮೂಲಕ ನೀರಿನ ಸಮಸ್ಯೆ ನಿವಾರಣೆಗೆ ಕ್ರಮ ಕೈಗೊಳ್ಳಲಾಗಿದೆ.

ಜಿಲ್ಲೆಯಲ್ಲಿ ಒಟ್ಟು 7,349 ನೀರಿನ ಮಾದರಿಗಳನ್ನು ಪರೀಕ್ಷಿಸಲಾಗಿದ್ದು, 7,203 ಮಾದರಿಗಳು ಕುಡಿಯಲು ಯೋಗ್ಯವಾಗಿವೆ. 146 ಮಾದರಿಗಳು ಅಯೋಗ್ಯವೆಂದು ಪತ್ತೆಯಾಗಿವೆ.

ಕುಡಿಯುವ ನೀರಿನ ದೂರುಗಳಿಗಾಗಿ ಜಿಲ್ಲೆ ಹಾಗೂ ತಾಲ್ಲೂಕು ಮಟ್ಟದಲ್ಲಿ ಸಹಾಯವಾಣಿ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, ಈವರೆಗೆ ಬಂದ 76 ದೂರುಗಳನ್ನು ಇತ್ಯರ್ಥಗೊಳಿಸಲಾಗಿದೆ ಎಂದು ತಿಳಿಸಲಾಗಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಜಿಲ್ಲೆಯ 471 ಶುದ್ಧ ಕುಡಿಯುವ ನೀರಿನ ಘಟಕಗಳಲ್ಲಿ 303 ಘಟಕಗಳು ಕಾರ್ಯನಿರ್ವಹಿಸುತ್ತಿದ್ದು, ಸ್ಥಗಿತಗೊಂಡಿರುವ 168 ಆರ್‌ಒ ಘಟಕಗಳ ಪೈಕಿ 41 ಘಟಕಗಳನ್ನು ದುರಸ್ತಿ ಮಾಡಲಾಗಿದೆ. ಉಳಿದ 127 ಘಟಕಗಳ ದುರಸ್ತಿಗೆ ಅನುದಾನ ಕೋರಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ.

ಬೇಸಿಗೆ ಹಿನ್ನೆಲೆಯಲ್ಲಿ ಜಲ ಜೀವನ್ ಮಿಷನ್ (ಜೆಜೆಎಂ) ಅಡಿಯಲ್ಲಿ ಕಾಮಗಾರಿಗಳನ್ನು ವೇಗಗೊಳಿಸಲು ಹಾಗೂ ನೀರಿನ ಸಮಸ್ಯೆ ಕಂಡುಬಂದಲ್ಲಿ ತಕ್ಷಣ ಸ್ಪಂದಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸಿಇಒ ಸ್ಪಷ್ಟಪಡಿಸಿದ್ದಾರೆ.

To tackle drinking water shortage in Yadgir district, 45 villages are being supplied water through 54 rented borewells. Authorities are also repairing RO plants and accelerating Jal Jeevan Mission works to address the crisis.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಪರಿಸರ ಸ್ನೇಹಿ ಗೌರಿ-ಗಣೇಶ ಹಬ್ಬ : ಮಂಗಳೂರು ಮಹಾನಗರಪಾಲಿಕೆ ಸೂಚನೆ

2026ರ ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಮಂಗಳೂರು ಮಹಾನಗರಪಾಲಿಕೆ ಸೂಚಿಸಿದ್ದು, POP…

13 hours ago

ಹವಾಮಾನ ವರದಿ | 09-09-2026 | ಕರ್ನಾಟಕದಲ್ಲಿ ಮಳೆಯ ಚಿತ್ರಣ ಬದಲಾಗುತ್ತಿದೆ – ಸೆ.11ರಿಂದ ಕರಾವಳಿಯಲ್ಲಿ ಬದಲಾವಣೆ

ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.…

20 hours ago

ಕ್ಯಾಂಪ್ಕೋ ಅಭಿವೃದ್ಧಿಯ ಹಾದಿಯಲ್ಲಿ: ₹2,900 ಕೋಟಿ ಅಡಿಕೆ ವ್ಯವಹಾರದ ನಡುವೆ ಮುಂದಿರುವ ಸವಾಲುಗಳೇನು?

2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…

1 day ago

ಅಡಿಕೆಯಷ್ಟೇ ಅಲ್ಲ ಅದೇ ಮರಕ್ಕೆ ವೆನಿಲ್ಲಾ ಬಳ್ಳಿ | ಅಸ್ಸಾಂನಲ್ಲಿ ಅಡಿಕೆಯ ಜೊತೆಗೆ ಇನ್ನೊಂದು ಬೆಳೆ..

ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…

1 day ago

ದೇಶಾದ್ಯಂತ ಮುಂಗಾರು ಬಿತ್ತನೆ 1,086 ಲಕ್ಷ ಹೆಕ್ಟೇರ್ ದಾಟಿದೆ – ಕರ್ನಾಟಕದಲ್ಲಿ ಭತ್ತ, ದ್ವಿದಳ ಧಾನ್ಯ ಕೃಷಿ ಕುಸಿತ

ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…

2 days ago

ಜಾನುವಾರುಗಳ ಮೇವಿನ ಕೊರತೆಗೆ ಅಜೋಲಾ ಪರಿಹಾರ – ರಾಜ್ಯದಲ್ಲಿ 12 ಸಾವಿರ ಘಟಕಗಳ ಸ್ಥಾಪನೆಗೆ ಚಾಲನೆ

ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…

2 days ago