Advertisement
MIRROR FOCUS

ಮೇ.11 ವಳಲಂಬೆಯಲ್ಲಿ ಯಕ್ಷಗಾನ ಬಯಲಾಟ | ಕಲಾವಿದ ಉಬರಡ್ಕ ಉಮೇಶ್‌ ಶೆಟ್ಟಿಯವರಿಗೆ ಗೌರವಾರ್ಪಣೆ |

Share

ಸುಳ್ಯ ತಾಲೂಕಿನ ಗುತ್ತಿಗಾರಿನ ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವಠಾರದಲ್ಲಿ ಯಕ್ಷ ಕಲಾಭಿಮಾನಿ ಮಿತ್ರರು ಎಲಿಮಲೆ-ಗುತ್ತಿಗಾರು ಇವರ ವತಿಯಿಂದ ಹನುಮಗಿರಿ ಮೇಳದ ಯಕ್ಷಗಾನ ಬಯಲಾಟವು ಮೇ.11 ರಂದು ಸಂಜೆ 6 ಗಂಟೆಯಿಂದ ನಡೆಯಲಿದೆ.  ಇದೇ ಸಂದರ್ಭ ಯಕ್ಷಗಾನ ಕಲಾವಿದ ಉಬರಡ್ಕ ಉಮೇಶ್‌ ಶೆಟ್ಟಿ ಅವರಿಗೆ ಗೌರವಾರ್ಪಣೆ ನಡೆಯಲಿದೆ.

ಯಕ್ಷ ಕಲಾಭಿಮಾನಿ ಮಿತ್ರರು ಎಲಿಮಲೆ-ಗುತ್ತಿಗಾರು ಇವರ ವತಿಯಿಂದ ಕಲೆಯ ಪ್ರೋತ್ಸಾಹದ ನಿಟ್ಟಿನಲ್ಲಿ ಕಳೆದ ಕೆಲವು ವರ್ಷಗಳಿಂದ ವಳಲಂಬೆಯಲ್ಲಿ ಯಕ್ಷಗಾನ ಬಯಲಾಟ ಕಾರ್ಯಕ್ರಮ ನಡೆಯುತ್ತಿದೆ. ಇದೇ ಸಂದರ್ಭ ಒಬ್ಬ  ಕಲಾವಿದರನ್ನು ಗುರುತಿಸಿ, ಗೌರವಿಸುವ ಕಾರ್ಯಕ್ರಮವೂ ನಡೆಯುತ್ತಿದೆ. ಈ  ಬಾರಿ ಯಕ್ಷಗಾನ ಕಲಾವಿದ ಉಬರಡ್ಕ ಉಮೇಶ್‌ ಶೆಟ್ಟಿ ಅವರನ್ನು ಗೌರವಿಸಲಾಗುತ್ತಿದೆ.

ಉಬರಡ್ಕ ಉಮೇಶ್‌ ಶೆಟ್ಟಿ ಅವರು ದಿ, ಕುರಿಯ ವಿಠಲ ಶಾಸ್ತ್ರೀ ಮತ್ತು ದಿ, ಪಡ್ರೆ ಚಂದು ಅವರಿಂದ ಯಕ್ಷಗಾನ ಕಲೆಯನ್ನು ಅಭ್ಯಸಿಸಿದ್ದರು. ಧರ್ಮಸ್ಥಳ ಲಲಿತಾ ಕಲಾಕೇಂದ್ರದ ಮೊದಲನೇ ವರ್ಷದ ವಿದ್ಯಾರ್ಥಿಯಾಗಿರುವ ಉಮೇಶ್‌ ಶೆಟ್ಟಿ ಅವರು 1972ರಲ್ಲಿ ಶ್ರೀ ಧರ್ಮಸ್ಥಳ ಮೇಳ ಮೂಲಕ ಕಲಾಸೇವೆ ಆರಂಭಿಸಿ 2015 ರ ವರೆಗೆ ಅಂದರೆ ಸುಮಾರು 44 ವರ್ಷ ಕಲಾಸೇವೆ ನಡೆಸಿದ್ದಾರೆ. ಸದ್ಯ ಶ್ರೀ ಹನುಮಗಿರಿ ಮೇಳದಲ್ಲಿ ಅತಿಥಿ ಕಲಾವಿದ.

