MIRROR FOCUS

ಮೇ.11 ವಳಲಂಬೆಯಲ್ಲಿ ಯಕ್ಷಗಾನ ಬಯಲಾಟ | ಕಲಾವಿದ ಉಬರಡ್ಕ ಉಮೇಶ್‌ ಶೆಟ್ಟಿಯವರಿಗೆ ಗೌರವಾರ್ಪಣೆ |

Share

ಸುಳ್ಯ ತಾಲೂಕಿನ ಗುತ್ತಿಗಾರಿನ ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವಠಾರದಲ್ಲಿ ಯಕ್ಷ ಕಲಾಭಿಮಾನಿ ಮಿತ್ರರು ಎಲಿಮಲೆ-ಗುತ್ತಿಗಾರು ಇವರ ವತಿಯಿಂದ ಹನುಮಗಿರಿ ಮೇಳದ ಯಕ್ಷಗಾನ ಬಯಲಾಟವು ಮೇ.11 ರಂದು ಸಂಜೆ 6 ಗಂಟೆಯಿಂದ ನಡೆಯಲಿದೆ.  ಇದೇ ಸಂದರ್ಭ ಯಕ್ಷಗಾನ ಕಲಾವಿದ ಉಬರಡ್ಕ ಉಮೇಶ್‌ ಶೆಟ್ಟಿ ಅವರಿಗೆ ಗೌರವಾರ್ಪಣೆ ನಡೆಯಲಿದೆ.

Advertisement

ಯಕ್ಷ ಕಲಾಭಿಮಾನಿ ಮಿತ್ರರು ಎಲಿಮಲೆ-ಗುತ್ತಿಗಾರು ಇವರ ವತಿಯಿಂದ ಕಲೆಯ ಪ್ರೋತ್ಸಾಹದ ನಿಟ್ಟಿನಲ್ಲಿ ಕಳೆದ ಕೆಲವು ವರ್ಷಗಳಿಂದ ವಳಲಂಬೆಯಲ್ಲಿ ಯಕ್ಷಗಾನ ಬಯಲಾಟ ಕಾರ್ಯಕ್ರಮ ನಡೆಯುತ್ತಿದೆ. ಇದೇ ಸಂದರ್ಭ ಒಬ್ಬ  ಕಲಾವಿದರನ್ನು ಗುರುತಿಸಿ, ಗೌರವಿಸುವ ಕಾರ್ಯಕ್ರಮವೂ ನಡೆಯುತ್ತಿದೆ. ಈ  ಬಾರಿ ಯಕ್ಷಗಾನ ಕಲಾವಿದ ಉಬರಡ್ಕ ಉಮೇಶ್‌ ಶೆಟ್ಟಿ ಅವರನ್ನು ಗೌರವಿಸಲಾಗುತ್ತಿದೆ.

ಉಬರಡ್ಕ ಉಮೇಶ್‌ ಶೆಟ್ಟಿ ಅವರು ದಿ, ಕುರಿಯ ವಿಠಲ ಶಾಸ್ತ್ರೀ ಮತ್ತು ದಿ, ಪಡ್ರೆ ಚಂದು ಅವರಿಂದ ಯಕ್ಷಗಾನ ಕಲೆಯನ್ನು ಅಭ್ಯಸಿಸಿದ್ದರು. ಧರ್ಮಸ್ಥಳ ಲಲಿತಾ ಕಲಾಕೇಂದ್ರದ ಮೊದಲನೇ ವರ್ಷದ ವಿದ್ಯಾರ್ಥಿಯಾಗಿರುವ ಉಮೇಶ್‌ ಶೆಟ್ಟಿ ಅವರು 1972ರಲ್ಲಿ ಶ್ರೀ ಧರ್ಮಸ್ಥಳ ಮೇಳ ಮೂಲಕ ಕಲಾಸೇವೆ ಆರಂಭಿಸಿ 2015 ರ ವರೆಗೆ ಅಂದರೆ ಸುಮಾರು 44 ವರ್ಷ ಕಲಾಸೇವೆ ನಡೆಸಿದ್ದಾರೆ. ಸದ್ಯ ಶ್ರೀ ಹನುಮಗಿರಿ ಮೇಳದಲ್ಲಿ ಅತಿಥಿ ಕಲಾವಿದ.

