ಖ್ಯಾತ ಯಕ್ಷಗಾನ ಕಲಾವಿದ ಕುಂಬಳೆ ಸುಂದರ ರಾವ್‌ ಇನ್ನಿಲ್ಲ

November 30, 2022
8:06 AM

ಯಕ್ಷಗಾನದ ಮೇರು ಕಲಾವಿದ, ಮಾಜಿ ಶಾಸಕ ಕುಂಬಳೆ ಸುಂದರ್ ರಾವ್(88) ಬುಧವಾರ ಮುಂಜಾನೆ ನಿಧನ ಹೊಂದಿದರು. ಕಳೆದ ಕೆಲವು ದಿನಗಳಿಂದ  ವಯೋಸಹಜವಾದ ಅನಾರೋಗ್ಯದಿಂದ ಅವರು ಬಳಲುತ್ತಿದ್ದರು.

Advertisement

ಮೃತರು  ಪತ್ನಿ ಇಬ್ಬರು  ಪುತ್ರರು ಮೂವರು ಪುತ್ರಿಯರನ್ನು ಅಗಲಿದ್ದಾರೆ. ಇವರ ಪಾರ್ಥೀವ ಶರೀರವನ್ನು ಮಂಗಳೂರಿನ ಪಂಪ್ ವೆಲ್ ಬಳಿ ಇರುವ ಅವರ ಸ್ವಗೃಹದಲ್ಲಿ ಇರಿಸಲಾಗಿದ್ದು ಸಾರ್ವಜನಿಕರಿಗೆ ವೀಕ್ಷಣೆ ಮಾಡಲು ಅವಕಾಶ ನೀಡಲಾಗಿದೆ. ನಾಳೆ ಅಂತ್ಯ ಸಂಸ್ಕಾರ ನಾಳೆ ನೆರವೇರಲಿದೆ. ಸುಂದರ್ ರಾವ್ ಅವರ ನಿಧನ ಯಕ್ಷಗಾನ ಲೋಕಕ್ಕೆ ಅಪಾರ  ನಷ್ಟವಾಗಿದೆ ಎಂದು  ಯಕ್ಷಗಾನ ಕಲಾವಿದರು ನೋವು ವ್ಯಕ್ತಪಡಿಸಿದ್ದಾರೆ.

ಕುಂಬಳೆ ಸುಂದರ ರಾವ್‌ ಅವರು ಯಕ್ಷಗಾನ ಕಲಾವಿದರಾಗಿಯೇ ಹೆಚ್ಚು ಪ್ರಸಿದ್ಧರು. 1994 ರಿಂದ 1999 ರವರೆಗೆ ಸುರತ್ಕಲ್‌ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದ ಕುಂಬಳೆ ಸುಂದರ್‌ ರಾವ್‌ ಅವರು ಯಕ್ಷಗಾನ ಅಕಾಡೆಮಿ ಅಧ್ಯಕ್ಷರಾಗಿ ಕೆಲಸ ಮಾಡಿದ್ದರು. ಧರ್ಮಸ್ಥಳ, ಸುರತ್ಕಲ್‌, ಇರಾ ಮೇಳಗಳಲ್ಲಿ  ಕಲಾವಿದರಾಗಿ ಕೆಲಸ ಮಾಡಿದ್ದರು. ಕಲಾಸೇವೆಗಾಗಿ ಹಲವು ಪ್ರಶಸ್ತಿಗಳನ್ನು ಪಡೆದುಕೊಂಡಿದ್ದರು.

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಈ ತಿಂಗಳ ಅಂತ್ಯದೊಳಗೆ 6 ರಾಶಿಯವರಿಗೆ ಉತ್ತಮ ಶುಭ ಫಲ | ಕೆಲವು ವಿಧಿ ವಿಧಾನಗಳನ್ನು ಅನುಸರಿಸಿದರೆ ಯಶಸ್ಸು |
May 7, 2025
7:02 AM
by: ದ ರೂರಲ್ ಮಿರರ್.ಕಾಂ
ಹೊಸರುಚಿ | ಉಪ್ಪಿನಲ್ಲಿ ಹಾಕಿದ ಹಲಸಿನ ಕಾಯಿ ಚಟ್ಟಂಬಡೆ
May 7, 2025
7:00 AM
by: ದಿವ್ಯ ಮಹೇಶ್
ಭಾರತದಿಂದ ‘ಆಪರೇಷನ್ ಸಿಂಧೂರ್’ | ಭಯೋತ್ಪಾದಕ ಮೂಲಸೌಕರ್ಯಗಳ ನೆಲೆಗಳ ನಾಶ | 9 ಭಯೋತ್ಪಾದಕ ಶಿಬಿರಗಳ ಮೇಲೆ ದಾಳಿ |
May 7, 2025
6:05 AM
by: ದ ರೂರಲ್ ಮಿರರ್.ಕಾಂ
ಯುದ್ಧ ಆದರೆ ಕೃಷಿ ಉತ್ಪನ್ನಗಳ ಧಾರಣೆ ಏನಾಗಬಹುದು?
May 6, 2025
7:44 AM
by: ಡಾ|ವಿಘ್ನೇಶ್ವರ ಭಟ್‌ ವರ್ಮುಡಿ

You cannot copy content of this page - Copyright -The Rural Mirror

Join Our Group