Advertisement
MIRROR FOCUS

ವಳಲಂಬೆಯಲ್ಲಿ ಗಾನಾರ್ಚನೆ | ದೇಶದ ಕಲಾಪ್ರಕಾರಗಳಿಗೆ ನಾವು ಪರಕೀಯರಾಗಬಾರದು – ಡಾ. ಎನ್‌ ಎಸ್‌ ಗೋವಿಂದ |

Share

ಈ ದೇಶದ ಪರಂಪರೆ, ಆಚರಣೆ, ಕಲಾಪ್ರಾಕಾರಗಳಿಗೆ ನಾವೇ ಪರಿಕೀಯರಾಗಬಾರದು. ಈ ನಿಟ್ಟಿನಲ್ಲಿ ನಮ್ಮ ಮಕ್ಕಳಿಗೆ ಈ ದೇಶದ ಒಂದಲ್ಲ ಒಂದು ಕಲಾಪ್ರಾಕಾರಗಳನ್ನು ಪೋಷಕರು ಪರಿಚಯ ಮಾಡಿಕೊಡಬೇಕು ಹಾಗೂ ವಿಶಿಷ್ಟ ವ್ಯಕ್ತಿಗಳನ್ನಾಗಿ ರೂಪಿಸಬೇಕು ಎಂದು ಕುಕ್ಕೆ ಸುಬ್ರಹ್ಮಣ್ಯದ  ಕೆ ಎಸ್‌ ಎಸ್‌ ಕಾಲೇಜಿನ ಪ್ರಾಂಶುಪಾಲ ಡಾ.ಎನ್.ಎಸ್.ಗೋವಿಂದ ಹೇಳಿದರು.

 

ಅವರು ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ಸಭಾಭವನದಲ್ಲಿ ಶನಿವಾರ ಯಕ್ಷಕಲಾಭಿಮಾನಿ ಮಿತ್ರರ ಆಶ್ರಯದಲ್ಲಿ ನಡೆದ  “ಗಾನಾರ್ಚನೆ”  ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಮಾತನಾಡಿದರು.  ಪೋಷಕರು ಮಕ್ಕಳಲ್ಲಿ ಕಲಾಪ್ರಕಾರಕ್ಕೆ ಬೇಕಾದ ಅಭಿರುಚಿಯನ್ನು ಬೆಳೆಸುವ ಹಾಗೂ ಪರಿಚಯಿಸುವ ಕೆಲಸ ಇಂದು ಮಾಡಬೇಕಾಗಿದೆ. ಈ ದೇಶದ ಕಲಾಪ್ರಾಕಾರಗಳ ಪರಿಚಯ ಮಕ್ಕಳಲ್ಲಿ  ಬೆಳೆಸಬೇಕು. ವಿದ್ಯಾರ್ಥಿ ಯಾವುದೇ ಕ್ಷೇತ್ರದಲ್ಲಿ ಬೆಳೆಯಬಹುದು, ಆತನೊಳಗೆ ಒಬ್ಬ ಕಲಾವಿದ ಇರಬೇಕು ಎಂದರು. ಯಾವತ್ತೂ ಯುರೋಪಿಯನ್‌ ಶಿಕ್ಷಣದ ಅಡಿಯಾಳಾಗಿರದೆ, ನಮ್ಮದೇ ಪರಂಪರೆ ಕಲಿಸುವ ನಮ್ಮದೇ ಪ್ರಾಕಾರಗಳನ್ನು ಮಕ್ಕಳಿಗೆ ಕಲಿಸಿಕೊಡಲೇಬೇಕಿದೆ, ಅದು ಹಾಡು, ಭಜನೆ, ಯಕ್ಷಗಾನ ಯಾವುದಾದರೊಂದು ಕ್ಷೇತ್ರದಲ್ಲಿ ಮಕ್ಕಳು ತೊಡಗಿಸಿಕೊಳ್ಳಬೇಕು ಎಂದರು. ಗಾನಾರ್ಚನೆಯ ಮೂಲಕ ಕಾವ್ಯ ಪರಂಪರೆ ಬೆಳೆಯಲು ಸಾಧ್ಯವಿದೆ, ಹಿಸ ತಲೆಮಾರಿಗೂ ವಿನೂತನ ಮಾದರಿಯಲ್ಲಿ  ಕಲೆಯ ಪರಿಚಯವೂ ಆಗುತ್ತಿದೆ ಎಂದು ಎನ್‌ ಎಸ್‌ ಗೋವಿಂದ ಹೇಳಿದರು.

ದೀಪಪ್ರಜ್ವಲನದ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ಅರ್ಚಕ ಪಿ ವಿ ಮಹಾಬಲೇಶ್ವರ ಭಟ್‌ ಶುಭಹಾರೈಸಿದರು.