ತನ್ನ ಸೋದರ ಮಾವನವರಾದ ದಿ. ಅಳಿಕೆ ರಾಮಯ್ಯ ರೈ ಅವರ ಪ್ರೇರಣೆಯಂತೆ ಯಕ್ಷಗಾನಕ್ಕೆ ಪಾದಾರ್ಪಣೆ ಮಾಡಿರುವ ಉಮೇಶ್‌ ಶೆಟ್ಟಿ ಅವರು, ಕಡತೋಕ ಭಾಗವತರು ಮತ್ತು ಚಿಪ್ಪಾರು ಬಲ್ಲಾಳರ  ಮಾರ್ಗದರ್ಶನದಲ್ಲಿ ಅಣ್ಣಪ್ಪ, ಕಂಸ, ಹಿರಣ್ಯಕಶ್ಯಪ, ದ್ರೋಣ, ಅತಿಕಾಯ, ಹನೂಮಂತ ಮೊದಲಾದ ವೇಷಗಳಿಗೆ ತನ್ನದೆ ಛಾಪು ಭಿತ್ತಿ ಮೇರು ಕಲಾವಿದರಾದರು. ಯಕ್ಷಗಾನದಿಂದ ಆರ್ಥಿಕವಾಗಿ ಗಳಿಸಿದ್ದು ಕಡಿಮೆ. ಜನಪ್ರಿಯತೆ ಮತ್ತು ಪ್ರಶಸ್ತಿಗಳ ಬೆನ್ನು ಹತ್ತಿದವರಲ್ಲ. ಸಹೃದಯ ಕಲಾಭಿಮಾನಿಗಳೇ ಅವರು ಸಂಪಾದಿಸಿದ ಆಸ್ತಿ. 2015 ರಲ್ಲಿ ವೃತ್ತಿಪರ ಮೇಳದಿಂದ ತಿರುಗಾಟಕ್ಕೆ ನಿವೃತ್ತಿ ಹೇಳಿದ್ದಾರೆ. ಇವರ ಕಲಾಸೇವೆಗೆ ಈಗಾಗಲೇ 100 ಅಧಿಕ ಸನ್ಮಾನ, ಗೌರವಗಳು ಸಂದಿವೆ.

ಯಕ್ಷಗಾನ ಬಯಲಾಟ
ಸುಳ್ಯ ತಾಲೂಕಿನ ಗುತ್ತಿಗಾರಿನ ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವಠಾರದಲ್ಲಿ ಯಕ್ಷ ಕಲಾಭಿಮಾನಿ ಮಿತ್ರರು ಎಲಿಮಲೆ-ಗುತ್ತಿಗಾರು ಇವರ ವತಿಯಿಂದ ಹನುಮಗಿರಿ ಮೇಳದಿಂದ ವೇದೋದ್ಧರಣ-ಶಿವ ಪಂಚಾಕ್ಷರಿ ಮಹಿಮೆ ಎಂಬ ಯಕ್ಷಗಾನ ಬಯಲಾಟವು ಮೇ.11 ರಂದು ಸಂಜೆ 6 ಗಂಟೆಯಿಂದ ನಡೆಯಲಿದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ |14.04.2025 | ಕರಾವಳಿ ಕೆಲವು ಕಡೆ ಗುಡುಗು ಸಹಿತ ಮಳೆ | ಎ.19ರ ನಂತರ ಮಳೆಯ ಪ್ರಮಾಣ ತೀರಾ ಕಡಿಮೆ |

15.04.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

3 hours ago

ಅನುಭವದ ಕೃಷಿಯಿಂದ ಡಾಟಾ ಆಧಾರಿತ “ಸ್ಮಾರ್ಟ್ ಫಾರ್ಮಿಂಗ್ “‌ ಕಡೆಗೆ ಆಧುನಿಕ ಕೃಷಿ

ಸ್ಮಾರ್ಟ್ ಕೃಷಿಯು ಕೃಷಿ ವಲಯದಲ್ಲಿ ಕ್ರಾಂತಿಕಾರಕ ಬದಲಾವಣೆ ತರುತ್ತಿದೆ. ತಂತ್ರಜ್ಞಾನ, ಯಾಂತ್ರೀಕರಣ ಮತ್ತು…

8 hours ago

ಜೂ.30 ರಿಂದ ಮಂಡ್ಯ ಮೈಶುಗರ್ ಕಾರ್ಖಾನೆಯಲ್ಲಿ  ಕಬ್ಬು ಅರೆಯುವ ಪ್ರಕ್ರಿಯೆ ಆರಂಭ

ಮಂಡ್ಯ ಮೈಷುಗರ್ ಕಾರ್ಖಾನೆಯಲ್ಲಿ ಪ್ರಸಕ್ತ ಸಾಲಿನ ಕಬ್ಬು ಅರೆಯುವ ಪ್ರಕ್ರಿಯೆ ಜೂನ್ 30ರಿಂದ…

9 hours ago

ಸಹಕಾರ ಕ್ಷೇತ್ರದಲ್ಲಿ ಬಹುದೊಡ್ಡ ಕ್ರಾಂತಿ | ಸಚಿವ ಅಮಿತ್‌ ಶಾ ಹೇಳಿಕೆ

ಇಂದು ಸಹಕಾರ ಕ್ಷೇತ್ರದಲ್ಲಿ ಬಹುದೊಡ್ಡ ಕ್ರಾಂತಿಯಾಗುತ್ತಿದೆ. 8 ಲಕ್ಷಕ್ಕೂ ಅಧಿಕ ಸಹಕಾರಿ ಸಂಘಗಳು…

9 hours ago

ಈ 5 ವಸ್ತು ಮನೆಯ ದಕ್ಷಿಣ ದಿಕ್ಕಿನಲ್ಲಿ ಇಟ್ಟರೆ ಶ್ರೀಮಂತರಾಗುವುದು ಗ್ಯಾರಂಟಿ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

9 hours ago

ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಮಳೆ ಸಂಭವ | ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು, ಶಿವಮೊಗ್ಗ, ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ…

16 hours ago