ಯಕ್ಷಗಾನದ ಮೇರು ಕಲಾವಿದ, ಮಾಜಿ ಶಾಸಕ ಕುಂಬಳೆ ಸುಂದರ್ ರಾವ್(88) ಬುಧವಾರ ಮುಂಜಾನೆ ನಿಧನ ಹೊಂದಿದರು. ಕಳೆದ ಕೆಲವು ದಿನಗಳಿಂದ ವಯೋಸಹಜವಾದ ಅನಾರೋಗ್ಯದಿಂದ ಅವರು ಬಳಲುತ್ತಿದ್ದರು.
ಮೃತರು ಪತ್ನಿ ಇಬ್ಬರು ಪುತ್ರರು ಮೂವರು ಪುತ್ರಿಯರನ್ನು ಅಗಲಿದ್ದಾರೆ. ಇವರ ಪಾರ್ಥೀವ ಶರೀರವನ್ನು ಮಂಗಳೂರಿನ ಪಂಪ್ ವೆಲ್ ಬಳಿ ಇರುವ ಅವರ ಸ್ವಗೃಹದಲ್ಲಿ ಇರಿಸಲಾಗಿದ್ದು ಸಾರ್ವಜನಿಕರಿಗೆ ವೀಕ್ಷಣೆ ಮಾಡಲು ಅವಕಾಶ ನೀಡಲಾಗಿದೆ. ನಾಳೆ ಅಂತ್ಯ ಸಂಸ್ಕಾರ ನಾಳೆ ನೆರವೇರಲಿದೆ. ಸುಂದರ್ ರಾವ್ ಅವರ ನಿಧನ ಯಕ್ಷಗಾನ ಲೋಕಕ್ಕೆ ಅಪಾರ ನಷ್ಟವಾಗಿದೆ ಎಂದು ಯಕ್ಷಗಾನ ಕಲಾವಿದರು ನೋವು ವ್ಯಕ್ತಪಡಿಸಿದ್ದಾರೆ.
ಕುಂಬಳೆ ಸುಂದರ ರಾವ್ ಅವರು ಯಕ್ಷಗಾನ ಕಲಾವಿದರಾಗಿಯೇ ಹೆಚ್ಚು ಪ್ರಸಿದ್ಧರು. 1994 ರಿಂದ 1999 ರವರೆಗೆ ಸುರತ್ಕಲ್ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದ ಕುಂಬಳೆ ಸುಂದರ್ ರಾವ್ ಅವರು ಯಕ್ಷಗಾನ ಅಕಾಡೆಮಿ ಅಧ್ಯಕ್ಷರಾಗಿ ಕೆಲಸ ಮಾಡಿದ್ದರು. ಧರ್ಮಸ್ಥಳ, ಸುರತ್ಕಲ್, ಇರಾ ಮೇಳಗಳಲ್ಲಿ ಕಲಾವಿದರಾಗಿ ಕೆಲಸ ಮಾಡಿದ್ದರು. ಕಲಾಸೇವೆಗಾಗಿ ಹಲವು ಪ್ರಶಸ್ತಿಗಳನ್ನು ಪಡೆದುಕೊಂಡಿದ್ದರು.
ಕಣ್ಣೂರಿನ ಜಿನೇಶ್ ಕಲಿಯಾಣಿ 18 ಕರಿಮೆಣಸು ತಳಿಗಳ ನರ್ಸರಿ, ಮಿಶ್ರ ಕೃಷಿ ಮತ್ತು…
ಕರಾವಳಿಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆ,…
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಜುಲೈ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ…
23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…