ಯಕ್ಷಗಾನ ರಂಗದ ಹಾಸ್ಯ ಕಲಾವಿದರಾಗಿ ಪ್ರಸಿದ್ಧರಾಗಿದ್ದ ಪೆರುವಡಿ ನಾರಾಯಣ ಭಟ್ (96) ಮಂಗಳವಾರ ಪುತ್ತೂರು ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಪುತ್ತೂರಿನ ಬಪ್ಪಳಿಗೆ ತೆಂಕಿಲ ನಿವಾಸಿಯಾಗಿದ್ದ ನಾರಾಯಣ ಭಟ್ ಅವರು ಯಕ್ಷಗಾನದಲ್ಲಿ ಹಾಸ್ಯ ವಿಭಾಗವನ್ನು ಶ್ರೀಮಂತಗೊಳಿಸಿ ಹಾಸ್ಯಗಾರ ಸ್ಥಾನಕ್ಕೆ ಗೌರವವನ್ನು ತಂದುಕೊಟ್ಟು ಅಪೂರ್ವ ಕಲಾವಿದರಾಗಿದ್ದರು. ತನ್ನ ಎಂಟನೇ ವರ್ಷದಿಂದ ಯಕ್ಷರಂಗದಲ್ಲಿ ಭಾಗವಹಿಲು ಪ್ರಾರಂಭಿಸಿದ್ದರು.
1927 ರಲ್ಲಿ ಪದ್ಯಾಣ ಮನೆತನದಲ್ಲಿ ಜನಿಸಿದ ನಾರಾಯಣ ಭಟ್ಟರು ಧರ್ಮಸ್ಥಳ, ಸುರತ್ಕಲ್, ಕದ್ರಿ, ನಂದಾವರ, ಅರುವ, ಕುಂಬಳೆ, ಬಪ್ಪನಾಡು ಮೊದಲಾದ ಮೇಳಗಳಲ್ಲಿ ತಿರುಗಾಟ ನಡೆಸಿದರು. 1954ರಲ್ಲಿ ಮುಲ್ಕಿ ಮೇಳದ ಸಂಚಾಲಕರಾಗಿ ಶ್ರೀ ಪೆರುವಡಿ ನಾರಾಯಣ ಭಟ್ಟರು ಸದ್ರಿ ಮೇಳವನ್ನು 11 ವರ್ಷಗಳ ಕಾಲ ಮುನ್ನಡೆಸಿದ್ದರು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel