Advertisement
ನಿಧನ‌ ಸುದ್ದಿಗಳು

ನಿಧನ | ಹಿರಿಯ ಯಕ್ಷಗಾನ ಕಲಾವಿದ ಪಾತಾಳ ವೆಂಕಟರಮಣ ಭಟ್

Share
ಹಿರಿಯ ಯಕ್ಷಗಾನ ಕಲಾವಿದ ಪಾತಾಳ ವೆಂಕಟರಮಣ ಭಟ್ (92) ಉಪ್ಪಿನಂಗಡಿಯಲ್ಲಿರುವ ಸ್ವಗೃಹ “ಪಾತಾಳ” ದಲ್ಲಿ ಶನಿವಾರ ಹೃದಯಾಘಾತದಿಂದ ನಿಧನರಾದರು. ಅವರಿಗೆ ಇಬ್ಬರು ಪುತ್ರರು ಹಾಗೂ ನಾಲ್ಕು ಮಂದಿ ಪುತ್ರಿಯರು ಇದ್ದಾರೆ. ಅವರ ಮಗ ಅಂಬಾಪ್ರಸಾದ ಪಾತಾಳ ಪ್ರಸಿದ್ಧ ಸ್ತ್ರೀವೇಷಧಾರಿಯಾಗಿ ಪ್ರಸಿದ್ಧರಾಗಿದ್ದಾರೆ.
1933 ರ ನವಂಬರ್ 16 ರಂದು ಪುತ್ತೂರು ಬಳಿ ಬೈಪದವು ಎಂಬಲ್ಲಿ ರಾಮಭಟ್ಟ ಮತ್ತು ಹೇಮಾವತಿ ದಂಪತಿಯ ಮಗನಾಗಿ ಜನಿಸಿದ ಇವರು  8ನೆ ತರಗತಿವರೆಗೆ ವಿದ್ಯಾಭ್ಯಾಸ ಮಾಡಿದರು. ಬಳಿಕ ಸೌಕೂರು ಮೇಳದ ಸ್ತ್ರೀ ವೇಷಧಾರಿ ಸೀತಾರಾಮ ಅವರಿಂದ ಬಡಗುತಿಟ್ಟಿನ ನಾಟ್ಯದ ಹೆಜ್ಜೆಗಳನ್ನೂ ಪೆರುವೋಡಿ ನಾರಾಯಣ ಭಟ್ಟರಿಂದ ತೆಂಕುತಿಟ್ಟಿನ ನಾಟ್ಯಗಾರಿಕೆ ಕಲಿಕೆಯನ್ನೂ ಪೂರ್ಣಗೊಳಿಸಿದರು. ಕಡಾರು ನಾರಾಯಣ ಭಟ್ ಹಾಗೂ ಅಳಿಕೆ ರಾಮಯ್ಯ ರೈ ಅವರಿಂದಲೂ ಹೆಚ್ಚಿನ ನಾಟ್ಯಾಭ್ಯಾಸ ಕರಗತ ಮಾಡಿಕೊಂಡರು.
ಕಾಂಚನ ಮೇಳ, ಸೌಕೂರು ಮೇಳ, ಮೂಲ್ಕಿ ಮೇಳದಲ್ಲಿ ಕಲಾವಿದರಾಗಿ ಸೇವೆ ಮಾಡಿದ ಬಳಿಕ ಕೀರ್ತಿಶೇಷ ರತ್ನವರ್ಮ ಹೆಗ್ಗಡೆಯವರು ಧರ್ಮಾಧಿಕಾರಿಗಳಾಗಿದ್ದ ಅವಧಿಯಲ್ಲಿ1963 ರಲ್ಲಿ ಧರ್ಮಸ್ಥಳ ಮೇಳಕ್ಕೆ ಸ್ತ್ರೀ ಪಾತ್ರಧಾರಿಯಾಗಿ ಸೇರಿದರು. 18 ವರ್ಷಗಳ ಸೇವೆ ಬಳಿಕ ನಿವೃತ್ತರಾದರು. ನಿವೃತ್ತಿ ಬಳಿಕ ಉಪ್ಪಿನಂಗಡಿಯ ಹಿರೆಂಬಾಡಿ ಬಳಿ “ಪಾತಾಳ” ದಲ್ಲಿ ವಾಸ್ತವ್ಯ ಇದ್ದರು.
ಧರ್ಮಸ್ಥಳ ಕ್ಷೇತ್ರ ಮಹಾತ್ಮೆಯ ಅಮ್ಮುಬಲ್ಲಾಳ್ತಿ, ಭಸ್ಮಾಸುರ ಮೋಹಿನಿ ಪ್ರಸಂಗದ ಮೋಹಿನಿ, ರಂಭೆ, ಊರ್ವಶಿ, ಮೇನಕೆ, ಶೂರ್ಪನಖಿ, ಅಂಬೆ, ಪೂತನಿ, ದ್ರೌಪದಿ, ದೇವಿ ಮೊದಲಾದ ಪಾತ್ರಗಳನ್ನು ಇವರು ನಿರ್ವಹಿಸಿ “ನಾಟ್ಯರಾಣಿ  ಶಾಂತಲೆ” ಬಿರುದನ್ನು ಪಡೆದಿರುತ್ತಾರೆ. ಬೇಲೂರಿನ ಶಿಲಾಬಾಲಿಕೆಯ ಅಂಗಭAಗಿಗಳನ್ನು ಅವರು ಬೇಲೂರಿಗೆ ಹೋಗಿ ಸ್ವತಃ ಅಭ್ಯಾಸ ಮಾಡಿ ಯಕ್ಷಗಾನದಲ್ಲಿ ಅಳವಡಿಸಿಕೊಂಡಿದ್ದರು. ಯಕ್ಷರಂಗದ ಶಿಲಾಬಾಲಿಕೆ ಎಂದೇ ಅವರು ಚಿರಪರಿಚಿತರಾಗಿದ್ದರು.
ಕರ್ನಾಟಕ ರಾಜ್ಯಪ್ರಶಸ್ತಿ, ಜಾನಪದ ಅಕಾಡೆಮಿ ಪ್ರಶಸ್ತಿ, ಯಕ್ಷಮಂಗಳ ಪ್ರಶಸ್ತಿ, ಯಕ್ಷಕಲಾನಿಧಿ ಪ್ರಶಸ್ತಿ, ದೇರಾಜೆ ಸೀತಾರಾಮಯ್ಯ ಪ್ರಶಸ್ತಿ, ಶಂಕರನಾರಾಯಣ ಸಾಮಗ ಪ್ರಶಸ್ತಿ, ಕುರಿಯವಿಠಲಶಾಸ್ತ್ರಿ ಪ್ರಶಸ್ತಿ, ದೇರಾಜೆ ಪ್ರಶಸ್ತಿ ಮೊದಲಾದ ಹಲವು ಪ್ರಶಸ್ತಿ-ಪುರಸ್ಕಾರಗಳಿಂದ ಗೌರವಿಸಲ್ಪಟ್ಟಿದ್ದಾರೆ.
ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಅವರ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿ, ಅವರ ಆತ್ಮಕ್ಕೆ ಚಿರಶಾಂತಿಯನ್ನು ಕೋರಿದ್ದಾರೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅರಣ್ಯ ಭೂಮಿಯನ್ನು ಕೃಷಿ ಭೂಮಿಯನ್ನಾಗಿ ಪರಿವರ್ತನೆ : ಸಚಿವ ಕೃಷ್ಣ ಬೈರೇಗೌಡ

