Advertisement
ನಿಧನ‌ ಸುದ್ದಿಗಳು

ನಿಧನ | ಹಿರಿಯ ಯಕ್ಷಗಾನ ಕಲಾವಿದ ಪಾತಾಳ ವೆಂಕಟರಮಣ ಭಟ್

Share
ಹಿರಿಯ ಯಕ್ಷಗಾನ ಕಲಾವಿದ ಪಾತಾಳ ವೆಂಕಟರಮಣ ಭಟ್ (92) ಉಪ್ಪಿನಂಗಡಿಯಲ್ಲಿರುವ ಸ್ವಗೃಹ “ಪಾತಾಳ” ದಲ್ಲಿ ಶನಿವಾರ ಹೃದಯಾಘಾತದಿಂದ ನಿಧನರಾದರು. ಅವರಿಗೆ ಇಬ್ಬರು ಪುತ್ರರು ಹಾಗೂ ನಾಲ್ಕು ಮಂದಿ ಪುತ್ರಿಯರು ಇದ್ದಾರೆ. ಅವರ ಮಗ ಅಂಬಾಪ್ರಸಾದ ಪಾತಾಳ ಪ್ರಸಿದ್ಧ ಸ್ತ್ರೀವೇಷಧಾರಿಯಾಗಿ ಪ್ರಸಿದ್ಧರಾಗಿದ್ದಾರೆ.
1933 ರ ನವಂಬರ್ 16 ರಂದು ಪುತ್ತೂರು ಬಳಿ ಬೈಪದವು ಎಂಬಲ್ಲಿ ರಾಮಭಟ್ಟ ಮತ್ತು ಹೇಮಾವತಿ ದಂಪತಿಯ ಮಗನಾಗಿ ಜನಿಸಿದ ಇವರು  8ನೆ ತರಗತಿವರೆಗೆ ವಿದ್ಯಾಭ್ಯಾಸ ಮಾಡಿದರು. ಬಳಿಕ ಸೌಕೂರು ಮೇಳದ ಸ್ತ್ರೀ ವೇಷಧಾರಿ ಸೀತಾರಾಮ ಅವರಿಂದ ಬಡಗುತಿಟ್ಟಿನ ನಾಟ್ಯದ ಹೆಜ್ಜೆಗಳನ್ನೂ ಪೆರುವೋಡಿ ನಾರಾಯಣ ಭಟ್ಟರಿಂದ ತೆಂಕುತಿಟ್ಟಿನ ನಾಟ್ಯಗಾರಿಕೆ ಕಲಿಕೆಯನ್ನೂ ಪೂರ್ಣಗೊಳಿಸಿದರು. ಕಡಾರು ನಾರಾಯಣ ಭಟ್ ಹಾಗೂ ಅಳಿಕೆ ರಾಮಯ್ಯ ರೈ ಅವರಿಂದಲೂ ಹೆಚ್ಚಿನ ನಾಟ್ಯಾಭ್ಯಾಸ ಕರಗತ ಮಾಡಿಕೊಂಡರು.
ಕಾಂಚನ ಮೇಳ, ಸೌಕೂರು ಮೇಳ, ಮೂಲ್ಕಿ ಮೇಳದಲ್ಲಿ ಕಲಾವಿದರಾಗಿ ಸೇವೆ ಮಾಡಿದ ಬಳಿಕ ಕೀರ್ತಿಶೇಷ ರತ್ನವರ್ಮ ಹೆಗ್ಗಡೆಯವರು ಧರ್ಮಾಧಿಕಾರಿಗಳಾಗಿದ್ದ ಅವಧಿಯಲ್ಲಿ1963 ರಲ್ಲಿ ಧರ್ಮಸ್ಥಳ ಮೇಳಕ್ಕೆ ಸ್ತ್ರೀ ಪಾತ್ರಧಾರಿಯಾಗಿ ಸೇರಿದರು. 18 ವರ್ಷಗಳ ಸೇವೆ ಬಳಿಕ ನಿವೃತ್ತರಾದರು. ನಿವೃತ್ತಿ ಬಳಿಕ ಉಪ್ಪಿನಂಗಡಿಯ ಹಿರೆಂಬಾಡಿ ಬಳಿ “ಪಾತಾಳ” ದಲ್ಲಿ ವಾಸ್ತವ್ಯ ಇದ್ದರು.
ಧರ್ಮಸ್ಥಳ ಕ್ಷೇತ್ರ ಮಹಾತ್ಮೆಯ ಅಮ್ಮುಬಲ್ಲಾಳ್ತಿ, ಭಸ್ಮಾಸುರ ಮೋಹಿನಿ ಪ್ರಸಂಗದ ಮೋಹಿನಿ, ರಂಭೆ, ಊರ್ವಶಿ, ಮೇನಕೆ, ಶೂರ್ಪನಖಿ, ಅಂಬೆ, ಪೂತನಿ, ದ್ರೌಪದಿ, ದೇವಿ ಮೊದಲಾದ ಪಾತ್ರಗಳನ್ನು ಇವರು ನಿರ್ವಹಿಸಿ “ನಾಟ್ಯರಾಣಿ  ಶಾಂತಲೆ” ಬಿರುದನ್ನು ಪಡೆದಿರುತ್ತಾರೆ. ಬೇಲೂರಿನ ಶಿಲಾಬಾಲಿಕೆಯ ಅಂಗಭAಗಿಗಳನ್ನು ಅವರು ಬೇಲೂರಿಗೆ ಹೋಗಿ ಸ್ವತಃ ಅಭ್ಯಾಸ ಮಾಡಿ ಯಕ್ಷಗಾನದಲ್ಲಿ ಅಳವಡಿಸಿಕೊಂಡಿದ್ದರು. ಯಕ್ಷರಂಗದ ಶಿಲಾಬಾಲಿಕೆ ಎಂದೇ ಅವರು ಚಿರಪರಿಚಿತರಾಗಿದ್ದರು.
ಕರ್ನಾಟಕ ರಾಜ್ಯಪ್ರಶಸ್ತಿ, ಜಾನಪದ ಅಕಾಡೆಮಿ ಪ್ರಶಸ್ತಿ, ಯಕ್ಷಮಂಗಳ ಪ್ರಶಸ್ತಿ, ಯಕ್ಷಕಲಾನಿಧಿ ಪ್ರಶಸ್ತಿ, ದೇರಾಜೆ ಸೀತಾರಾಮಯ್ಯ ಪ್ರಶಸ್ತಿ, ಶಂಕರನಾರಾಯಣ ಸಾಮಗ ಪ್ರಶಸ್ತಿ, ಕುರಿಯವಿಠಲಶಾಸ್ತ್ರಿ ಪ್ರಶಸ್ತಿ, ದೇರಾಜೆ ಪ್ರಶಸ್ತಿ ಮೊದಲಾದ ಹಲವು ಪ್ರಶಸ್ತಿ-ಪುರಸ್ಕಾರಗಳಿಂದ ಗೌರವಿಸಲ್ಪಟ್ಟಿದ್ದಾರೆ.
ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಅವರ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿ, ಅವರ ಆತ್ಮಕ್ಕೆ ಚಿರಶಾಂತಿಯನ್ನು ಕೋರಿದ್ದಾರೆ.
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮಣ್ಣಿಲ್ಲದೇ ಅವಕಾಡೊ ಬೆಳೆ..! ಜೇನು ಸೇರಿಸಿದ ಕೃಷಿ ಈಗ ಹೊಸ ಟ್ರೆಂಡ್