ತನ್ನ ಸೋದರ ಮಾವನವರಾದ ದಿ. ಅಳಿಕೆ ರಾಮಯ್ಯ ರೈ ಅವರ ಪ್ರೇರಣೆಯಂತೆ ಯಕ್ಷಗಾನಕ್ಕೆ ಪಾದಾರ್ಪಣೆ ಮಾಡಿರುವ ಉಮೇಶ್‌ ಶೆಟ್ಟಿ ಅವರು, ಕಡತೋಕ ಭಾಗವತರು ಮತ್ತು ಚಿಪ್ಪಾರು ಬಲ್ಲಾಳರ  ಮಾರ್ಗದರ್ಶನದಲ್ಲಿ ಅಣ್ಣಪ್ಪ, ಕಂಸ, ಹಿರಣ್ಯಕಶ್ಯಪ, ದ್ರೋಣ, ಅತಿಕಾಯ, ಹನೂಮಂತ ಮೊದಲಾದ ವೇಷಗಳಿಗೆ ತನ್ನದೆ ಛಾಪು ಭಿತ್ತಿ ಮೇರು ಕಲಾವಿದರಾದರು. ಯಕ್ಷಗಾನದಿಂದ ಆರ್ಥಿಕವಾಗಿ ಗಳಿಸಿದ್ದು ಕಡಿಮೆ. ಜನಪ್ರಿಯತೆ ಮತ್ತು ಪ್ರಶಸ್ತಿಗಳ ಬೆನ್ನು ಹತ್ತಿದವರಲ್ಲ. ಸಹೃದಯ ಕಲಾಭಿಮಾನಿಗಳೇ ಅವರು ಸಂಪಾದಿಸಿದ ಆಸ್ತಿ. 2015 ರಲ್ಲಿ ವೃತ್ತಿಪರ ಮೇಳದಿಂದ ತಿರುಗಾಟಕ್ಕೆ ನಿವೃತ್ತಿ ಹೇಳಿದ್ದಾರೆ. ಇವರ ಕಲಾಸೇವೆಗೆ ಈಗಾಗಲೇ 100 ಅಧಿಕ ಸನ್ಮಾನ, ಗೌರವಗಳು ಸಂದಿವೆ.

ಯಕ್ಷಗಾನ ಬಯಲಾಟ
ಸುಳ್ಯ ತಾಲೂಕಿನ ಗುತ್ತಿಗಾರಿನ ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವಠಾರದಲ್ಲಿ ಯಕ್ಷ ಕಲಾಭಿಮಾನಿ ಮಿತ್ರರು ಎಲಿಮಲೆ-ಗುತ್ತಿಗಾರು ಇವರ ವತಿಯಿಂದ ಹನುಮಗಿರಿ ಮೇಳದಿಂದ ವೇದೋದ್ಧರಣ-ಶಿವ ಪಂಚಾಕ್ಷರಿ ಮಹಿಮೆ ಎಂಬ ಯಕ್ಷಗಾನ ಬಯಲಾಟವು ಮೇ.11 ರಂದು ಸಂಜೆ 6 ಗಂಟೆಯಿಂದ ನಡೆಯಲಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 05-03-2026 | ಕರ್ನಾಟಕದಲ್ಲಿ ಬಿಸಿಲಿನ ಅಬ್ಬರ ಶುರು..! ಇನ್ನು 10 ದಿನ ಮಳೆಯ ಲಕ್ಷಣ ಇಲ್ಲ

ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…

1 day ago

ಅಡಿಕೆ ಮಾರುಕಟ್ಟೆ | ಕೆಲವು ಮಾರುಕಟ್ಟೆಗಳಲ್ಲಿ ಏರಿಕೆ, ಕೆಲವು ಸ್ಥಿರ – ಸಿಂಗಲ್‌ ಚೋಲ್‌ ಗೆ ಬೇಡಿಕೆ..! | ರಬ್ಬರ್ ದರದಲ್ಲಿ ಸ್ವಲ್ಪ ಕುಸಿತ

ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್‌, ಟಿಎಸ್‌ಎಸ್‌, ತುಮ್ಕೋಸ್‌, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…

1 day ago

ಕಾಡಾನೆ ನಿಯಂತ್ರಣಕ್ಕೆ ರಾಜ್ಯದ ಕ್ರಮ : ಎಲಿಫೆಂಟ್ ಟಾಸ್ಕ್ ಫೋರ್ಸ್ ರಚನೆ

ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…

1 day ago

ಕಾಡಾನೆ ಹಾವಳಿ ತಡೆಗೆ ಸರ್ಕಾರದ ಕ್ರಮ : ಕೊಪ್ಪ ಅರಣ್ಯ ವಿಭಾಗಕ್ಕೆ ₹12.77 ಕೋಟಿ, ರೈಲ್ವೆ ಬ್ಯಾರಿಕೇಡ್ ಅಳವಡಿಕೆ

ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…

1 day ago

ಭವಿಷ್ಯದ ಬಾಳೆ ಬೆಳೆ ಉಳಿಸುವ ಗುಟ್ಟು ಕಾಡು ಬಾಳೆ ಜಾತಿಯಲ್ಲಿ!

ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…

2 days ago

ಕೃಷಿ ಮಾರುಕಟ್ಟೆ ವರದಿ | ಅಡಿಕೆ ಮಾರುಕಟ್ಟೆಯಲ್ಲಿ ಮಿಶ್ರ ಫಲ…!

ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…

2 days ago