ಕೃಷಿ ಭೂಮಿಯ ಲಭ್ಯತೆ ಕಡಿಮೆಯಾಗಿ ಸಂಕಷ್ಟದಲ್ಲಿರುವ ರೈತರಿಗಾಗಿ ಸರ್ಕಾರವು ಅರಣ್ಯ ಭೂಮಿಯನ್ನು ಕೃಷಿ…

5 hours ago

ದೇಹವು ಆರೋಗ್ಯವಾಗಿದೆ ಎನ್ನಲು ಈ ಸಂಕೇತವೇ ಸಾಕು..

ಯಾವುದೇ ಕಾಯಿಲೆಗಳಿಲ್ಲದೆ ಆರೋಗ್ಯವಂತರಾಗಿರಲು ಎಲ್ಲರೂ ಇಷ್ಟಪಡುತ್ತಾರೆ. ಒಂದು ವೇಳೆ ಆರೋಗ್ಯ ಕೆಟ್ಟರೆ ಜೀವನವೇ…

5 hours ago

ಹೊಸ ರೇಷನ್ ಕಾರ್ಡ್ ಅನುಮೋದನೆ ಪ್ರಾರಂಭ | 2026 ಮಾರ್ಚ್ ವರೆಗೆ ಅವಕಾಶ

ಹೊಸ ರೇಷನ್ ಕಾರ್ಡ್ ಅನುಮೋದನೆ ಪ್ರಾರಂಭವಾಗಿದ್ದು 2026 ಮಾರ್ಚ್ ವರೆಗೆ ಅವಕಾಶ ಕರ್ನಾಟಕ…

5 hours ago

ಸ್ವಾವಲಂಬಿ ಸಾರಥಿ ಯೋಜನೆ | ಆಟೋ ಗೂಡ್ಸ್ ವಾಹನ ಖರೀದಿಗೆ ರೂ.4 ಲಕ್ಷ ಸಹಾಯಧನ

ಟ್ಯಾಕ್ಸಿ, ಆಟೋ ಟ್ಯಾಕ್ಟರ್, ಗೂಡ್ಸ್ ವಾಹನದ ಡ್ರೈವರ್ ಆಗಿದ್ದರೂ ಸ್ವಂತ ವಾಹನವಿಲ್ಲ ಎಂಬ…

5 hours ago

ಕ್ಯಾನ್ಸರ್ ಗುಣಪಡಿಸಲು ಗೋವಿನ ಉತ್ಪನ್ನಗಳು | ಮಧ್ಯಪ್ರದೇಶ ಸರ್ಕಾರ ಸಂಶೋಧನೆಗೆ 3.5 ಕೋಟಿ ಖರ್ಚು ಮಾಡಿದ ಹಣ ಎಲ್ಲಿ?

ಮಧ್ಯಪ್ರದೇಶ ಸರ್ಕಾರದಿಂದ ಅನುದಾನಿತ ಸಂಶೋಧನಾ ಉಪಕ್ರಮವು, ಸಾಂಪ್ರದಾಯಿಕ ಹಸು ಆಧಾರಿತ ಸಿದ್ಧತೆಗಳನ್ನು ಬಳಸಿಕೊಂಡು…

5 hours ago

ಭಾರತದ 44% ನಗರಗಳು ದೀರ್ಘಕಾಲದ ವಾಯು ಮಾಲಿನ್ಯ ಸಂಕಟದಲ್ಲಿ| CREA ಉಪಗ್ರಹ ಅಧ್ಯಯನದ ಶಾಕಿಂಗ್ ಬಹಿರಂಗ

ಉಪಗ್ರಹ ದತ್ತಾಂಶ ಆಧಾರಿತ CREA ವಿಶ್ಲೇಷಣೆಯ ಪ್ರಕಾರ, ಭಾರತದ 4,041 ನಗರಗಳಲ್ಲಿ 1,787…

5 hours ago