2026 ರಲ್ಲಿ ಹೈಡ್ರೋಪೋನಿಕ್ ಅವಕಾಡೊ ಕೃಷಿ ಮತ್ತು ಜೇನು ಪರಾಗಸ್ಪರ್ಶದ ಸಂಯೋಜನೆ ಹೊಸ…

20 hours ago

ರೇಷ್ಮೆ ಗೂಡಿಗೆ 800 ರೂ.ವರೆಗೆ ಬೆಲೆ | ಚಾಮರಾಜನಗರದಲ್ಲಿ ರೈತರಿಗೆ ಲಾಭದಾಯಕ ಹಾದಿ

ಚಾಮರಾಜನಗರ ಜಿಲ್ಲೆಯಲ್ಲಿ ರೇಷ್ಮೆ ಗೂಡಿಗೆ ಕೆಜಿಗೆ 750ರಿಂದ 800 ರೂಪಾಯಿವರೆಗೆ ಬೆಲೆ ಸಿಗುತ್ತಿದೆ.…

20 hours ago

ಸ್ಥಳೀಯ ಚುನಾವಣೆಗಳಲ್ಲಿ ಇವಿಎಂಗೆ ಬ್ರೇಕ್ | ಬ್ಯಾಲೆಟ್ ಪೇಪರ್ ಮೂಲಕ ಮತದಾನಕ್ಕೆ ಸಚಿವ ಸಂಪುಟ ಹಸಿರು ನಿಶಾನೆ

ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಇವಿಎಂ ಬದಲಿಗೆ ಬ್ಯಾಲೆಟ್ ಪೇಪರ್ ಮೂಲಕ ಮತದಾನ…

20 hours ago

ಕೇಂದ್ರವು ಕೇರಳದ ರಬ್ಬರ್ ಕ್ಷೇತ್ರವನ್ನು ದುರ್ಬಲಗೊಳಿಸುತ್ತಿದೆ – ಆರೋಪ

ಕೇಂದ್ರ ಸರ್ಕಾರವು ರಾಜ್ಯದ ರಬ್ಬರ್ ಕೃಷಿಯನ್ನು ಈಶಾನ್ಯಕ್ಕೆ ಸ್ಥಳಾಂತರಿಸುವ ಮೂಲಕ ರಬ್ಬರ್ ಕ್ಷೇತ್ರವನ್ನು…

20 hours ago

ಅಡಿಕೆ ಮಾರುಕಟ್ಟೆ ಸಮೀಕರಣ : ಬೆಲೆ ನಿರ್ಧಾರದ ಹಿಂದಿನ ಅರ್ಥಶಾಸ್ತ್ರ ಮತ್ತು ಮನೋವಿಜ್ಞಾನ

ಅಡಿಕೆ ಮಾರುಕಟ್ಟೆ ಎಂದರೆ ಕೇವಲ ಕೃಷಿ ಉತ್ಪನ್ನಗಳ ವಿನಿಮಯ ಕೇಂದ್ರವಲ್ಲ; ಅದೊಂದು ಸಂಕೀರ್ಣವಾದ…

1 day ago

ಅಡಿಕೆ ಕಳ್ಳಸಾಗಣೆ ಜಾಲಕ್ಕೆ ಮಿಝೋರಂ ಸರ್ಕಾರದ ಬಿಗಿ ಹಿಡಿತ – ಅಡಿಕೆ ಮಾರುಕಟ್ಟೆ ಚೇತರಿಕೆ ಸಾಧ್ಯತೆ

ಮಿಝೋರಂ ಸರ್ಕಾರವು ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಘೋಷಿಸಿದೆ. ಯಾವುದೇ…

1 day ago