ಯಕ್ಷಗಾನ ರಂಗದ ಹಾಸ್ಯ ಕಲಾವಿದ ಪೆರುವಡಿ ನಾರಾಯಣ ಭಟ್‌ ಇನ್ನಿಲ್ಲ |

October 31, 2023
6:06 PM

ಯಕ್ಷಗಾನ ರಂಗದ ಹಾಸ್ಯ ಕಲಾವಿದರಾಗಿ ಪ್ರಸಿದ್ಧರಾಗಿದ್ದ ಪೆರುವಡಿ ನಾರಾಯಣ ಭಟ್ (96) ಮಂಗಳವಾರ ಪುತ್ತೂರು ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಪುತ್ತೂರಿನ ಬಪ್ಪಳಿಗೆ ತೆಂಕಿಲ ನಿವಾಸಿಯಾಗಿದ್ದ ನಾರಾಯಣ ಭಟ್‌ ಅವರು ಯಕ್ಷಗಾನದಲ್ಲಿ ಹಾಸ್ಯ ವಿಭಾಗವನ್ನು ಶ್ರೀಮಂತಗೊಳಿಸಿ ಹಾಸ್ಯಗಾರ ಸ್ಥಾನಕ್ಕೆ ಗೌರವವನ್ನು ತಂದುಕೊಟ್ಟು ಅಪೂರ್ವ  ಕಲಾವಿದರಾಗಿದ್ದರು. ತನ್ನ ಎಂಟನೇ ವರ್ಷದಿಂದ ಯಕ್ಷರಂಗದಲ್ಲಿ ಭಾಗವಹಿಲು ಪ್ರಾರಂಭಿಸಿದ್ದರು.

1927 ರಲ್ಲಿ ಪದ್ಯಾಣ ಮನೆತನದಲ್ಲಿ ಜನಿಸಿದ ನಾರಾಯಣ ಭಟ್ಟರು ಧರ್ಮಸ್ಥಳ, ಸುರತ್ಕಲ್, ಕದ್ರಿ, ನಂದಾವರ, ಅರುವ, ಕುಂಬಳೆ, ಬಪ್ಪನಾಡು ಮೊದಲಾದ ಮೇಳಗಳಲ್ಲಿ ತಿರುಗಾಟ ನಡೆಸಿದರು. 1954ರಲ್ಲಿ ಮುಲ್ಕಿ ಮೇಳದ ಸಂಚಾಲಕರಾಗಿ ಶ್ರೀ ಪೆರುವಡಿ ನಾರಾಯಣ ಭಟ್ಟರು ಸದ್ರಿ ಮೇಳವನ್ನು 11 ವರ್ಷಗಳ ಕಾಲ ಮುನ್ನಡೆಸಿದ್ದರು.

Advertisement
Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅರಣ್ಯ ಭೂಮಿಯನ್ನು ಕೃಷಿ ಭೂಮಿಯನ್ನಾಗಿ ಪರಿವರ್ತನೆ : ಸಚಿವ ಕೃಷ್ಣ ಬೈರೇಗೌಡ
January 10, 2026
10:35 PM
by: ರೂರಲ್‌ ಮಿರರ್ ಸುದ್ದಿಜಾಲ
ದೇಹವು ಆರೋಗ್ಯವಾಗಿದೆ ಎನ್ನಲು ಈ ಸಂಕೇತವೇ ಸಾಕು..
January 10, 2026
10:33 PM
by: ರೂರಲ್‌ ಮಿರರ್ ಸುದ್ದಿಜಾಲ
ಹೊಸ ರೇಷನ್ ಕಾರ್ಡ್ ಅನುಮೋದನೆ ಪ್ರಾರಂಭ | 2026 ಮಾರ್ಚ್ ವರೆಗೆ ಅವಕಾಶ
January 10, 2026
10:30 PM
by: ರೂರಲ್‌ ಮಿರರ್ ಸುದ್ದಿಜಾಲ
ಸ್ವಾವಲಂಬಿ ಸಾರಥಿ ಯೋಜನೆ | ಆಟೋ ಗೂಡ್ಸ್ ವಾಹನ ಖರೀದಿಗೆ ರೂ.4 ಲಕ್ಷ ಸಹಾಯಧನ
January 10, 2026
10:28 PM
by: ರೂರಲ್‌ ಮಿರರ್ ಸುದ್ದಿಜಾಲ

You cannot copy content of this page - Copyright -The Rural Mirror