MIRROR FOCUS

ಮೇ.11 ವಳಲಂಬೆಯಲ್ಲಿ ಯಕ್ಷಗಾನ ಬಯಲಾಟ | ಕಲಾವಿದ ಉಬರಡ್ಕ ಉಮೇಶ್‌ ಶೆಟ್ಟಿಯವರಿಗೆ ಗೌರವಾರ್ಪಣೆ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಳ್ಯ ತಾಲೂಕಿನ ಗುತ್ತಿಗಾರಿನ ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವಠಾರದಲ್ಲಿ ಯಕ್ಷ ಕಲಾಭಿಮಾನಿ ಮಿತ್ರರು ಎಲಿಮಲೆ-ಗುತ್ತಿಗಾರು ಇವರ ವತಿಯಿಂದ ಹನುಮಗಿರಿ ಮೇಳದ ಯಕ್ಷಗಾನ ಬಯಲಾಟವು ಮೇ.11 ರಂದು ಸಂಜೆ 6 ಗಂಟೆಯಿಂದ ನಡೆಯಲಿದೆ.  ಇದೇ ಸಂದರ್ಭ ಯಕ್ಷಗಾನ ಕಲಾವಿದ ಉಬರಡ್ಕ ಉಮೇಶ್‌ ಶೆಟ್ಟಿ ಅವರಿಗೆ ಗೌರವಾರ್ಪಣೆ ನಡೆಯಲಿದೆ.

Advertisement
Advertisement

ಯಕ್ಷ ಕಲಾಭಿಮಾನಿ ಮಿತ್ರರು ಎಲಿಮಲೆ-ಗುತ್ತಿಗಾರು ಇವರ ವತಿಯಿಂದ ಕಲೆಯ ಪ್ರೋತ್ಸಾಹದ ನಿಟ್ಟಿನಲ್ಲಿ ಕಳೆದ ಕೆಲವು ವರ್ಷಗಳಿಂದ ವಳಲಂಬೆಯಲ್ಲಿ ಯಕ್ಷಗಾನ ಬಯಲಾಟ ಕಾರ್ಯಕ್ರಮ ನಡೆಯುತ್ತಿದೆ. ಇದೇ ಸಂದರ್ಭ ಒಬ್ಬ  ಕಲಾವಿದರನ್ನು ಗುರುತಿಸಿ, ಗೌರವಿಸುವ ಕಾರ್ಯಕ್ರಮವೂ ನಡೆಯುತ್ತಿದೆ. ಈ  ಬಾರಿ ಯಕ್ಷಗಾನ ಕಲಾವಿದ ಉಬರಡ್ಕ ಉಮೇಶ್‌ ಶೆಟ್ಟಿ ಅವರನ್ನು ಗೌರವಿಸಲಾಗುತ್ತಿದೆ.

ಉಬರಡ್ಕ ಉಮೇಶ್‌ ಶೆಟ್ಟಿ ಅವರು ದಿ, ಕುರಿಯ ವಿಠಲ ಶಾಸ್ತ್ರೀ ಮತ್ತು ದಿ, ಪಡ್ರೆ ಚಂದು ಅವರಿಂದ ಯಕ್ಷಗಾನ ಕಲೆಯನ್ನು ಅಭ್ಯಸಿಸಿದ್ದರು. ಧರ್ಮಸ್ಥಳ ಲಲಿತಾ ಕಲಾಕೇಂದ್ರದ ಮೊದಲನೇ ವರ್ಷದ ವಿದ್ಯಾರ್ಥಿಯಾಗಿರುವ ಉಮೇಶ್‌ ಶೆಟ್ಟಿ ಅವರು 1972ರಲ್ಲಿ ಶ್ರೀ ಧರ್ಮಸ್ಥಳ ಮೇಳ ಮೂಲಕ ಕಲಾಸೇವೆ ಆರಂಭಿಸಿ 2015 ರ ವರೆಗೆ ಅಂದರೆ ಸುಮಾರು 44 ವರ್ಷ ಕಲಾಸೇವೆ ನಡೆಸಿದ್ದಾರೆ. ಸದ್ಯ ಶ್ರೀ ಹನುಮಗಿರಿ ಮೇಳದಲ್ಲಿ ಅತಿಥಿ ಕಲಾವಿದ.