ಅತಿಥಿಯಾಗಿದ್ದ ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಬಿ ಕೆ ಬೆಳ್ಯಪ್ಪ ಗೌಡ ಮಾತನಾಡಿ, ದೇವಸ್ಥಾನದ ವಠಾರದಲ್ಲಿ ಇಂತಹ ಕಾರ್ಯಕ್ರಮ ಮೊದಲ ಬಾರಿಗೆ ನಡೆಯುತ್ತಿದ್ದು, ಕಲೆಯೂ ಕೂಡಾ ದೇವತಾ ಅರ್ಚನೆಯಾಗಿದ್ದು , ಹೀಗಾಗಿ ದೇವಸ್ಥಾನವು ಇಂತಹ ಕಾರ್ಯಗಳಿಗೆ ಸದಾ ಪ್ರೋತ್ಸಾಹ ನೀಡುತ್ತದೆ ಎಂದರು. ಮಕ್ಕಳಲ್ಲಿ ಯಕ್ಷಗಾನದ ಮೂಲಕ ಸಂಸ್ಕಾರ ಬೆಳೆಯಬಲ್ಲುದು,  ಈ ಕಾರಣದಿಂದ ದೇವಸ್ಥಾನದ ವಠಾರದಲ್ಲಿ ಭಜನೆ, ಯಕ್ಷಗಾನದಂತಹ ಕಾರ್ಯಗಳು ನಡೆಯುತ್ತಿದೆ ಎಂದರು.

ಕಾರ್ಯಕ್ರಮದಲ್ಲಿ ಯಕ್ಷಗಾನ ಸಂಘಟಕ ಎಸ್.ಎನ್‌,ಪಂಜಾಜೆ ಅವರನ್ನು ಗೌರವಿಸಲಾಯಿತು. ವಿಶ್ವನಾಥ ಪುಚ್ಚಪ್ಪಾಡಿ ಗೌರವಿಸಿದರು.

ಯಕ್ಷಗಾನ ವಿಮರ್ಶಕ, ಸಂಘಟಕ ಎಸ್.ಎನ್‌,ಪಂಜಾಜೆ ಮಾತನಾಡಿ, ಗಾನಾರ್ಚನೆಯ ಮೂಲಕ ಕಲಾಸಕ್ತರಿಗೆ ಮಾನಸಿಕವಾದ ಶಕ್ತಿ ತುಂಬಿದೆ. ಯಕ್ಷಗಾನ ಪ್ರತೀ ಮನೆಯಲ್ಲಿ ಬೆಳೆಯಬೇಕು. ಪ್ರತೀ ಮನೆಯ ಮಕ್ಕಳಲ್ಲಿ  ಒಬ್ಬರಿಗೆ ಯಕ್ಷಗಾನದಲ್ಲಿ ಪ್ರೀತಿ ಬರುವಾಗ ಪೋಷಕರು ಮಾಡಬೇಕು. ಆಗ ಕಲೆಯೂ ಬೆಳೆಯುತ್ತದೆ, ಭಾರತೀಯ ಪರಂಪರೆಯೂ ಬೆಳೆಯುತ್ತದೆ ಎಂದರು.

ಕಾರ್ಯಕ್ರಮದಲ್ಲಿ ಯಕ್ಷಗಾನ ಪ್ರಸಿದ್ಧ ಭಾಗವತರುಗಳಾದ ಮುರಳಿಕೃಷ್ಣ ಶಾಸ್ತ್ರಿ ತೆಂಕಬೈಲು, ರವಿಚಂದ್ರ ಕನ್ನಡಿಕಟ್ಟೆ, ಕಾವ್ಯಶ್ರೀ ಅಜೇರುಭಾಗವಹಿಸಿದರು. ಚೆಂಡೆಯಲ್ಲಿ ಸುಬ್ರಹ್ಮಣ್ಯ ದೇಲಂತಮಜಲು, ಮದ್ದಳೆಯಲ್ಲಿ ಕೃಷ್ಣಪ್ರಕಾಶ್‌ ಉಳಿತ್ತಾಯ, ಚಕ್ರತಾಳದಲ್ಲಿ ಪುರುಷೋತ್ತಮ ಆಚಾರ್ಯ ದುಗ್ಗಲಡ್ಕ ಭಾಗವಹಿಸಿದರು. ಕಲಾವಿದ  ಹರೀಶ್‌ ಬಳಂತಿಮೊಗ್ರು ಕಾರ್ಯಕ್ರಮ ನಿರೂಪಿಸಿದರು.

ಯಕ್ಷಕಲಾಭಿಮಾನಿ ಮಿತ್ರರ ವತಿಯಿಂದ ಮಹೇಶ್‌ ಪುಚ್ಚಪ್ಪಾಡಿ ಸ್ವಾಗತಿಸಿ ಪ್ರಸ್ತಾವನೆಗೈದರು. ಅಪರ್ಣಾ ಪುಚ್ಚಪ್ಪಾಡಿ ಕಾರ್ಯಕ್ರಮ ನಿರೂಪಿಸಿದರು. ಹರಿಸುಬ್ರಹ್ಮಣ್ಯ ಪುಚ್ಚಪ್ಪಾಡಿ , ಸತ್ಯನಾರಾಯಣ ಭಟ್ ಹೊನ್ನಡಿ ಸಂಘಟಿಸಿದರು.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

44 minutes ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

10 hours ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

10 hours ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

14 hours ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

15 hours ago

18 ಕರಿಮೆಣಸು ತಳಿಗಳ ನರ್ಸರಿ ನಿರ್ಮಿಸಿ ಯಶಸ್ಸು ಕಂಡ ಯುವ ರೈತ

ಕಣ್ಣೂರಿನ ಜಿನೇಶ್ ಕಲಿಯಾಣಿ 18 ಕರಿಮೆಣಸು ತಳಿಗಳ ನರ್ಸರಿ, ಮಿಶ್ರ ಕೃಷಿ ಮತ್ತು…

1 day ago