ಯಾದಗಿರಿ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿರುವ ಹಿನ್ನೆಲೆ 45 ಸಮಸ್ಯಾತ್ಮಕ ಗ್ರಾಮಗಳನ್ನು ಗುರುತಿಸಿ, 54 ಬಾಡಿಗೆ ಕೊಳವೆಬಾವಿಗಳ ಮೂಲಕ ನೀರು ಪೂರೈಕೆ ಮಾಡಲಾಗುತ್ತಿದೆ ಎಂದು ಜಿಲ್ಲಾ ಪಂಚಾಯಿತಿ ಸಿಇಒ ಲವೀಶ್ ಒರಡಿಯಾ ತಿಳಿಸಿದ್ದಾರೆ.
ಜಿಲ್ಲೆಯ 25 ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆ ಕಂಡುಬಂದಿದೆ. ಯಾದಗಿರಿ ತಾಲ್ಲೂಕು ವ್ಯಾಪ್ತಿಯ 21 ಗ್ರಾಮಗಳಿಗೆ 24 ಕೊಳವೆಬಾವಿಗಳ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ. ಗುರುಮಠಕಲ್ ತಾಲ್ಲೂಕು ವ್ಯಾಪ್ತಿಯ 12 ಗ್ರಾಮಗಳಲ್ಲಿ 15 ಕೊಳವೆಬಾವಿ, ವಡಗೇರಿ ತಾಲ್ಲೂಕು ವ್ಯಾಪ್ತಿಯ 7 ಗ್ರಾಮಗಳಲ್ಲಿ 10 ಕೊಳವೆಬಾವಿ ಹಾಗೂ ಸುರಪುರ ತಾಲ್ಲೂಕು ವ್ಯಾಪ್ತಿಯ 5 ಗ್ರಾಮಗಳಲ್ಲಿ 5 ಕೊಳವೆಬಾವಿಗಳ ಮೂಲಕ ನೀರಿನ ಸಮಸ್ಯೆ ನಿವಾರಣೆಗೆ ಕ್ರಮ ಕೈಗೊಳ್ಳಲಾಗಿದೆ.
ಜಿಲ್ಲೆಯಲ್ಲಿ ಒಟ್ಟು 7,349 ನೀರಿನ ಮಾದರಿಗಳನ್ನು ಪರೀಕ್ಷಿಸಲಾಗಿದ್ದು, 7,203 ಮಾದರಿಗಳು ಕುಡಿಯಲು ಯೋಗ್ಯವಾಗಿವೆ. 146 ಮಾದರಿಗಳು ಅಯೋಗ್ಯವೆಂದು ಪತ್ತೆಯಾಗಿವೆ.
ಕುಡಿಯುವ ನೀರಿನ ದೂರುಗಳಿಗಾಗಿ ಜಿಲ್ಲೆ ಹಾಗೂ ತಾಲ್ಲೂಕು ಮಟ್ಟದಲ್ಲಿ ಸಹಾಯವಾಣಿ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, ಈವರೆಗೆ ಬಂದ 76 ದೂರುಗಳನ್ನು ಇತ್ಯರ್ಥಗೊಳಿಸಲಾಗಿದೆ ಎಂದು ತಿಳಿಸಲಾಗಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ
ಜಿಲ್ಲೆಯ 471 ಶುದ್ಧ ಕುಡಿಯುವ ನೀರಿನ ಘಟಕಗಳಲ್ಲಿ 303 ಘಟಕಗಳು ಕಾರ್ಯನಿರ್ವಹಿಸುತ್ತಿದ್ದು, ಸ್ಥಗಿತಗೊಂಡಿರುವ 168 ಆರ್ಒ ಘಟಕಗಳ ಪೈಕಿ 41 ಘಟಕಗಳನ್ನು ದುರಸ್ತಿ ಮಾಡಲಾಗಿದೆ. ಉಳಿದ 127 ಘಟಕಗಳ ದುರಸ್ತಿಗೆ ಅನುದಾನ ಕೋರಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ.
ಬೇಸಿಗೆ ಹಿನ್ನೆಲೆಯಲ್ಲಿ ಜಲ ಜೀವನ್ ಮಿಷನ್ (ಜೆಜೆಎಂ) ಅಡಿಯಲ್ಲಿ ಕಾಮಗಾರಿಗಳನ್ನು ವೇಗಗೊಳಿಸಲು ಹಾಗೂ ನೀರಿನ ಸಮಸ್ಯೆ ಕಂಡುಬಂದಲ್ಲಿ ತಕ್ಷಣ ಸ್ಪಂದಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸಿಇಒ ಸ್ಪಷ್ಟಪಡಿಸಿದ್ದಾರೆ.
To tackle drinking water shortage in Yadgir district, 45 villages are being supplied water through 54 rented borewells. Authorities are also repairing RO plants and accelerating Jal Jeevan Mission works to address the crisis.
ಎತ್ತಿನಹೊಳೆ ಯೋಜನೆಯ ಕಾಮಗಾರಿಯನ್ನು ಒಂದು ವಾರದಲ್ಲಿ ಪುನರಾರಂಭಿಸಲು ಉಪಮುಖ್ಯಮಂತ್ರಿ ಸೂಚನೆ ನೀಡಿದ್ದಾರೆ. ಪ್ರಮುಖ…
ಕೆಆರ್ಎಸ್ ಅಣೆಕಟ್ಟಿನ ನೀರಿನ ಮಟ್ಟ ಕೇವಲ 15 ದಿನಗಳಲ್ಲಿ 8 ಅಡಿ ಕುಸಿದಿದೆ.…
ತುಮಕೂರಿನಲ್ಲಿ ನವಿಲುಗಳಲ್ಲಿ H5N1 ಸೋಂಕು ದೃಢಪಟ್ಟಿದ್ದು, ನಾಲ್ಕು ಗ್ರಾಮಗಳನ್ನು ಕಂಟೋನ್ಮೆಂಟ್ ವಲಯಗಳಾಗಿ ಘೋಷಿಸಲಾಗಿದೆ.…
ಗುರುವಾಯನಕೆರೆ–ಉಪ್ಪಿನಂಗಡಿ ರಾಜ್ಯ ಹೆದ್ದಾರಿ ಅಭಿವೃದ್ಧಿಗೆ ₹13 ಕೋಟಿ ಅನುಮೋದನೆ ನೀಡಲಾಗಿದೆ. ಈ ಯೋಜನೆಯಿಂದ…
ಹೊಳೆಹೊನ್ನೂರಿನಲ್ಲಿ ನಡೆದ ಅಡಿಕೆ ಕಳ್ಳತನ ಪ್ರಕರಣದಲ್ಲಿ 350 ಚೀಲ ಅಡಿಕೆ ಮತ್ತು ಲಾರಿಯನ್ನು…
ಅಡಿಕೆ ಎಲೆ ಚುಕ್ಕೆ ರೋಗವು ಗಾಳಿ ಮತ್ತು ತೇವಾಂಶದಿಂದ ವೇಗವಾಗಿ ಹರಡುತ್ತಿದ್ದು, ತೋಟಗಳಿಗೆ…