ತನ್ನ ಸೋದರ ಮಾವನವರಾದ ದಿ. ಅಳಿಕೆ ರಾಮಯ್ಯ ರೈ ಅವರ ಪ್ರೇರಣೆಯಂತೆ ಯಕ್ಷಗಾನಕ್ಕೆ ಪಾದಾರ್ಪಣೆ ಮಾಡಿರುವ ಉಮೇಶ್‌ ಶೆಟ್ಟಿ ಅವರು, ಕಡತೋಕ ಭಾಗವತರು ಮತ್ತು ಚಿಪ್ಪಾರು ಬಲ್ಲಾಳರ  ಮಾರ್ಗದರ್ಶನದಲ್ಲಿ ಅಣ್ಣಪ್ಪ, ಕಂಸ, ಹಿರಣ್ಯಕಶ್ಯಪ, ದ್ರೋಣ, ಅತಿಕಾಯ, ಹನೂಮಂತ ಮೊದಲಾದ ವೇಷಗಳಿಗೆ ತನ್ನದೆ ಛಾಪು ಭಿತ್ತಿ ಮೇರು ಕಲಾವಿದರಾದರು. ಯಕ್ಷಗಾನದಿಂದ ಆರ್ಥಿಕವಾಗಿ ಗಳಿಸಿದ್ದು ಕಡಿಮೆ. ಜನಪ್ರಿಯತೆ ಮತ್ತು ಪ್ರಶಸ್ತಿಗಳ ಬೆನ್ನು ಹತ್ತಿದವರಲ್ಲ. ಸಹೃದಯ ಕಲಾಭಿಮಾನಿಗಳೇ ಅವರು ಸಂಪಾದಿಸಿದ ಆಸ್ತಿ. 2015 ರಲ್ಲಿ ವೃತ್ತಿಪರ ಮೇಳದಿಂದ ತಿರುಗಾಟಕ್ಕೆ ನಿವೃತ್ತಿ ಹೇಳಿದ್ದಾರೆ. ಇವರ ಕಲಾಸೇವೆಗೆ ಈಗಾಗಲೇ 100 ಅಧಿಕ ಸನ್ಮಾನ, ಗೌರವಗಳು ಸಂದಿವೆ.

ಯಕ್ಷಗಾನ ಬಯಲಾಟ
ಸುಳ್ಯ ತಾಲೂಕಿನ ಗುತ್ತಿಗಾರಿನ ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವಠಾರದಲ್ಲಿ ಯಕ್ಷ ಕಲಾಭಿಮಾನಿ ಮಿತ್ರರು ಎಲಿಮಲೆ-ಗುತ್ತಿಗಾರು ಇವರ ವತಿಯಿಂದ ಹನುಮಗಿರಿ ಮೇಳದಿಂದ ವೇದೋದ್ಧರಣ-ಶಿವ ಪಂಚಾಕ್ಷರಿ ಮಹಿಮೆ ಎಂಬ ಯಕ್ಷಗಾನ ಬಯಲಾಟವು ಮೇ.11 ರಂದು ಸಂಜೆ 6 ಗಂಟೆಯಿಂದ ನಡೆಯಲಿದೆ.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮುಂದಿನ 1 ತಿಂಗಳು ಈ 4 ರಾಶಿಯವರಿಗೆ ಸೂರ್ಯನಿಂದ ಬ್ಯಾಡ್‌ ಟೈಮ್

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 953515690

9 minutes ago

ಹೊಸರುಚಿ | ಹಲಸಿನ ಹಣ್ಣಿನ ಮೈಸೂರು ಪಾಕ್

ಹಲಸಿನ ಹಣ್ಣಿನ ಮೈಸೂರು ಪಾಕ್

16 minutes ago

ಅಕ್ರಮವಾಗಿ ಅಡಿಕೆ ಸಾಗಾಟ | ಮಿಜೋರಾಂನಲ್ಲಿ 386 ಚೀಲ ಅಡಿಕೆ ವಶಕ್ಕೆ ಪಡೆದ ಅಧಿಕಾರಿಗಳು

ಮಿಜೋರಾಂನ ಅಸ್ಸಾಂ ರೈಫಲ್ಸ್ ಸಿಬ್ಬಂದಿ ಮತ್ತು ಕಸ್ಟಮ್ಸ್ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ,…

10 hours ago

ಹವಾಮಾನ ವರದಿ | 13-06-2025 | ಕರಾವಳಿ ಜಿಲ್ಲೆಗಳಲ್ಲಿ ಸಾಮಾನ್ಯ ಮುಂಗಾರು ಮಳೆ | ಜೂ.19 ರಿಂದ ಮಳೆಯ ಪ್ರಮಾಣ ಕಡಿಮೆ ಸಾಧ್ಯತೆ |

ಜೂನ್ 14 ರಿಂದ ಕರಾವಳಿ ಜಿಲ್ಲೆಗಳಲ್ಲಿ ಸಾಮಾನ್ಯ ಮುಂಗಾರು ಮಳೆ ಮುಂದುವರಿಯಲಿದ್ದು, ಜೂನ್…

18 hours ago

ಕರಾವಳಿ ಹಾಗೂ ರಾಜ್ಯದ ಹಲವೆಡೆ ಧಾರಾಕಾರ ಮಳೆ |

ಕರಾವಳಿ ಹಾಗೂ ರಾಜ್ಯದ ಹಲವೆಡೆ ಮಳೆಯಾಗುತ್ತಿದೆ.ಉತ್ತರಕನ್ನಡ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ ಹಾಗೂ…

24 hours ago

ಈ ರಾಶಿಯವರ ಜಾತಕದಲ್ಲಿ ಗುರು ಬಲ | ಗಜಕೇಸರಿ ಯೋಗದಿಂದ ಸಕಲೈಶ್ವರ್ಯ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

1 day ago